ಮುಂದಿನ ವಾರ ವಿಚಾರಣೆಗೆ ಹಾಜರಾಗುತ್ತೇನೆ: ಪೊಲೀಸ್ ನೋಟಿಸ್ ಗೆ ದುನಿಯಾ ವಿಜಯ್ ಉತ್ತರ

Public TV
1 Min Read
FotoJet 1 50

ಪಾನಿಪುರಿ ಕಿಟ್ಟಿ ಗಲಾಟೆಗೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸ್ಟೇಶನ್ ಗೆ ಬರುವಂತೆ ತಿಳಿಸಲಾಗಿತ್ತು. ಆದರೆ, ಈ ವಾರ ನಿಗಧಿತ ಚಿತ್ರೀಕರಣ ಇರುವುದರಿಂದ ಮುಂದಿನ ವಾರ ವಿಚಾರಣೆಗೆ ಬರುವುದಾಗಿ ವಿಜಯ್ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಭೀಮ ಸೇರಿದಂತೆ ಹಲವು ಸಿನಿಮಾಗಳ ಚಿತ್ರೀಕರಣದಲ್ಲಿ ವಿಜಯ್ ಭಾಗಿಯಾಗಿದ್ದಾರೆ. ಹಾಗಾಗಿ ಮುಂದಿನ ವಾರ ವಿಚಾರಣೆಗೆ ಹಾಜರಾಗುವುದಾಗಿ ಅವರು ತಿಳಿಸಿದ್ದಾರೆ.

FotoJet 3 37

ಪಾನಿಪುರಿ ಕಿಟ್ಟಿ ಜೊತೆಗಿನ ಗಲಾಟೆಗೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ಕಿಟ್ಟಿ ಮೇಲೆ ಎಫ್.ಐ.ಆರ್ ದಾಖಲಾಗಿತ್ತು. ಎಫ್.ಐ.ಆರ್ ದಾಖಲಾಗುತ್ತಿದ್ದಂತೆಯೇ ಕಿಟ್ಟಿ ಪೊಲೀಸ್ ಅಧಿಕಾರಿಯ ಮುಂದೆ ಹಾಜರು ಕೂಡ ಆಗಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುನಿಯಾ ವಿಜಯ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಹೈಗ್ರೌಂಡ್ ಪೊಲೀಸರಿಂದ ನೋಟಿಸ್ ನಲ್ಲಿ ತಿಳಿಸಲಾಗಿದೆ.

FotoJet 2 48

ಪಾನಿಪುರಿ ಕಿಟ್ಟಿ ವಿರುದ್ಧ ದುನಿಯಾ ವಿಜಯ್ ದೂರು ನೀಡಿದ್ದರು. ದೂರುದಾರ ಆಗಿರುವ ಹಿನ್ನೆಲೆಯಲ್ಲಿ ಈ  ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ಸೂಚಿಸಲಾಗಿದೆ. ಕಿಟ್ಟಿ ಮತ್ತು ದುನಿಯಾ ವಿಜಯ್ ಆಪ್ತ ಸ್ನೇಹಿತರು ಪ್ರಕರಣವೊಂದರಲ್ಲಿ ಇಬ್ಬರೂ ಬಡಿದಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಸ್ಪರ ಇಬ್ಬರೂ ದೂರು ದಾಖಲಿಸಿದ್ದರು. ಇದನ್ನೂ ಓದಿ: ಪುತ್ರಿ ಐಶ್ವರ್ಯ ಜೊತೆ ತಿರುಪತಿ ದೇವಸ್ಥಾನಕ್ಕೆ ರಜನಿಕಾಂತ್ ಭೇಟಿ

FotoJet 4 20

2018ರಲ್ಲಿ ಬೆಂಗಳೂರಿನ ವಸಂತ ನಗರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ದೇಹದಾರ್ಢ್ಯ ಸ್ಪರ್ಧೆ ನಡೆದಿತ್ತು. ಈ ಸಂದರ್ಭದಲ್ಲಿ  ಪಾನಿಪುರಿ ಕಿಟ್ಟಿ ಟೀಂಗೂ ಹಾಗೂ ದುನಿಯಾ ವಿಜಯ್ ಟೀಂ ಗೂ ಗಲಾಟೆ ನಡೆದಿತ್ತು. ಅಂದು ಸ್ಪರ್ಧೆ ಮಾಡಿದ್ದ ಪಾನಿಪುರಿ ಕಿಟ್ಟಿಯ ಸಹೋದರ ಮಾರುತಿ‌ ಗೌಡನನ್ನು ಗಲಾಟೆ ನಂತರ ದುನಿಯಾ ವಿಜಯ್ ಕಾರಿನಲ್ಲಿ ಕರೆದುಕೊಂಡು ಹೋಗಿ, ಹಿಗ್ಗಾ ಮುಗ್ಗ ಥಳಿಸಿದ್ದರು ಎಂದು ಆರೋಪಿಸಲಾಗಿತ್ತು. ನಂತರ ಮಧ್ಯರಾತ್ರಿ ಪೊಲೀಸರ ಕರೆ ಮೇರೆಗೆ ವಾಪಸ್ ಕರೆತಂದಿದ್ದೂ ಬಿಟ್ಟಿದ್ದರು ಎಂದು ಹೇಳಲಾಗಿತ್ತು. ತೀವ್ರ ಥಳಿತಕ್ಕೊಳಗಾಗಿದ್ದ ಮಾರುತಿ ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆದಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *