Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಸೆಮಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಭಾರತ?

Public TV
Last updated: November 15, 2023 11:32 am
Public TV
Share
3 Min Read
CRICKET q
SHARE

ಮುಂಬೈ: ಈ ಬಾರಿಯ ವಿಶ್ವಕಪ್‌ನ ಹಾಟ್ ಫೇವರೇಟ್ ಭಾರತ ತಂಡ (Team India) ಇಂದು ವಿಶ್ವಕಪ್‌ನ (World Cup) ಮೊದಲ ಸೆಮಿ ಫೈನಲ್‌ನಲ್ಲಿ (Semi Final) ನ್ಯೂಜಿಲೆಂಡ್ (New Zealand) ತಂಡವನ್ನು ಎದುರಿಸಲಿದೆ. ಕಳೆದ ಬಾರಿಯ ವಿಶ್ವಕಪ್ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವ ಮೂಲಕ ನಿರಾಸೆ ಅನುಭವಿಸಿದ್ದ ಭಾರತ ತಂಡ, ಈ ಬಾರಿ ಅದೇ ತಂಡದ ವಿರುದ್ದ ಸೆಮಿಫೈನಲ್ ಆಡುತ್ತಿದ್ದು, ಈ ಬಾರಿ ಗೆಲುವಿನ ಮೂಲಕ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಏಕದಿನ ವಿಶ್ವಕಪ್ ಮಹಾ ಸಂಗ್ರಾಮ ಉಪಾಂತ್ಯಕ್ಕೆ ಬಂದಾಗಿದೆ. ಬಲಿಷ್ಠ ನಾಲ್ಕು ತಂಡಗಳ ಕಾದಾಟಕ್ಕೆ ರಣಾಂಗಣ ಕೂಡ ಸಜ್ಜಾಗಿದೆ. ಆದರೆ, ಈ ಬಾರಿಯ ಸೆಮಿಫೈನಲ್‌ನ ಮೊದಲ ಪಂದ್ಯ ಕೇವಲ ಪಂದ್ಯವಾಗಿ ಉಳಿದಿಲ್ಲ. ಬದಲಾಗಿ ಕಿವೀಸ್ ಪಡೆಯ ವಿರುದ್ಧ ಭಾರತ ತಂಡದ ಸೇಡಿನ ಸಮರವಾಗಿದೆ. ಐಸಿಸಿ (ICC) ಟೂರ್ನಿಯಲ್ಲಿ ಭಾರತ ತಂಡಕ್ಕೆ ಕಿವೀಸ್ ನೀಡಿದ ಆ ಎರಡು ಬ್ಯಾಕ್ ಟು ಬ್ಯಾಕ್ ಶಾಕ್ ಇನ್ನೂ ಕೂಡ ಭಾರತೀಯ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಅಚ್ಚಾಗಿ ಉಳಿದಿದ್ದು, ಈ ಬಾರಿಯ ವಿಶ್ವಕಪ್ ಸೆಮಿಸ್‌ನಲ್ಲಿ ಮುಯ್ಯಿ ತೀರಿಸಿಕೊಳ್ಳುವ ಮೂಲಕ ಟೀಂ ಇಂಡಿಯಾ ಕೂಡ ಹಳೇ ನೋವು ಮರೆಸುವ ನಿಟ್ಟಿನಲ್ಲಿ ಸಜ್ಜಾಗಿದೆ. ಇದನ್ನೂ ಓದಿ: ಅಭಿಮಾನಿಯ ಹೃದಯ ಬಡಿತ ನಿಲ್ಲಿಸಿತ್ತು, ವಿಶ್ವಕಪ್ ಕನಸನ್ನೇ ಭಗ್ನಗೊಳಿಸಿತ್ತು ಆ ಒಂದು ರನೌಟ್..!

