ದೇವೇಗೌಡ್ರ ಕುಟುಂಬದಲ್ಲಿ ಮತ್ತೊಬ್ರು ಕಣಕ್ಕಿಳಿಯಲು ಸಿದ್ಧತೆ- ತೆರೆಮರೆಯಲ್ಲಿ ಸಜ್ಜಾಗುತ್ತಿದ್ದಾರಾ ಅನಿತಾ ಕುಮಾರಸ್ವಾಮಿ?

Public TV
1 Min Read
ANITHA DEVEGOWDA

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ. ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ ದೇವೇಗೌಡರವರು ತಮ್ಮ ಕುಟುಂಬದಲ್ಲಿ ಕೇವಲ ಇಬ್ಬರು ಮಾತ್ರವೇ ಚುನಾವಣೆಯಲ್ಲಿ ಸ್ಪರ್ಧಿಸ್ತಾರೆ ಅಂತಿದ್ದಾರೆ.

ಆದ್ರೆ ಚನ್ನಪಟ್ಟಣದ ಜೆಡಿಎಸ್ ಮುಖಂಡರು ಮಾತ್ರ ಶಾಸಕ ಯೋಗೇಶ್ವರ್ ವಿರುದ್ಧ ಅನಿತಾ ಕುಮಾರಸ್ವಾಮಿಯವರನ್ನ ಕಣಕ್ಕೆ ಇಳಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಇದರ ನಡುವೆ ಅನಿತಾ ಕುಮಾರಸ್ವಾಮಿಯವರು ಇತ್ತೀಚೆಗೆ ಪದೇ ಪದೇ ಚನ್ನಪಟ್ಟಣಕ್ಕೆ ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ಆಸೆ ಇದೆ: ಅನಿತಾ ಕುಮಾರಸ್ವಾಮಿ

vlcsnap 2017 11 19 07h50m34s184

ಶನಿವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಾಂಪುರ ರಾಜಣ್ಣರವರ ಮನೆಗೆ ಭೇಟಿ ನೀಡಿ ಕೆಲವು ಮುಖಂಡರ ಜೊತೆ ಚರ್ಚೆ ನಡೆಸಿದ್ದರು. ಅಲ್ಲದೇ ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆ ಕೂಡಾ ನಡೆಸಿದ್ದರು. ಇನ್ನು ಸಂಕ್ರಾಂತಿ ವೇಳೆಗೆ ಅಭ್ಯರ್ಥಿಗಳ ಪಟ್ಟಿ ಹೊರಬೀಳಲಿದ್ದು ಅಲ್ಲಿಯ ತನಕ ಕಾದು ನೋಡುವಂತೆ ಅನಿತಾ ಕುಮಾರಸ್ವಾಮಿಯವರೇ ತಿಳಿಸಿದ್ದಾರೆ.

ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬರ್ತಾರಾ?- ದೇವೇಗೌಡ್ರು ಹೇಳಿದ್ದೇನು?

https://www.youtube.com/watch?v=CIggbVSEiYQ

vlcsnap 2017 11 19 07h50m15s239

vlcsnap 2017 11 19 07h50m27s118

vlcsnap 2017 11 19 07h50m40s244

vlcsnap 2017 11 19 07h50m48s68

vlcsnap 2017 11 19 07h51m00s184

vlcsnap 2017 11 19 07h51m25s171

JDS party symbol

Share This Article
Leave a Comment

Leave a Reply

Your email address will not be published. Required fields are marked *