ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದ (Chamundi Hills) ಕಾಡಿನಲ್ಲಿ ಶುಕ್ರವಾರ ಮಧ್ಯಾಹ್ನದಿಂದ ಕಾಣಿಸಿಕೊಂಡಿದ್ದ ಕಾಡ್ಗಿಚ್ಚು (Wildfire) ಸದ್ಯ ನಿಯಂತ್ರಣಕ್ಕೆ ಬಂದಿದೆ.
ಚಾಮುಂಡಿ ಬೆಟ್ಟದ ಬಂಡೀಪಾಳ್ಯ (Bandipalya) ಉತ್ತನಹಳ್ಳಿ ಭಾಗದ ಕಾಡಿನಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಇದೀಗ ಹರಸಾಹಸಪಟ್ಟು ಬೆಂಕಿ ಸಂಪೂರ್ಣ ನಿಯಂತ್ರಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಮಂಡ್ಯ| ಸರ್ಕಾರಿ ನೌಕರಿ ಕೊಡಿಸುತ್ತೇನೆಂದು ಕೋಟಿ ಕೋಟಿ ವಂಚನೆ
ಘಟನೆ ಸಂಬಂಧ ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿಯು ವ್ಯಾಪಕವಾಗಿ ಹರಡಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ತಡರಾತ್ರಿಯವರೆಗೂ ಬೆಟ್ಟದ ಸುತ್ತ ದಟ್ಟ ಹೊಗೆ ಕಾಣಿಸಿಕೊಂಡಿದೆ. ಇದನ್ನೂ ಓದಿ: ಜಸ್ಟ್ ಮಿಸ್, ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇಟಿಎಫ್ ಸಿಬ್ಬಂದಿ!
ಬೆಂಕಿ ಅವಘಡವನ್ನು ಮಾನವ ಕೃತ್ಯ ಎಂದು ಶಂಕಿಸಲಾಗಿದ್ದು, ಬೀಡಿ, ಸಿಗರೇಟು ಸೇದುವವರು ಬೆಂಕಿಕಡ್ಡಿ ಹಚ್ಚಿ ಸರಿಯಾಗಿ ಆರಿಸದೆ ಬಿಸಾಡಿದ್ದರಿಂದ ಬೆಂಕಿ ಹತ್ತಿಕೊಂಡಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 2,000 ಕೋಟಿ ರೂ. ಭ್ರಷ್ಟಾಚಾರ ಆರೋಪ; ಡಿಸಿಎಂ ವಿರುದ್ಧ ಮುನಿರತ್ನ ದೂರು