Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೆಟ್ರೋಲ್‌, ಡೀಸೆಲ್‌ ಬಳಿಕ ಬಸ್‌ ಟಿಕೆಟ್‌ ದರ ಏರಿಕೆಯಾಗುತ್ತಾ? – ಸಿಎಂ ಕೊಟ್ಟ ಉತ್ತರ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪೆಟ್ರೋಲ್‌, ಡೀಸೆಲ್‌ ಬಳಿಕ ಬಸ್‌ ಟಿಕೆಟ್‌ ದರ ಏರಿಕೆಯಾಗುತ್ತಾ? – ಸಿಎಂ ಕೊಟ್ಟ ಉತ್ತರ ಏನು?

Bengaluru City

ಪೆಟ್ರೋಲ್‌, ಡೀಸೆಲ್‌ ಬಳಿಕ ಬಸ್‌ ಟಿಕೆಟ್‌ ದರ ಏರಿಕೆಯಾಗುತ್ತಾ? – ಸಿಎಂ ಕೊಟ್ಟ ಉತ್ತರ ಏನು?

Public TV
Last updated: June 17, 2024 6:43 pm
Public TV
Share
3 Min Read
Siddaramaiah 2
SHARE

– ಗ್ಯಾರಂಟಿ ಯೋಜನೆಗೆ ಹಣವಿಲ್ಲ ಅಂತ ತೈಲ ಬೆಲೆ ಏರಿಸಿಲ್ಲ

ಬೆಂಗಳೂರು: ವೇತನ ಕೊಡಲು ದುಡ್ಡಿಲ್ಲ ಅಂತಲೋ, ಗ್ಯಾರಂಟಿ ಯೋಜನೆಗೆ (Congress Gurantee) ಹಣ ಇಲ್ಲ ಅಂತಲೋ ತೆರಿಗೆ ಹೆಚ್ಚಿಸಿದ್ದಲ್ಲ. ಹಾಗೆಂದು ಕರ್ನಾಟಕದಲ್ಲಿ ಆರ್ಥಿಕ ಸಂಪನ್ಮೂಲ ತುಂಬಿ ತುಳುಕುತ್ತಿದೆ ಅಂತಲೂ ಅಲ್ಲ. ಅಭಿವೃದ್ಧಿಗಾಗಿ ಸಂಪನ್ಮೂಲ ಕ್ರೋಢೀಕರಣ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬರಗಾಲದ ಬಗ್ಗೆ ಪರಿಹಾರ ತೆಗೆದುಕೊಳ್ಳಲು ಕೋರ್ಟಿಗೆ ಹೋಗಬೇಕಾಗಿ ಬಂತು. ಕೋರ್ಟು ಸೂಚನೆ ನೀಡಿದ ನಂತರ 18 ಸಾವಿರ ಕೋಟಿ ಕೇಳಿದರೆ 3,454 ಕೋಟಿ ರೂ. ಪರಿಹಾರ ನೀಡಿದ್ದಾರೆ.
ಬಿಜೆಪಿಯವರು ಬಡವರು, ದಲಿತರು, ಜನಸಾಮಾನ್ಯರ ಕಾರ್ಯಕ್ರಮಗಳ ಕಲ್ಯಾಣ ಕಾರ್ಯಕ್ರಮಗಳಿಗೆ ವಿರುದ್ಧವಿದ್ದಾರೆ. ಬಸ್‌ನಲ್ಲಿ ಉಚಿತ ಪ್ರಯಾಣ, ತಿಂಗಳಿಗೆ ಎರಡು ಸಾವಿರ ನೀಡಿದರೆ…

— Siddaramaiah (@siddaramaiah) June 17, 2024

ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ (Petrol, Diesel Price) ಬೆಲೆ ಏರಿಕೆ ಬಳಿಕ ಮುಂದೆ ಯಾವುದು ಏರಿಕೆ ಮಾಡ್ತಾರೆ ಎಂಬ ಅಂತಕ ಜನರಲ್ಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಜನರಿಗೆ ತೊಂದರೆ ಆಗುವ ರೀತಿ ಯಾವುದೇ ತೆರಿಗೆ ಹೆಚ್ಚಳ ಮಾಡಲ್ಲ ಎಂದಿದ್ದಾರೆ. ಇದೇ ವೇಳೆ ಬಸ್ ಟಿಕೆಟ್ ದರ ಏರಿಕೆಯಾಗುತ್ತಾ? ಎಂಬ ಪ್ರಶ್ನೆಗೆ ಉತ್ತರಿಸಿ, ಹಿಂದೆ ಯಾವಾಗ ಟಿಕೆಟ್ ದರ ಏರಿಕೆ ಯಾಗಿದೆ ಗೊತ್ತಾ? ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಲ್ಲ. ಇನ್ನೂ ಇಲಾಖೆ ಜೊತೆ ಚರ್ಚೆ ಮಾಡಬೇಕು ಎಂದಿದ್ದಾರೆ.

