Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

SC, ST ಮೀಸಲಾತಿ ವಿಚಾರದಲ್ಲಿ ಸರ್ಕಾರ ದಿಟ್ಟ ನಿರ್ಧಾರ: ಬೊಮ್ಮಾಯಿ

Public TV
Last updated: October 13, 2022 10:50 pm
Public TV
Share
3 Min Read
BASAVARAJ BOMMAI 5
SHARE

ಬೆಂಗಳೂರು: ಮೀಸಲಾತಿ ಸಂಬಂಧಿತ ಜನರ ಹಲವು ದಶಕಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸಿದೆ. ಶಿಕ್ಷಣ ವಂಚಿತರು ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶದ ಅವಕಾಶ ನೀಡಿ ಸ್ವಾವಲಂಬನೆಯ-ಸ್ವಾಭಿಮಾನಿ ಬದುಕಿಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

Reservation

ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಇಂದು ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹಲವಾರು ದಶಕಗಳ ಕಾಲ ಅಧಿಕಾರದಲ್ಲಿತ್ತು. ಯಾಕೆ ಮೀಸಲಾತಿ (Reservation) ವಿಚಾರದಲ್ಲಿ ಇಂಥ ದಿಟ್ಟ ನಿರ್ಧಾರ ಮಾಡಿಲ್ಲ? ಕಾಂಗ್ರೆಸ್ ಪಕ್ಷದವರು ದೀನ ದಲಿತರು ಮತ್ತು ಎಸ್‍ಸಿ (SC), ಎಸ್‍ಟಿ (ST) ಸಮುದಾಯದವರ ವಿರೋಧಿಗಳು ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ಬ್ಯಾನ್ ಆದ್ರೂ ಸಕ್ರಿಯವಾಗಿದ್ಯಾ PFI?- ಬೇಟೆ ಮುಂದುವರಿಸಿದ ಮಂಗಳೂರು ಪೊಲೀಸರು

CONGRESS 2

ರೈತರ ಮಕ್ಕಳಿಗೆ ವಿದ್ಯಾನಿಧಿಯನ್ನು ಮೊದಲ ಬಾರಿಗೆ ಕೊಡಲಾಗಿದೆ. ರೈತ ಕೃಷಿ ಕೂಲಿಕಾರರು ಸೇರಿ ಅನೇಕ ಸಮುದಾಯಗಳಿಗೆ ಇದನ್ನು ವಿಸ್ತರಿಸಲಾಗಿದೆ. ಉದ್ಯೋಗ ಹೆಚ್ಚಳಕ್ಕೆ ನಾವು ಆದ್ಯತೆ ಕೊಡುತ್ತಿದ್ದೇವೆ. 5 ಲಕ್ಷ ಮಹಿಳೆಯರಿಗೆ, 5 ಲಕ್ಷ ಯುವಕರಿಗೆ ಕೆಲಸ ಸಿಗುವಂತೆ ಮಾಡುತ್ತಿದ್ದೇವೆ ಎಂದು ವಿವರಿಸಿದ ಅವರು, ಎಲ್ಲ ವರ್ಗದವರಿಗೆ ನ್ಯಾಯ ಕೊಡುವ ಕೆಲಸವನ್ನು ಬಿಜೆಪಿ (BJP) ಮಾಡುತ್ತಿದೆ ಎಂದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಾಮಾಜಿಕ ನ್ಯಾಯವು ಕೇವಲ ಭಾಷಣದ ಸರಕಾಗಿತ್ತು ಹಾಗೂ ಮತಬ್ಯಾಂಕ್ ಮಾಡಲು ಇದನ್ನು ಬಳಸಲಾಗುತ್ತಿತ್ತು ಎಂದು ಆಕ್ಷೇಪಿಸಿದರು. ಕನಕದಾಸರ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಅನುದಾನ ಕೊಟ್ಟಿದೆ ಎಂದು ತಿಳಿಸಿದ್ದಾರೆ.