2019ರ ವಿಶ್ವಕಪ್ ಸೆಮಿಫೈನಲ್ ಪಂದ್ಯ ಭಾರತೀಯರು ಇಂದಿಗೂ ಆ ಸೋಲಿನ ನೋವು ಮರೆತಿಲ್ಲ. 2019ರಲ್ಲಿ ಇಂಗ್ಲೆಂಡ್ ನೆಲದಲ್ಲಿ ಟೀಮ್ ಇಂಡಿಯಾವನ್ನು ಮಣಿಸಿದ್ದ ನ್ಯೂಜಿಲೆಂಡ್, ಕೋಟ್ಯಂತರ ಅಭಿಮಾನಿಗಳ ಕನಸು ನುಚ್ಚುನೂರು ಮಾಡಿತ್ತು. ಇದಕ್ಕೆಲ್ಲಾ ಕಾರಣ ಧೋನಿಯ (MS Dhoni) ಆ ಒಂದೇ ಒಂದು ರನೌಟ್. ಆ ಪಂದ್ಯದಲ್ಲಿ ಕೊನೆಯ ಓವರ್‌ಗಳಲ್ಲಿ ಎಡವಿದ್ದ ಭಾರತ ತಂಡ ಸೆಮಿಸ್‌ನಲ್ಲಿ ಸೋಲುವ ಮೂಲಕ ಮೂರನೇ ಬಾರಿ ಪ್ರಶಸ್ತಿ ಗೆಲ್ಲುವ ಕನಸು ಕನಸಾಗೇ ಉಳಿದಿತ್ತು. ಕ್ರಿಕೆಟ್ ಪ್ರೇಮಿಗಳಿಗೆ ಈ ನೋವು ಮಾಸುವ ಮುನ್ನವೇ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲೂ ಕೂಡ ಭಾರತಕ್ಕೆ ನ್ಯೂಜಿಲೆಂಡ್ ಶಾಕ್ ನೀಡಿ ಚಾಂಪಿಯನ್ ಆಗಿ ಗೆದ್ದು ಬೀಗಿತ್ತು. ಆ ಎರಡು ಸೋಲುಗಳಿಗೆ ಇಂದು ಮುಯ್ಯಿ ತೀರಿಸಿಕೊಳ್ಳುವ ಸಮಯ ಬಂದಿದ್ದು, ಟೀ ಇಂಡಿಯಾ ಕೂಡ ಭರ್ಜರಿ ತಯಾರಿ ನಡೆಸಿದೆ. ಇದನ್ನೂ ಓದಿ: 1,20,000 ರೂ.ಗೆ ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ಟಿಕೆಟ್ ಮಾರಾಟ – ಓರ್ವ ಅರೆಸ್ಟ್

ಇನ್ನೂ ಐಸಿಸಿ ವಿಶ್ವಕಪ್ 2023ರಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಹೋಲಿಸಿದರೆ ಭಾರತ ಬಲಿಷ್ಠ ತಂಡವೇ ಆಗಿದೆ. ಆದರೆ ಉಭಯ ತಂಡಗಳ ವಿಶ್ವಕಪ್ ಮುಖಾಮುಖಿಯಲ್ಲಿ ಕಿವೀಸ್ ಬಲಿಷ್ಠವಾಗಿದೆ. 2003ರ ವಿಶ್ವಕಪ್‌ನಲ್ಲಿ ಕಿವೀಸ್ ವಿರುದ್ಧ ಭಾರತ ಕೊನೆಯ ಬಾರಿಗೆ ಜಯ ಸಾಧಿಸಿತ್ತು. ಆ ಬಳಿಕ 2007, 2011 ಮತ್ತು 2015ರ ವಿಶ್ವಕಪ್ ಆವೃತ್ತಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಆಡಿರಲಿಲ್ಲ. ಒಟ್ಟು 10 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಐದು ಪಂದ್ಯಗಳನ್ನು ಗೆದ್ದರೆ ಭಾರತ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಟೈ ಆಗಿದೆ. ಆದರೆ ಕ್ರಿಕೆಟ್ ಪಂಡಿತರ ಪ್ರಕಾರ ಈ ಅಂಕಿ ಅಂಶ ಈ ಬಾರಿ ದೊಡ್ಡ ಮಟ್ಟಿಗೆ ವರ್ಕೌಟ್ ಆಗಿಲ್ಲ ಅನ್ನೋದು ಅವರ ಲೆಕ್ಕಾಚಾರ. ಇದನ್ನೂ ಓದಿ: ನನ್ನ ಮಗನ ಹೆಸರಿಗೂ ದ್ರಾವಿಡ್‌-ಸಚಿನ್‌ ಹೆಸರಿಗೂ ಸಂಬಂಧವಿಲ್ಲ: ಕ್ರಿಕೆಟಿಗ ರಚಿನ್‌ ತಂದೆ

ಇನ್ನೂ ಈಗಾಗಲೇ ಅಜೇಯವಾಗಿ ಉಪಾಂತ್ಯಕ್ಕೆ ತಲುಪಿರೋ ಟೀ ಇಂಡಿಯಾ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಮೂರು ವಿಭಾಗದಲ್ಲೂ ಬಲಿಷ್ಠವಾಗಿಯೇ ಇದೆ. ಜೊತೆಗೆ ಈಗಾಗಲೇ ಕಳೆದ ಪಂದ್ಯಗಳಲ್ಲಿ ಆಡಿದ್ದ 11ರ ಬಳಗದಲ್ಲಿ ಕಾಣಿಸಿಕೊಂಡಿದ್ದ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ಇವತ್ತಿನ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಬಹುತೇಕ ಬದಲಾವಣೆ ಸಾಧ್ಯತೆ ಕಡಿಮೆ ಇದೆ. ಇತ್ತ ನ್ಯೂಜಿಲೆಂಡ್ ಕೂಡ ಲೀಗ್ ಹಂತದ ಕೊನೆಯ ಪಂದ್ಯಗಳಲ್ಲಿ ಕೊಂಚ ಎಡವಿತ್ತು. ಆದರೆ ಸೆಮಿಸ್‌ಗೆ ಬರುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಇಂದು ಮುಂಬೈನ (Mumbai) ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ನಡೆಯಲಿರುವ ಪಂದ್ಯದಲ್ಲಿ ಬಲಿಷ್ಠ ಭಾರತವನ್ನು ಎದುರಿಸಲು ಕಿವೀಸ್ ಕೂಡ ಉತ್ತಮ ಸ್ಟ್ರಾಟಜಿಯೊಂದಿಗೆ ಕಣಕ್ಕಿಳಿಯಲಿದೆ. ಇದನ್ನೂ ಓದಿ: World Cup: ಈ ದಾಖಲೆ ಬರೆದ ಭಾರತದ ಮೊದಲ ಕ್ಯಾಪ್ಟನ್‌ ರೋಹಿತ್‌ ಶರ್ಮಾ

