Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿ ಅವರು ಏನೇ ಮಾಡಿದ್ರು ನಾನು ರಾಜೀನಾಮೆ ಕೊಡೊಲ್ಲ: ಪ್ರಿಯಾಂಕ್ ಖರ್ಗೆ

Public TV
Last updated: December 29, 2024 3:17 pm
Public TV
Share
4 Min Read
Priyank kharge
SHARE

– ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ಪ್ರೂವ್‌ ಆಗಿದೆ – ವಿಜಯೇಂದ್ರಗೆ ಟಾಂಗ್‌

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್‌ನಲ್ಲಿ ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ಇಲ್ಲಸಲ್ಲದ ಮಾತು ಹೇಳಿ ವಿಜಯೇಂದ್ರ ಮರ್ಯಾದೆ ಕಳೆದುಕೊಳ್ಳೋದು ಬೇಡ. ಮಣಿಕಂಠ ರಾಥೋಡ್ ವಿಚಾರದಲ್ಲಿ ಇದೇ ಬಿಜೆಪಿ ಅವರು ಕಲಬುರ್ಗಿಗೆ ಬಂದು ನನ್ನ ರಾಜೀನಾಮೆ ಕೇಳಿದ್ರು. ಆಮೇಲೆ ಏನ್ ಆಯ್ತು. ಅ ಬಗ್ಗೆ ವಿಜಯೇಂದ್ರ ಮಾತಾಡಿದ್ರಾ? ಕಲಬುರ್ಗಿ ರಿಪಬ್ಲಿಕ್ ಅಂತೀರಾ ನಾನು ಕೇಳಿದ ಪ್ರಶ್ನೆಗೆ ಉತ್ತರ ಕೊಡಿ ಮೊದಲು. IPL ದಂಧೆ ಮಾಡ್ತಿರೋ ಶಾಸಕರು ಯಾರು? ಅಕ್ಕಿ ಕಳ್ಳತನ, ಹಾಲು ಕಳ್ಳತನ ಮಾಡಿ ಕೇಸ್ ಹಾಕಿಸಿಕೊಂಡವರು ಯಾರು? ಮರಳು ಮಾಫಿಯಾ ಮಾಡಿರೋರು ಯಾರು? ಇತಿಹಾಸ ತೆಗೆದು ನೋಡಿ ವಿಜಯೇಂದ್ರ ಮಾತಾಡಲಿ. ರಾಜು ಕಪನೂರು ಬಿಜೆಪಿ ಎಸ್ಸಿ ಸೆಲ್ ಅಧ್ಯಕ್ಷ ಆಗಿದ್ರು. ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬಂದಿರೋದು. ನಾವೇನು ಓಡಿ ಹೋಗ್ತಿಲ್ಲ. ತನಿಖೆ ಆಗಲಿ. FSL ವರದಿ ಬರಲಿ ಎಂದರು. ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಭಾನುವಾರ ಮೃತ ಸಚಿನ್ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ

Sachin Panchal

ಮೊದಲು ನಾನು ಕೇಳಿದ ಪ್ರಶ್ನೆಗೆ ಬಿಜೆಪಿ ಅವರು ಉತ್ತರ ಕೊಡಲಿ. ಯಡಿಯೂರಪ್ಪ ವಿರುದ್ಧ ಫೋಕ್ಸೊ ಕೇಸ್ ಪ್ರೂವ್ ಆಗಿದೆ. ಅದರ ಬಗ್ಗೆ ಮಾತಾಡಿ. ಮುನಿರತ್ನ ಕೇಸ್, ಸಿ.ಟಿ.ರವಿ ಕೇಸ್ ಬಗ್ಗೆ ಏನ್ ಹೇಳ್ತಾರೆ. ನನ್ನ ರಾಜೀನಾಮೆ ಕೇಳೋ ನೈತಿಕತೆ ಇದೆಯಾ ಅಂತ ಬಿಜೆಪಿ ನಾಯಕರ ವಿರುದ್ಧ ಪ್ರಿಯಾಂಕ್ ಕಿಡಿಕಾರಿದರು.

