Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪ-ಮಕ್ಕಳ ಕುತಂತ್ರದಿಂದ ಉಚ್ಚಾಟನೆ, ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಪ್ಪ-ಮಕ್ಕಳ ಕುತಂತ್ರದಿಂದ ಉಚ್ಚಾಟನೆ, ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ: ಈಶ್ವರಪ್ಪ

Latest

ಅಪ್ಪ-ಮಕ್ಕಳ ಕುತಂತ್ರದಿಂದ ಉಚ್ಚಾಟನೆ, ಗೆದ್ದು ಮತ್ತೆ ಬಿಜೆಪಿ ಸೇರುತ್ತೇನೆ: ಈಶ್ವರಪ್ಪ

Public TV
Last updated: April 23, 2024 4:14 pm
Public TV
Share
2 Min Read
KS Eshwarappa 1
SHARE

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (ಅಪ್ಪ-ಮಕ್ಕಳ) ಕುತಂತ್ರದಿಂದ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ‌‌.‌ ಆದರೆ ಇದು ತಾತ್ಕಾಲಿಕವಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಗೆದ್ದು ಬಿಜೆಪಿ ಸೇರುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ (Eshwarappa) ಸವಾಲು ಹಾಕಿದರು.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಳಸು ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಅವರ ಅಪ್ಪ ಯಡಿಯೂರಪ್ಪನ ಮಾತು ಕೇಳಿ ಉಚ್ಚಾಟನೆ ಮಾಡಿದ್ದಾರೆ. ನಮಗೆ ಬಹಳ ನೋವುಂಟು ಮಾಡಿದೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಬಿಜೆಪಿ ಕಟ್ಟಿದ ನಿಮಗೆ ಹೀಗಾಗಬಾರದಿತ್ತು ಎನ್ನುತ್ತಾರೆ. ಬಿಜೆಪಿಗೆ ವಿಜಯೇಂದ್ರನ ಕೊಡುಗೆ ಶೂನ್ಯವೆಂದು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು ಹೇಳುತ್ತಿದ್ದಾರೆ ಎಂದರು. ಇದನ್ನೂ ಓದಿ: ಮುಸ್ಲಿಂ ಮುಖಂಡರು ಅವರ ಹುಡುಗರಿಗೆ ಬುದ್ಧಿ ಹೇಳಬೇಕು: ಮುತಾಲಿಕ್

BY Raghavendra 1

ಯಡಿಯೂರಪ್ಪ ಅವರು ಡೂಪ್ಲಿಕೇಟ್ ಬಿಜೆಪಿ ಕಾರ್ಯಕರ್ತ ಆಗಿದ್ದಾರೆ. ಅವರು ಕೆಜೆಪಿಗೆ ಹೋಗಿ ಬಂದಿದ್ದಾರೆ. ರಾಘವೇಂದ್ರ ಸೋತ ಬಳಿಕ ಒಂದು ಸಮಸ್ಯೆ ನಿವಾರಣೆ. ಲೋಕಸಭೆ ಚುನಾವಣೆ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದೊಂದು ಸಮಸ್ಯೆ ನಿವಾರಣೆ ಆದಂತಾಗಲಿದೆ. ಇನ್ನೂ ನಾನು ಗೆದ್ದ ಕೂಡಲೇ ವಿಜಯೇಂದ್ರನ ಅಪ್ಪ ಯಡಿಯೂರಪ್ಪ (Yediyurappa) ಬಂದು ಬಿಜೆಪಿಗೆ ಕರೆದುಕೊಂಡು ಹೋಗಲಿದ್ದಾರೆ ಎಂದು ತಿಳಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗದೀಶ್‌ ಶೆಟ್ಟರ್ ಕಾಂಗ್ರೆಸ್‌ಗೆ ಹೋಗಿದ್ದರು. ಇದೀಗ ಯಡಿಯೂರಪ್ಪ ಅವರ ಮನೆಗೆ ಹೋಗಿ ಶೆಟ್ಟರ್ ಅವರನ್ನು ಮತ್ತೆ ಕರೆದುಕೊಂಡು ಬಂದು ಅವರಿಗೆ ಬೆಳಗಾವಿಯ ಎಂಪಿ ಟಿಕೆಟ್ ಕೊಟ್ಟಿದ್ದಾರೆ. ಅಪ್ಪ-ಮಕ್ಕಳ ಷಡ್ಯಂತ್ರದಿಂದ ಹೊರಗೆ ಬಂದಿದ್ದೇನೆ. ನನಗೂ ಈಗ ನಿರಾಳವಾಗಿದೆ ಎಂದು ಹೇಳಿದರು.