TAGGED:cricketmumbainew zealandsemi-finalTeam indiaWankhede stadiumworld cupಕ್ರಿಕೆಟ್ನ್ಯೂಜಿಲೆಂಡ್ಭಾರತಮುಂಬೈವಾಂಖೆಡೆ ಸ್ಟೇಡಿಯಂವಿಶ್ವಕಪ್ಸೆಮಿ ಫೈನಲ್
Share This Article
Facebook Whatsapp Whatsapp Telegram

Cinema Updates

Darshan
ಹಳೇ ಕೇಸ್‌ ಕೇಳಿದ ಸುಪ್ರೀಂ – ದರ್ಶನ್‌ಗೆ ಎದುರಾಗುತ್ತಾ ಸಂಕಷ್ಟ?
Cinema Court Latest Main Post National Sandalwood
Anchor Anushree
ಟೆಕ್ಕಿ ಜೊತೆ ಆ.28ಕ್ಕೆ ಅನುಶ್ರೀ ಮದುವೆ!
Cinema Latest Main Post Sandalwood
Darshan Thailand
ಥೈಲ್ಯಾಂಡ್‌ನಲ್ಲಿ ಡೆವಿಲ್ ಸಾಂಗ್ ಶೂಟಿಂಗ್ – ದರ್ಶನ್ ಫೋಟೋ ರಿವೀಲ್
Cinema Latest Sandalwood Top Stories
Hrithika Srinivas
ಕಿರಣ್ ರಾಜ್‌ಗೆ ನಾಯಕಿಯಾದ ಉಡಾಳ ಹುಡುಗಿ ಹೃತಿಕಾ
Cinema Latest Sandalwood Top Stories
The girl Friend
ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್ ಫ್ರೆಂಡ್ ಚಿತ್ರದ ಫಸ್ಟ್ ಸಾಂಗ್ ರಿಲೀಸ್
Cinema Latest Top Stories

You Might Also Like

Chinnaswamy Stadium Stampede
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಕೇಸ್‌ – ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ನಲ್ಲಿ ತೀರ್ಮಾನ

Public TV
By Public TV
22 minutes ago
Mysuru 2
Latest

India’s Cleanest City: ದೇಶದ ‘ಸ್ವಚ್ಛ ನಗರ’ ಪಟ್ಟಿಯಲ್ಲಿ ಇಂದೋರ್‌ ನಂ.1 – ಮೈಸೂರಿಗೆ 3ನೇ ಸ್ಥಾನ

Public TV
By Public TV
38 minutes ago
Koppal House Collapse
Districts

ನಿರಂತರ ಮಳೆಗೆ ಕುಸಿದ ಮನೆ – ಒಂದೂವರೆ ವರ್ಷದ ಮಗು ಸಾವು, ಆರು ಜನರಿಗೆ ಗಾಯ

Public TV
By Public TV
52 minutes ago
Darshan bail
Bengaluru City

ಬೇಲ್‌ ನೀಡುವಾಗ ಹೈಕೋರ್ಟ್ ತನ್ನ ವಿವೇಚನೆ ಬಳಸಿಲ್ಲ – ನ್ಯಾ.ಪರ್ದಿವಾಲಾ ಅಭಿಪ್ರಾಯ

Public TV
By Public TV
57 minutes ago
rituparna rolls royce
Dakshina Kannada

ಮಂಗಳೂರು| ಕಿರಿಯ ವಯಸ್ಸಿನಲ್ಲೇ ರೋಲ್ಸ್‌ ರಾಯ್ಸ್‌ನಲ್ಲಿ ಉದ್ಯೋಗ; ವರ್ಷಕ್ಕೆ 72 ಲಕ್ಷ ಸಂಬಳ- ಯುವತಿಗೆ ಸನ್ಮಾನ

Public TV
By Public TV
59 minutes ago
basanagouda patil yatnal 1
Bengaluru City

ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂಗೆ ಬರಬೇಡ ಅಂದಿದ್ದೇ ಬಿಎಸ್‍ವೈ: ಯತ್ನಾಳ್ ಬಾಂಬ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?