sonia ghandi

ಸೋನಿಯಾ ಗಾಂಧಿ (SoniaGandhi) ಅವರಿಗೆ ಬಳ್ಳಾರಿ ಕ್ಷೇತ್ರವು ರಾಜಕೀಯವಾಗಿ ಮರುಜನ್ಮ ಕೊಟ್ಟಿತ್ತು. ಆಗ ಕಾಂಗ್ರೆಸ್ (Congress) ಸರ್ಕಾರವು ಈ ಭಾಗಕ್ಕೆ ಸಾವಿರಾರು ಕೋಟಿ ಅನುದಾನದ ಭರವಸೆ ಕೊಟ್ಟಿತ್ತು. ಆದರೆ, ಅದನ್ನು ಈಡೇರಿಸಲಿಲ್ಲ ಎಂದು ವಿವರಿಸಿದರು. ಈಗ ಮತ್ಯಾಕೆ ಬಂದಿದ್ದೀರಿ? ಏನು ಸುಳ್ಳು ಹೇಳಲು ಬಂದಿದ್ದೀರಿ? ಎಂದು ಪ್ರಶ್ನಿಸಿದರು. ನಾವೆಲ್ಲರೂ ಜಾಗೃತರಾಗಿದ್ದೇವೆ. ನಿಮ್ಮ ಸುಳ್ಳನ್ನು ನಂಬುವುದಿಲ್ಲ ಎಂಬ ಸಂದೇಶವನ್ನು ಕಾಂಗ್ರೆಸ್ಸಿಗರಿಗೆ ರವಾನಿಸಿ ಎಂದು ಜನರಲ್ಲಿ ಮನವಿ ಮಾಡಿದರು. ಕರ್ನಾಟಕವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡಿತ್ತು. ಕಾಂಗ್ರೆಸ್ ನಾಯಕರು ಕರ್ನಾಟಕವನ್ನು ಪೇಟಿಎಂ ಮಾಡಿಕೊಂಡಿದ್ದರು. ಅದೇ ಸಂಬಂಧ ಕಾಂಗ್ರೆಸ್ ಪಕ್ಷದ ರಾಜ್ಯದ ಅಧ್ಯಕ್ಷರು ಈಗ ವಿಚಾರಣೆ ಎದುರಿಸುತ್ತಿದ್ದಾರೆ. ಅವರನ್ನು ನೋಡಿದರೆ ಕನಿಕರ ಎನಿಸುತ್ತದೆ; ನಿಮ್ಮಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಅವರು ತಿಳಿಸಿದರು. ರಾಜ್ಯದ ಜನರು ಜಾಗೃತರಾಗಿದ್ದಾರೆ. ನಿಮ್ಮ ಹಳೆಯ ನಾಟಕಗಳನ್ನು ಕರ್ನಾಟಕದ ಜನರು ನಂಬುವುದಿಲ್ಲ. ನುಡಿದಂತೆ ನಡೆದವರಿಗೆ ಮಾತ್ರ ಅವಕಾಶ ಸಿಗಲಿದೆ. ಈ ಭಾಗ್ಯ ಆ ಭಾಗ್ಯ ಎಂದು ತಿಳಿಸಿದರೂ ನಿಮ್ಮನ್ನು ಜನರು ಯಾಕೆ ಮನೆಗೆ ಕಳಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರಿಗೆ ಪ್ರಶ್ನೆ ಹಾಕಿದರು. ಇದನ್ನೂ ಓದಿ: ಶಾಸಕ ಉದಯ್ ಗರುಡಾಚಾರ್‌ಗೆ ಜೈಲು ಶಿಕ್ಷೆ- ಅದೇ ಕೋರ್ಟ್‍ನಿಂದ ಜಾಮೀನು

