ಬೆಳ್ಳಂಬೆಳಗ್ಗೆ ರಾಮನಗರ ಟೌನ್ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ

Public TV
1 Min Read
Ramanagara Wild Elephant

– ಕಾಡಾನೆ ಕಂಡು ಕಾಲ್ಕಿತ್ತ ವಾಕಿಂಗ್‌ಗೆ ಬಂದಿದ್ದ ಮಂದಿ

ರಾಮನಗರ: ಜಿಲ್ಲೆಯಲ್ಲಿ ಕಾಡಾನೆಗಳ (Wild Elephant) ಉಪಟಳ ನಿರಂತರವಾಗಿ ಮುಂದುವರೆದಿದ್ದು, ಬೆಳ್ಳಂಬೆಳಗ್ಗೆ ರಾಮನಗರ ನಗರ (Ramanagara Town)  ವ್ಯಾಪ್ತಿಯಲ್ಲಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಹೆಚ್ಚಿಸಿವೆ.

ರಾಮನಗರ ಟೌನ್ ವ್ಯಾಪ್ತಿಯ ರಂಗರಾಯರ ಕೆರೆ ಸಮೀಪ ಕಾಡಾನೆ ಕಂಡು ಪಕ್ಕದ ಪಾರ್ಕ್ನಲ್ಲಿ ವಾಕಿಂಗ್ ಮಾಡುತ್ತಿದ್ದ ಜನ ಎದ್ನೋ ಬಿದ್ನೋ ಎಂದು ಓಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಹಿನ್ನೆಲೆ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳನ್ನು ವಾಪಸ್ ಕಾಡಿಗಟ್ಟುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಐಶ್ವರ್ಯ ಗೌಡಳಿಂದ ವಂಚನೆಗೆ ಒಳಗಾಗಿದ್ರೆ ದೂರು ನೀಡಿ: ಎಸ್ಪಿ

ಪಕ್ಕದ ದೊಡ್ಡಮಣ್ಣುಗುಡ್ಡೆ ಅರಣ್ಯ ವ್ಯಾಪ್ತಿಯಿಂದ ನಗರ ಪ್ರದೇಶಕ್ಕೆ ಬಂದಿರುವ ಕಾಡಾನೆಗಳು ರಂಗರಾಯರದೊಡ್ಡಿ ಲೇಔಟ್‌ನಲ್ಲಿ ಓಡಾಡಿ ಬಳಿಕ ಪಕ್ಕದ ಬೆಟ್ಟವನ್ನೇರಿವೆ. ನಿತ್ಯ ಒಂದಲ್ಲ ಒಂದು ಕಡೆ ಕಾಡಾನೆಗಳು ಉಪಟಳ ನೀಡುತ್ತಿರುವುದು ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಇದನ್ನೂ ಓದಿ: ಚೀನಾದಲ್ಲಿ ಮತ್ತೆ ವೈರಸ್‌ ಸ್ಫೋಟ; ರೋಗಿಗಳಿಂದ ತುಂಬಿ ತುಳುಕುತ್ತಿವೆ ಆಸ್ಪತ್ರೆಗಳು

Share This Article