ಕೋವಿಡ್ ಹಗರಣದ ಬಗ್ಗೆ ಕುನ್ನಾ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಯಡಿಯೂರಪ್ಪ, ಶ್ರೀರಾಮುಲು ಅಕ್ರಮ ಮಾಡಿರೋ ಬಗ್ಗೆ. ಅವರ ರಾಜೀನಾಮೆ ಪಡೆದ್ರಾ? ದಾಖಲೆ ಇಟ್ಟುಕೊಂಡು ಪುರಾವೆ ಇಟ್ಟುಕೊಂಡು ಮಾತಾಡಿ. ನಿಮ್ಮ ಹೈಕಮಾಂಡ್ ಲೀಡರ್‌ಗಳ ಮನವೊಲಿಕೆ ಮಾಡೋಕೆ ಆರೋಪ ಮಾಡಬೇಡಿ ಅಂತ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟರು. ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿ 6 ಮಂದಿ ವಿರುದ್ಧ ಎಫ್‍ಐಆರ್

BY Vijayendra

ಬಿಜೆಪಿ ನಿಯೋಗದಿಂದ ಇಂದು ಸಚಿನ್ ನಿವಾಸಕ್ಕೆ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿಯೋಗ ಹೋಗಬೇಕಿರೋದು ಬೀದರ್‌ಗೆ ಅಲ್ಲ ಮುನಿರತ್ನ ಮನೆಗೆ. HIV ಪೀಡಿತರನ್ನ ದುರುಪಯೋಗ ಮಾಡಿಕೊಂಡು ರಾಜಕೀಯ ಮಾಡಿರೋದರ ಬಗ್ಗೆ ಸತ್ಯ ಸಂಶೋಧನೆ ಆಗಬೇಕು. ಕುನ್ನಾ ವರದಿಯಲ್ಲಿ ಹೇಳಿರೋ ಅಕ್ರಮದ ಬಗ್ಗೆ ಸತ್ಯ ಶೋಧನೆ ಆಗಬೇಕು. ಸಿಟಿ ರವಿ ಮಾತಾಡಿರೋ ಮಾತಿನ ಮೇಲೆ ಸತ್ಯ ಸಂಶೋಧನೆ ಆಗಬೇಕು. ಯಡಿಯೂರಪ್ಪ ಯಾವುದೇ ವೇದಿಕೆ ಹತ್ತಬಾರದು ಅಂತ ಅವರ ಪಕ್ಷದ ನಾಯಕರೇ ಹೇಳ್ತಿದ್ದಾರೆ. ಅದರ ಬಗ್ಗೆ ಸತ್ಯ ಶೋಧನೆ ಆಗಲಿ. ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ಅದನ್ನ ಮೊದಲು ನೋಡಿಕೊಳ್ಳಿ. ಬಿಜೆಪಿ ಅವರು ತಮ್ಮ ಹುಳುಕು ಮುಚ್ಚಿ ಹಾಕೋಕೆ ಇವೆಲ್ಲ ಆರೋಪ ಮಾಡ್ತಿದ್ದಾರೆ. ವಕ್ಫ್ ವಿವಾದ ಮಾಡಿದ್ರು ಅದರ ಸತ್ಯ ಸಂಶೋಧನೆ ಏನು? ಅದರ ಬಗ್ಗೆ ಯಾಕೆ ಮಾತಾಡೊಲ್ಲ. ನನ್ನ ವಿರುದ್ಧ ಪುರಾವೆ ಇಲ್ಲ. ದಾಖಲಾತಿ ಇಲ್ಲ ಅಂತ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

ನಾನು ರಾಜೀನಾಮೆ ಕೊಡೊಲ್ಲ. ಬಿಜೆಪಿ ಅವರು ಹೇಳಿರೋ ತಾಳಕ್ಕೆ ನಾನು ಯಾಕೆ ಕುಣಿಯಲಿ? ನಾನು ಯಾಕೆ ರಾಜೀನಾಮೆ ಕೊಡಲಿ. ಎಂಟು ಜನ ಆರೋಪಿಗಳಲ್ಲಿ ಪ್ರಿಯಾಂಕ್ ಖರ್ಗೆ ಹೆಸರು ಡೆತ್‌ನೋಟ್‌ನಲ್ಲಿ ಇಲ್ಲ. ಬಿಜೆಪಿ ಅವರು ಹೇಳಿದಂತೆ ರಾಜೀನಾಮೆ ಕೊಡೋಕೆ ಆಗುತ್ತಾ? ಏನೇ ಆದರೂ ತನಿಖೆ ಆಗಲಿ. ಹೆಣ ಬಿದ್ದಾಗ ಬಿಜೆಪಿಗೆ ರಾಜಕೀಯ ಬರುತ್ತದೆ. ಅದು ಬಿಟ್ಟು ನ್ಯಾಯ ಕೊಡಿಸೋದು ಇಲ್ಲ. ನನಗೆ ನೈತಿಕತೆ ಇರೋದಕ್ಕೆ ಬಂದು ಮಾತಾಡ್ತಿರೋದು. ನಿಮ್ಮ ಪ್ರಶ್ನೆಗೆ ಉತ್ತರ ಕೊಡ್ತಿರೋದು. ಡೆತ್‌ನೋಟ್‌ನಲ್ಲಿ ನನ್ನ ಹೆಸರು ಎಲ್ಲಿದೆ. ಮೊದಲು ಡೆತ್‌ನೋಟ್ ಸರಿಯಾಗಿ ಬಿಜೆಪಿ ಅವರು ನೋಡಲಿ. ಬ್ಯಾಂಕ್‌ನಿಂದ ವ್ಯವಹಾರ ಮಾಡಿದ್ದಾರೆ. ಬಿಜೆಪಿ ಅವರು ಪ್ರೈವೇಟ್ ತನಿಖೆ ಏನಾದ್ರು ನಡೆಸುತ್ತಿದ್ದಾರೆ. ಸತ್ಯವನ್ನು ಸುಳ್ಳು ಮಾಡೋದು, ಸುಳ್ಳನ್ನ ಸತ್ಯ ಮಾಡೋದು ಬಿಜೆಪಿ ಅವರ ಗುಣ. ನಿಮ್ಮ ಕಲಬುರ್ಗಿ ಶಾಸಕರ ಇತಿಹಾಸ ಮೊದಲು ತಿಳಿದುಕೊಳ್ಳಿ. ಆಮೇಲೆ ಚರ್ಚೆಗೆ ಬನ್ನಿ ಅಂತ ಸವಾಲ್ ಹಾಕಿದರು. ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಅತ್ಮಹತ್ಯೆ ಕೇಸ್‌ – ಇಬ್ಬರು ಹೆಡ್‌ಕಾನ್‌ಸ್ಟೇಬಲ್‌ ಸಸ್ಪೆಂಡ್‌

ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಸಾಮಾನ್ಯ ಕಾರ್ಯಕರ್ತನಂತೆ ಮಾತಾಡೋದು ಬೇಡ. ಬಿಜೆಪಿ ಅವರು ಬೀದರ್‌ನಿಂದ ಚಾಮರಾಜನಗರದ ವರೆಗೂ ಚೀರಾಡಿ, ಬಟ್ಟೆ ಹರಿದುಕೊಳ್ಳಲಿ ಐ ಡೋಂಟ್ ಕೇರ್. ಪಾರದರ್ಶಕವಾಗಿ ನಾನು ರಾಜಕೀಯ ಮಾಡ್ತಿದ್ದೇನೆ. ಯಾವುದೇ ಭ್ರಷ್ಟಾಚಾರ ನಾನು ಅವಧಿಯಲ್ಲಿ ಮಾಡಿಲ್ಲ. ನಾನು RSS ವಿರೋಧ ಮಾಡ್ತಿರೋದಕ್ಕೆ, ಅವರ ಸಿದ್ಧಾಂತ ವಿರೋಧ ಮಾಡ್ತಿರೋದಕ್ಕೆ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ. ನೀವು ಏನೇ ಮಾಡಿದ್ರು ನಾನು ಹೆದರೊಲ್ಲ. ಐಟಿ, ಇಡಿ, ಸಿಬಿಐ, ಮೋದಿ, ಅಮಿತ್ ಶಾ, ರಾಜ್ಯಪಾಲರ ಮೂಲಕ ಏನಾದ್ರು ಮಾಡ್ತೀರಾ ನಾನು ಯಾವುದಕ್ಕೂ ಹೆದರೊಲ್ಲ ಎಂದರು.

TAGGED:bjpcongressKarnataka Contractor SuicidePriyank Khargeಕಾಂಗ್ರೆಸ್ಪ್ರಿಯಾಂಕ್ ಖರ್ಗೆಬಿಜೆಪಿ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
24 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

Shivam Death ElectricShock
Bengaluru City

ಕಲ್ಯಾಣಮಂಟಪದ ಏರ್ ಕೂಲರ್‌ನಿಂದ ಎಲೆಕ್ಟ್ರಿಕ್ ಶಾಕ್ – 4 ವರ್ಷದ ಮಗು ದುರ್ಮರಣ

Public TV
By Public TV
30 minutes ago
bengaluru stambede 1
Bengaluru City

ಬೆಳಗ್ಗಿನ ಜಾವ 4 ಗಂಟೆ ವರೆಗೆ ಕೆಲಸ ಮಾಡಿದ್ದ ಪೊಲೀಸರಿಗೆ ಮತ್ತೆ ಬಂದೋಬಸ್ತ್‌ ನೀಡಲು ಆಗ್ತಿತ್ತಾ? – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

Public TV
By Public TV
41 minutes ago
Chinnaswamy Stampede
Bengaluru City

Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

Public TV
By Public TV
58 minutes ago
RCB
Bengaluru City

Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

Public TV
By Public TV
2 hours ago
BY Vijayendra
Bengaluru City

ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ: ಹಾಲಿ‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

Public TV
By Public TV
2 hours ago
Mandya Death 3
Districts

ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?