ನವದೆಹಲಿ: ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುವುದಕ್ಕಿಂತ ನಾನು ಸಾಯುತ್ತೇನೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಹೇಳುವ ಮೂಲಕ ಯಾವುದೇ ಕಾರಣಕ್ಕೂ ಬಿಜೆಪಿ (Bharatiya Janata Party) ಪಕ್ಷ ಸೇರಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ಸಾಯುವವರೆಗೆ ಬಿಜೆಪಿ ಸೇರಲ್ಲ. ನನ್ನ ಸಾವನ್ನು ಬೇಕಿದ್ರೆ ಸ್ವೀಕರಿಸುತ್ತೇನೆ ಆದರೆ ಬಿಜೆಪಿ ಪಕ್ಷ ಮಾತ್ರ ಸೇರ್ಪಡೆಯಾಗಲ್ಲ. ನನಗೆ ಮುಖ್ಯಮಂತ್ರಿಯಾಗಲು ಇಷ್ಟವಿರಲಿಲ್ಲ. ಆದರೆ ಬಿಜೆಪಿಯವರು ನನ್ನನ್ನು ಒತ್ತಾಯಪೂರ್ವಕವಾಗಿ ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ. ಚುನಾವಣೆ ನಡೆಯಲಿ, ಆಗ ಯಾರಿಗೆ ಎಷ್ಟು ಸೀಟು ಬರುತ್ತದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದರು. ಇದನ್ನೂ ಓದಿ: ಟಿಕೆಟ್ ಕೊಡಲು ‘ತ್ರೀ’ ಸೂತ್ರಕ್ಕೆ ಬಿಜೆಪಿ ಮೊರೆ
ಒಟ್ಟಿನಲ್ಲಿ ಬಿಹಾರ ಸಿಎಂ (Bihar Chief Minister) ಇಂತಹ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಬಿಜೆಪಿಯೊಂದಿಗಿನ ಮೈತ್ರಿ ಮುರಿದು ಮಹಾಘಟಬಂಧನ್ನೊಂದಿಗೆ ಕೈಜೋಡಿಸಿದ ನಂತರ ನಿತೀಶ್ ಕುಮಾರ್, ನನ್ನ ಜೀವನದುದ್ದಕ್ಕೂ ನಾನು ಈ ಜನರೊಂದಿಗೆ ಯಾವುದೇ ರೀತಿಯಲ್ಲಿ ಹೋಗುವುದಿಲ್ಲ. ನಾವೆಲ್ಲರೂ ಸಮಾಜವಾದಿಗಳು ಒಟ್ಟಿಗೆ ಇರುತ್ತೇವೆ, ನಾವು ಬಿಹಾರದಲ್ಲಿ ನಾವು ಪ್ರಗತಿ ಸಾಧಿಸುತ್ತೇವೆ ದೇಶದ ಉನ್ನತಿಗೆ ಶ್ರಮಿಸುತ್ತೇನೆ ಎಂದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k