Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ – ಗೃಹ ಸಚಿವ ಅಮಿತ್ ಶಾ ಭರವಸೆ

Public TV
Last updated: February 10, 2024 4:46 pm
Public TV
Share
2 Min Read
amit shah 1
SHARE

ನವದೆಹಲಿ: 2019 ರಲ್ಲಿ ಜಾರಿಗೊಳಿಸಲಾದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (CAA) ಲೋಕಸಭೆ ಚುನಾವಣೆಗೆ ಮುನ್ನ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶನಿವಾರ ಹೇಳಿದ್ದಾರೆ. ಖಾಸಗಿ ವಾಹಿನಿಯ ಜಾಗತಿಕ ವ್ಯಾಪಾರ ಶೃಂಗಸಭೆ 2024 ನಲ್ಲಿ ಮಾತನಾಡಿದ ಅವರು ಸಿಎಎ ಅನುಷ್ಠಾನದ ಸುಳಿವು ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ ಮತ್ತು ಪ್ರಚೋದಿಸಲಾಗುತ್ತಿದೆ. ಸಿಎಎ ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡಲು ಉದ್ದೇಶಿಸಲಾಗಿದೆ. ಇದರಿಂದ ಯಾರೊಬ್ಬರ ಭಾರತೀಯ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು‌. ಇದನ್ನೂ ಓದಿ: I.N.D.I.A ಮೈತ್ರಿಕೂಟದಿಂದ ಹೊರಬಂದ ಆಪ್‌

CAA protest

ಮುಂಬರುವ ಚುನಾವಣೆಯಲ್ಲಿ ಬಿಜೆಪಿ 370 ಮತ್ತು ಎನ್‌ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಇದೇ ವೇಳೆ ಅವರು ವಿಶ್ವಾಸ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ ಸಸ್ಪೆನ್ಸ್ ಇಲ್ಲ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸಹ ತಾವು ಮತ್ತೆ ವಿರೋಧ ಪಕ್ಷದ ಬೆಂಚ್‌ಗಳಲ್ಲಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಅರಿತುಕೊಂಡಿವೆ ಎಂದು ಶಾ ಪ್ರತಿಪಾದಿಸಿದರು. ನಾವು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ. ಆದ್ದರಿಂದ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‌ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂದು ನಾವು ನಂಬುತ್ತೇವೆ.

ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ), ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮತ್ತು ಇತರ ಕೆಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಗೆ ಸೇರುವ ಸಾಧ್ಯತೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಹೆಚ್ಚಿನ ಪಕ್ಷಗಳು ಒಕ್ಕೂಟಕ್ಕೆ ಸೇರಬಹುದು. ಮಾತುಕತೆಗಳು ನಡೆಯುತ್ತಿವೆ ಆದರೆ ಯಾವುದನ್ನೂ ಅಂತಿಮಗೊಳಿಸಲಾಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: ನಾನು ರಾಮನನ್ನು ಗೌರವಿಸ್ತೇನೆ, ಗೋಡ್ಸೆಯನ್ನು ದ್ವೇಷಿಸುತ್ತೇನೆ: ಓವೈಸಿ

AMIT SHAH NARENDRA MODI

2024 ರ ಚುನಾವಣೆಯು ಎನ್‌ಡಿಎ ಮತ್ತು ಭಾರತದ ವಿರೋಧ ಪಕ್ಷದ ನಡುವಿನ ಚುನಾವಣೆಯಾಗಿರುವುದಿಲ್ಲ. ಬದಲಿಗೆ ಅಭಿವೃದ್ಧಿ ಮತ್ತು ಕೇವಲ ಘೋಷಣೆಗಳನ್ನು ನೀಡುವವರ ನಡುವಿನ ಚುನಾವಣೆಯಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕುರಿತು ಕೇಳಿದ ಪ್ರಶ್ನೆಗೆ ಮಾತನಾಡಿ, 1947 ರಲ್ಲಿ ದೇಶ ವಿಭಜನೆಗೆ ಅವರ ಪಕ್ಷವೇ ಕಾರಣವಾಗಿರುವುದರಿಂದ ನೆಹರೂ-ಗಾಂಧಿ ವಂಶಸ್ಥರಿಗೆ ಇಂತಹ ಮೆರವಣಿಗೆಯನ್ನು ಮುಂದುವರಿಸಲು ಯಾವುದೇ ಹಕ್ಕಿಲ್ಲ ಎಂದು ಹೇಳಿದರು.