ಅಬಕಾರಿ ಸುಂಕ ಏರಿಕೆ ಬಗ್ಗೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ @BJP4Karnataka ಅವರಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ?
ಡಾ. ಮನಮೋಹನ್‌ ಸಿಂಗ್‌ ಅವರ ಅವಧಿಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 113 ಡಾಲರ್‌ ಇತ್ತು. 2015 ರಲ್ಲಿ ಈ ಬೆಲೆ ಅರ್ಧಕ್ಕರ್ಧ ಕಡಿಮೆಯಾದರೂ, ಬೆಲೆ…

— Siddaramaiah (@siddaramaiah) June 17, 2024

ಅಂಬಾನಿ-ಅದಾನಿ ಸಾಲ ಮನ್ನಾ ಮಾಡಿದ್ದೇವಾ?
ಈ ಲೋಕಸಭಾ ಚುನಾವಣೆಯಲ್ಲಿ ನಮಗೆ ಮತ ಹೆಚ್ಚಾಗಿದೆ. 1 ಸೀಟಿನಿಂದ 9 ಸೀಟು ಆಯಿತು. ಸೋತವರು ನಾವೋ? ಅವರೋ? ಅಂತಾ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಈಗ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ ಅನ್ನುತ್ತಾರೆ. ಗ್ಯಾರಂಟಿ ಯೋಜನೆಗೆ 60 ಸಾವಿರ ಕೋಟಿ ರೂ. ಬೇಕು. ನಮ್ಮ ತೀರ್ಮಾನವನ್ನು ಹೊಗಳಬೇಕು. ಮೋದಿ ತರ ಅದಾನಿ-ಅಂಬಾನಿಯ ಸಾಲ ಮನ್ನಾ ಮಾಡುತ್ತಿದ್ದೇವಾ? ಅಂತಾ ಖಾರವಾಗಿ ಪ್ರಶ್ನಿಸಿದ್ದಾರೆ.

ಅಭಿವೃದ್ಧಿಗೆ ತೆರಿಗೆ ಬೇಕಲ್ಲವೇ?
ಬೆಂಗಳೂರಲ್ಲಿ ಪೆಟ್ರೋಲ್ ಬೆಲೆ 102.82 ರೂ. ಇತ್ತು. ಕೇರಳದಲ್ಲಿ 106 ರೂ., ಆಂಧ್ರದಲ್ಲಿ 109 ರೂ. ತೆಲಂಗಾಣದಲ್ಲಿ 107 ರೂ. ಮಹಾರಾಷ್ಟ್ರದಲ್ಲಿ 104 ರೂ. ತಮಿಳುನಾಡಿನಲ್ಲಿ 102 ರೂ. ಇದೆ. ರಾಜಸ್ತಾನ, ಮಧ್ಯ ಪ್ರದೇಶ, ಗುಜರಾತ್‌ನಲ್ಲಿ 94 ರೂ. ಇದೆ. ಅಲ್ಲಿ ಸಾಗಣೆ ವೆಚ್ಚ ಇಲ್ಲ. ಅಲ್ಲಿ ಡೀಸೆಲ್ ವೆಚ್ಚ ಹೆಚ್ಚಿದೆ. ರಾಜ್ಯದ ಅಭಿವೃದ್ಧಿಗೆ ತೆರಿಗೆ ಬೇಕಲ್ಲವೇ? ಬೇರೆ ರಾಜ್ಯದಲ್ಲಿ ತೆರಿಗೆ ಪ್ರಮಾಣ ಜಾಸ್ತಿ ಇದೆ. ನಾವು ಸ್ವಲ್ಪ ಜಾಸ್ತಿ ಮಾಡೋಣ ಅಂತ ಮಾಡಿದೆವು. ಬಿಜೆಪಿಯವರಿಗೆ ಪ್ರತಿಭಟಿಸುವ ನೈತಿಕತೆ ಇಲ್ಲ ಅಂತ ಆಕ್ರೋಶ ಹೊರ ಹಾಕಿದ್ದಾರೆ.