BSY VIJAYENDRA

ಜನರಲ್ಲಿ‌ ಬಹಳ ಅನುಮಾನ ಇತ್ತು.‌ ನಾನು ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಅಂತಾ ಈಗ ಸ್ಪಷ್ಟವಾಗಿ ಸಂದೇಶ ಹೋಗಿದೆ. ಪಕ್ಷದಿಂದ ಉಚ್ಚಾಟನೆ ಮಾಡಿರುವುದಕ್ಕೆ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುವೆ. ನನ್ನ ಸ್ಪರ್ಧೆ ಕುರಿತು ಅನುಮಾನ ವ್ಯಕ್ತಪಡಿಸುತ್ತಿದ್ದರು. ಕೆಲವರು ಗೊಂದಲ ಮಾಡುತ್ತಿದ್ದರು. ಎಲ್ಲವೂ ಕ್ಲಿಯರ್ ಆಗಿದೆ. ನನ್ನಿಂದ ಬೆಳೆದ ಶಿಷ್ಯರ ಬಗ್ಗೆ ಮಾತನಾಡಲ್ಲ. ನನ್ನ ಹೆಸರಿನ ಡಿ.ಎಸ್.‌ಈಶ್ವರಪ್ಪ ಅವರನ್ನು ಇವರೇ ನಿಲ್ಲಿಸಿದ್ದಾರೆ. ಇನ್ನೂ 10 ಜನರನ್ನು ಅಪ್ಪ-ಮಕ್ಕಳು ನಿಲ್ಲಿಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮತ್ತೆ 4 ತಿಂಗಳು ಮುರುಘಾ ಶ್ರೀಗೆ ಜೈಲು

ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತದೆ. ನೀವು ಕಟ್ಟಿದ ಪಕ್ಷದಿಂದಲೇ ನಿಮಗೆ ಉಚ್ಚಾಟನೆ ಆಗಿರುವುದು ನೋವಾಗಿದೆ ಎಂದು ಬಿಜೆಪಿಗರು ಹೇಳುತ್ತಿದ್ದಾರೆ. ರಾಜ್ಯದ ಎಲ್ಲ ಕಾರ್ಯಕರ್ತರು ನೋವಿನಲ್ಲಿ ಇದ್ದಾರೆ. ಚುನಾವಣೆ ಮುಗಿದ ಬಳಿಕ ಒಳಗೆ ಹೋಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Narendra Modi 1

ಕಾಂಗ್ರೆಸ್ ಪಕ್ಷವನ್ನು ಈ ಜನುಮದಲ್ಲಿ ಸೇರುವುದಿಲ್ಲ. ಇದನ್ನು ಅರಿಯಬೇಕು. ಹಿಂದುತ್ವವಾದಿ ಕಾರ್ಯಕರ್ತರು ಸೇರುತ್ತಿದ್ದಾರೆ. ದೊಡ್ಡ ಸಂಖ್ಯೆಯ ಬಲವೇ ನನಗಿದೆ. ಮೋದಿನಾ ಟೀಕೆ ಮಾಡುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಚೊಂಬು ಸಿಗುವುದು ಗ್ಯಾರಂಟಿ ಆಗಿದೆ. ಪ್ರಧಾನಿ ಮೋದಿ, ಯತೀಂದ್ರ ಸಿದ್ದರಾಮಯ್ಯ ತಾಳಿ ವಿಷಯ ಏಕೇ ಎತ್ತಿದ್ದಾರೋ ಗೊತ್ತಿಲ್ಲ. ಮಹಿಳೆಯರಿಗೆ ಮಾಂಗಲ್ಯ ಪವಿತ್ರವಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಇರುವವರೆಗೂ ಮುಸ್ಲಿಮರ ಗೂಂಡಾಗಿರಿ ನಿಲ್ಲುವುದಿಲ್ಲ. ಮುಸ್ಲಿಮರಿಂದ ಕಾಂಗ್ರೆಸ್ ಪಕ್ಷ ಉಸಿರಾಡುತ್ತಿದೆ ಎಂದು ಆ ಪಕ್ಷದ ನಾಯಕರು ತಿಳಿದಿರುವುದು ಮೂರ್ಖತನ ಆಗಿದೆ ಎಂದು ಟಾಂಗ್‌ ಕೊಟ್ಟರು. ಅಲ್ಲದೇ, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ತನಿಖೆ ನಡೆಸಿ ಸಿಐಡಿ ಏನು ವರದಿ ಕೊಡುತ್ತದೆ? ‌ಅದು ಸರ್ಕಾರದ ಕಂಟ್ರೋಲ್‌ನಲ್ಲಿ ಇದೆ. ಸಿಬಿಐಗೆ ಕೊಡಬೇಕು ಎಂದು ಒತ್ತಾಯಿಸಿದರು.

TAGGED:B. S.Yediyurappabjpk s eshwarappaLok Sabha elections 2024shivamoggaಕೆ.ಎಸ್.ಈಶ್ವರಪ್ಪಯಡಿಯೂರಪ್ಪಲೋಕಸಭಾ ಚುನಾವಣೆ 2024ಶಿವಮೊಗ್ಗ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
3 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
4 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
4 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
5 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
6 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?