ಸಂಸತ್ತಿನಲ್ಲಿ ಸರ್ಕಾರವು ಮಂಡಿಸಿದ ಶ್ವೇತಪತ್ರದ ಕುರಿತು ಮಾತನಾಡಿ, 2014 ರಲ್ಲಿ ಅಧಿಕಾರವನ್ನು ಕಳೆದುಕೊಂಡಾಗ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಮೈತ್ರಿ ಯಾವ ಸಮಸ್ಯೆಯನ್ನು ಬಿಟ್ಟಿದೆ ಎಂಬುದನ್ನು ತಿಳಿದುಕೊಳ್ಳುವ ಸಂಪೂರ್ಣ ಹಕ್ಕು ದೇಶಕ್ಕೆ ಇದೆ. ಆ ಸಮಯದಲ್ಲಿ ಆರ್ಥಿಕತೆಯು ಕೆಟ್ಟ ಸ್ಥಿತಿಯಲ್ಲಿತ್ತು. ಎಲ್ಲೆಡೆ ಹಗರಣಗಳು ನಡೆಯುತ್ತಿದ್ದವು. ವಿದೇಶಿ ಹೂಡಿಕೆ ಬರುತ್ತಿರಲಿಲ್ಲ. ಆ ಸಮಯದಲ್ಲಿ ನಾವು ಶ್ವೇತಪತ್ರವನ್ನು ಹೊರತಂದಿದ್ದರೆ ಅದು ಜಗತ್ತಿಗೆ ತಪ್ಪು ಸಂದೇಶವನ್ನು ನೀಡುತ್ತಿತ್ತು. ಆದರೆ 10 ವರ್ಷಗಳ ನಂತರ ನಮ್ಮ ಸರ್ಕಾರ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಿದೆ. ವಿದೇಶಿ ಹೂಡಿಕೆಯನ್ನು ತಂದಿದೆ ಮತ್ತು ಯಾವುದೇ ಭ್ರಷ್ಟಾಚಾರವಿಲ್ಲ. ಆದ್ದರಿಂದ ಶ್ವೇತಪತ್ರವನ್ನು ಪ್ರಕಟಿಸಲು ಇದು ಸರಿಯಾದ ಸಮಯ ಎಂದು ಅವರು ಹೇಳಿದರು. ಇದನ್ನೂ ಓದಿ: ಮೋದಿಯವರ 10 ವರ್ಷ ರಾಜ್ಯಕ್ಕೆ ಅನ್ಯಾಯದ ಕಾಲ: ಸಿದ್ದರಾಮಯ್ಯ

TAGGED:Amit ShahCAANew Delhi
Share This Article
Facebook Whatsapp Whatsapp Telegram

Cinema News

Bili Chukki Halli Hakki Movie
ಅಕ್ಟೋಬರ್ 24 ರಂದು `ಬಿಳಿಚುಕ್ಕಿ ಹಳ್ಳಿಹಕ್ಕಿ’ ತೆರೆಗೆ!
Cinema Latest Main Post Sandalwood
Janhvi Kapoor
`ಪರಮ್ ಸುಂದರಿ’ ಪ್ರೀಮಿಯರ್‌ನಲ್ಲಿ ಪರಮ ಸುಂದರಿಯಾಗಿ ಮಿಂಚಿದ ಜಾನ್ವಿ
Bollywood Cinema Latest Top Stories
mirai trailer teja sajja
ಹನುಮಾನ್ ಖ್ಯಾತಿಯ ತೇಜ ಸಜ್ಜಾ ನಟನೆಯ ಮಿರಾಯ್ ಟ್ರೈಲರ್ ರಿಲೀಸ್
Cinema Latest South cinema Top Stories
anchor anushree roshan
ರೋಷನ್ ಕೋಟಿ ಕೋಟಿ ಒಡೆಯ ಎಂದವರಿಗೆ ಅನುಶ್ರೀ ಕ್ಲ್ಯಾರಿಟಿ ಏನು?
Cinema Latest Sandalwood Top Stories
Anushree 7
ಮಾತಿನ ಮಲ್ಲಿ ಅನುಶ್ರೀ ಹೊಸ ಗಾಯನ.. ನವಜೋಡಿಗೆ ಹಾರೈಸಿದ ತಾರಾಗಣ..!
Cinema Latest Sandalwood Top Stories

You Might Also Like

jog falls 2
Latest

ಲಿಂಗನಮಕ್ಕಿ, ಗೇರುಸೊಪ್ಪ ಡ್ಯಾಮ್‌ನಿಂದ ನೀರು ಬಿಡುಗಡೆ – ಜೋಗ್‌ ಫಾಲ್ಸ್‌ಗೆ ಜೀವಕಳೆ

Public TV
By Public TV
11 minutes ago
talapady ksrtc bus accident 1
Dakshina Kannada

ವೇಗವಾಗಿ ಬಂದು ಆಟೋಗೆ ಗುದ್ದಿದ KSRTC; ಮತ್ತೆ ರಿವರ್ಸ್‌ ಆಗಿ ಪ್ರಯಾಣಿಕರು, ಆಟೋಗೆ ಡಿಕ್ಕಿ – ತಲಪಾಡಿ ಆಕ್ಸಿಡೆಂಟ್‌ ಹೇಗಾಯ್ತು?

Public TV
By Public TV
19 minutes ago
KN Rajanna Siddaramaiah
Bengaluru City

ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆಯ ಮೊದಲ ಸಭೆ ನಡೆಸಿದ ಸಿಎಂ

Public TV
By Public TV
38 minutes ago
Mohan Bhagwat
Latest

75ನೇ ವರ್ಷಕ್ಕೆ ಮೋದಿ ನಿವೃತ್ತಿ ವದಂತಿ – RSS ಮುಖ್ಯಸ್ಥ ಮೋಹನ್‌ ಭಾಗವತ್‌ ಸ್ಪಷ್ಟನೆ

Public TV
By Public TV
50 minutes ago
Gadag Theves arrest
Crime

ಗದಗದಲ್ಲಿ ಅಂತರರಾಜ್ಯ ಖತರ್ನಾಕ್ ಕಳ್ಳರು ಅಂದರ್

Public TV
By Public TV
59 minutes ago
Rain
Bidar

ರಾಜ್ಯದ ಹಲವೆಡೆ ವರ್ಷಧಾರೆ – ಲಿಂಗನಮಕ್ಕಿ ಜಲಾಶಯದಿಂದ 50,000 ಕ್ಯೂಸೆಕ್ ನೀರು ರಿಲೀಸ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?