BASAVARAJ BOMMAI AND YEDIYURAPPA

ಅನ್ನಭಾಗ್ಯದಲ್ಲಿ ಕನ್ನ:
ಅನ್ನ ಭಾಗ್ಯದಲ್ಲಿ ಕನ್ನ ಭಾಗ್ಯ ಇತ್ತು. ಎಸ್‍ಸಿ, ಎಸ್‍ಟಿ ಜನಾಂಗದವರಿಗೆ ಬೋರ್‌ವೆಲ್‌ ವಿಚಾರದಲ್ಲೂ ಹಗರಣ ಮಾಡಿದ್ದೀರಿ. ಕಾಂಗ್ರೆಸ್ ತಪ್ಪು ಲೆಕ್ಕಾಚಾರ-ಭ್ರಷ್ಟಾಚಾರದಿಂದ ಕರ್ನಾಟಕದ ಅಭಿವೃದ್ಧಿಗೆ ಹಿನ್ನೆಡೆ ಆಗಿತ್ತು ಎಂದು ತಿಳಿಸಿದರು. ಇಲ್ಲಿನ ಜನಸ್ತೋಮ ನೋಡಿದಾಗ ಇಲ್ಲಿ ಕಮಲದ ಹೂವು ಅರಳುವುದು ಖಚಿತ ಎಂದು ವಿಶ್ವಾಸವಾಗಿದೆ ಎಂದು ನುಡಿದರು. ಒಗ್ಗಟ್ಟಿನಿಂದ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ನಮ್ಮ ನಾಯಕರಾದ ಯಡಿಯೂರಪ್ಪ (B.S Yediyurappa) ಅವರ ತಾಂಡಾ ಅಭಿವೃದ್ಧಿ ನಿಗಮ ಮಾಡಿದ್ದರು. 100 ಕೋಟಿ ರೂಪಾಯಿ ಅನುದಾನ ಕೊಟ್ಟರು. ನಾನು ಈ ನಿಗಮಕ್ಕೆ ಈ ಬಾರಿ 100 ಕೋಟಿ ನೀಡಲಿದ್ದೇನೆ. ಎಸ್‍ಸಿ, ಎಸ್‍ಟಿ ಸಮುದಾಯಗಳ ಅಭಿವೃದ್ಧಿಗೆ 28 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಕೊಡಲಾಗಿದೆ ಎಂದು ವಿವರಿಸಿದರು. ಸಮಾಜ ಕಲ್ಯಾಣ ಇಲಾಖೆಗೆ 6 ಸಾವಿರ ಕೋಟಿ ರೂಪಾಯಿ ಕೊಡಲಾಗಿದೆ. ಹೂವಿನಹಡಗಲಿಯ ಜನರು ಹೂವಿನಂಥವರು ಎಂದು ಮೆಚ್ಚುಗೆ ಸೂಚಿಸಿದರು. ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಹೆಚ್ಚಿನ ಮಹತ್ವ ನೀಡಿದ್ದರಿಂದ ಇಲ್ಲಿನ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಅವಕಾಶ ಲಭಿಸಿದೆ. ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ಬಿಜೆಪಿ ನೀಡಿದೆ ಎಂದು ವಿವರಿಸಿದರು.

ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಸಹ ಉಸ್ತುವಾರಿ ಶ್ರೀಮತಿ ಡಿ.ಕೆ.ಅರುಣಾ, ಸಚಿವರು, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaireservationSCSTಎಸ್‍ಟಿಎಸ್ಸಿಬಸವರಾಜ ಬೊಮ್ಮಾಯಿ. ಎಸ್‍ಟಿಬಿಜೆಪಿ
Share This Article
Facebook Whatsapp Whatsapp Telegram

You Might Also Like

Akash Deep
Cricket

536 ರನ್‌ಗಳ ಭರ್ಜರಿ ಮುನ್ನಡೆ – ಭಾರತದ ಬಿಗಿ ಹಿಡಿತದಲ್ಲಿ ಆಂಗ್ಲರ ಒದ್ದಾಟ

Public TV
By Public TV
4 hours ago
Neeraj Chopra 1
Bengaluru City

ಬೆಂಗಳೂರು | `ಎನ್‌ಸಿ ಕ್ಲಾಸಿಕ್‌’ನಲ್ಲಿ ನೀರಜ್‌ ಚೋಪ್ರಾಗೆ ಪ್ರಥಮ ಸ್ಥಾನ

Public TV
By Public TV
4 hours ago
Shivamogga
Bengaluru City

ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

Public TV
By Public TV
4 hours ago
Ramesh Jarkiholi
Belgaum

ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Public TV
By Public TV
5 hours ago
Anekal Marriage
Bengaluru Rural

ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

Public TV
By Public TV
5 hours ago
Eshwar Khandre 2
Districts

ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?