ಕೋಲಾರ ಗಡಿಯಲ್ಲಿ ಮುಂದುವರೆದ ಕಾಡಾನೆ ಉಪಟಳ – ಅಪಾರ ಪ್ರಮಾಣದ ಬೆಳೆಗಳು ನಾಶ

Public TV
1 Min Read
Kolar Wild Elephant Crop Loss

ಕೋಲಾರ: ಜಿಲ್ಲೆಯ ಗಡಿಯಲ್ಲಿ ಕಾಡಾನೆಗಳ ಉಪಟಳ ಮುಂದುವರೆದಿದ್ದು, ಕಾಡಾನೆ (Wild Elephant) ಹಿಂಡು ದಾಳಿಯಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿದೆ.

ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ (Bangarpet) ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಸದ್ಯ ಆತಂಕದ ವಾತಾವರಣ ಇದ್ದು, ಭಯದಲ್ಲೆ ಜೀವನ ನಡೆಸುವ ಸ್ಥಿತಿ ಬಂದಿದೆ. ಕಳೆದೊಂದು ವಾರದಿಂದ ಕಾಡಂಚಿನ ಗ್ರಾಮಗಳ ರೈತರ ಜಮೀನುಗಳಿಗೆ ದಾಳಿ ಮಾಡಿರುವ ಕಾಡಾನೆಗಳ ಹಿಂಡು ರೈತರು ಬೆಳೆದ ಅಪಾರ ಪ್ರಮಾಣದ ಟೊಮ್ಯಾಟೊ, ರಾಗಿ, ಭತ್ತ, ಬಾಳೆ ಎಲ್ಲವನ್ನು ನಾಶ ಮಾಡಿವೆ. ಇದರಿಂದ ರೈತರು ಕಂಗೆಟ್ಟಿದ್ದಾರೆ. ಇದನ್ನೂ ಓದಿ: Tumakuru| ಹೊಸ ವರ್ಷಕ್ಕೆ ಕೇಕ್ ತರಲು ಹೋದ ಯುವಕ ಅಪಘಾತದಲ್ಲಿ ಸಾವು

Kolar Wild Elephant Crop Loss 1

ತಾಲೂಕಿನ ಕಾಡಂಚಿನ ಗ್ರಾಮಗಳಾದ ಭತ್ತಲಹಳ್ಳಿ, ತಳೂರು ಮತ್ತು ಸಾಕರಸನಹಳ್ಳಿ ಗ್ರಾಮಗಳಲ್ಲಿ ಬೆಳೆ (Crop Loss) ನಾಶವಾಗಿದೆ. ಭತ್ತಲಹಳ್ಳಿ ಗ್ರಾಮದ ಸುಬ್ರಮಣಿ, ತಳೂರು ಗ್ರಾಮದ ವೆಂಕಟೇಶ್, ಸಾಕರಸನಹಳ್ಳಿ ಗ್ರಾಮದ ಮಂಜುನಾಥ್ ಎಂಬವರ ರೈತರ ಬೆಳೆಗಳು ನಾಶವಾಗಿವೆ. ಇನ್ನೂ ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಹಿಂಡು ಪದೇಪದೆ ರೈತರ ಜಮೀನುಗಳಿಗೆ ಲಗ್ಗೆ ಇಡುತ್ತಲೇ ಇವೆ. ಇದನ್ನೂ ಓದಿ: ಮುಂಬೈ | 232 ಕೆಜಿ ಮಾದಕ ವಸ್ತು ಕಳ್ಳಸಾಗಾಣಿಕೆ ಕೇಸ್‌ – 8 ಪಾಕ್‌ ಪ್ರಜೆಗಳಿಗೆ 20 ವರ್ಷ ಜೈಲು

ಸದ್ಯ 3 ಕಿ.ಮೀ ಸೋಲಾರ್ ಫೆನ್ಸಿಂಗ್ ಅಳವಡಿಕೆ ಮಾಡದ ಕಾರಣ ಕಾಡಾನೆಗಳ ಹಿಂಡು ಪದೇ ಪದೇ ರೈತರ ಜಮೀನುಗಳಿಗೆ ಈ ಭಾಗದಲ್ಲಿ ಲಗ್ಗೆ ಇಡುತ್ತಿವೆ ಅನ್ನೋದು ರೈತರ ಆರೋಪವಾಗಿದೆ. ಇದನ್ನೂ ಓದಿ: ದಿ.ಮನಮೋಹನ್ ಸಿಂಗ್‌ಗೆ ಭಾರತ ರತ್ನ ನೀಡುವಂತೆ ಕಾಂಗ್ರೆಸ್ ಒತ್ತಡ

Share This Article