ಕೇಂದ್ರ ಸರ್ಕಾರ ಜಿಎಸ್‌ಟಿ ತಂದ್ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಅಧಿಕಾರ ಇಲ್ಲ. ಪೆಟ್ರೋಲ್, ಡೀಸೆಲ್‌ ಮೇಲಿನ ಸೆಸ್ ವಿಧಿಸುವ ಅಧಿಕಾರ, ಅಬಕಾರಿ ಸುಂಕ, ಸ್ಟ್ಯಾಂಪ್ ಡ್ಯೂಟಿ ವಿಧಿಸುವ ಅಧಿಕಾರ ಮಾತ್ರ ರಾಜ್ಯ ಸರ್ಕಾರಕ್ಕೆ ಇದೆ. ಉಳಿದೆಲ್ಲ ತೆರಿಗೆಯನ್ನ ಅವರೇ ವಿಧಿಸ್ತಾರೆ. ಕರ್ನಾಟಕ ಸರ್ಕಾರ ಪಾಪರ್ ಅಂತೆ, ಪಾಪರ್ ಅಂತಾ ಡಿಕ್ಲೇರ್ಡ್ ಯಾರು ಮಾಡೋದು? ಪಾಪರ್ ಅಂದ್ರೆ ಅರ್ಥ ಗೊತ್ತಾ ಅಶೋಕನಿಗೆ? ನಾವು ಯಾವುದಾದ್ರೂ ಸಂಬಳ ಕೊಡೋದನ್ನ ನಿಲ್ಲಿಸಿದ್ದೀವಾ? ಅಂತ ಸಿಎಂ ಕಿಡಿಕಾರಿದ್ದಾರೆ.

5495 ಕೋಟಿ ರೂ. ತೆರಿಗೆ ಪಾಲು ಕಡಿಮೆ ಆಗಿದೆ. ವಿಶೇಷ ಅನುದಾನ ಘೋಷಣೆ ಮಾಡಿ ಹಣ ಕೊಡಲಿಲ್ಲ. ನಿರ್ಮಲಾ ಸೀತಾರಾಮನ್ ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆ ವಿಶೇಷ ಅನುದಾನ, ಬೆಂಗಳೂರು ಪೆರಿಫಿರಲ್ ರಿಂಗ್ ರೋಡ್ ಅನುದಾನ ಕೊಡಲಿಲ್ಲ. ಇವರು ಯಾರ ಬಗ್ಗೆ ಪ್ರತಿಭಟನೆ ಮಾಡಬೇಕು ಅಂತ ವ್ಯಂಗ್ಯವಾಡಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ ಬರುವ ತೆರಿಗೆ ಹಣ ಕಡಿಮೆ ಆಯ್ತು. ಇದರ ಬಗ್ಗೆ ಒಂದು ದಿವಸ ಒಬ್ಬರೂ ಮಾತನಾಡಲಿಲ್ಲ. ಬರಗಾಲದ ಪರಿಹಾರ ಹಣ ಪಡೆಯಬೇಕು ಅಂದ್ರೆ ಕೋರ್ಟ್‌ಗೆ ಹೊಗಬೇಕಾಯ್ತ. ಕೋರ್ಟ್ ಹೇಳಿದ ಮೇಲೆ 3,500 ಕೋಟಿ ರೂ. ಬಂತು. ನಾವು ಕೇಳಿದ್ದು 18,000 ಕೋಟಿ ರೂ. ನಿಜವಾಗಿ ಬಡವರ ಕಾರ್ಯಕ್ರಮಕ್ಕೆ ವಿರೋಧ ಮಾಡ್ತಿರೋದು ಬಿಜೆಪಿ ಎಂದು ತಿರುಗೇಟು ನೀಡಿದ್ದಾರೆ.

TAGGED:bengalurudieselpetrolPrice Hike. Bus Ticket Pricesiddaramaiahಡೀಸೆಲ್ಪೆಟ್ರೋಲ್ಬೆಂಗಳೂರುಬೆಲೆ ಏರಿಕೆ. ಬಸ್‌ ಟಿಕೆಟ್‌ ದರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Akhil Viswanath Malayalam film
ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ
Cinema Latest South cinema Top Stories
Dhurandhar Movie
ದುರಂಧರ್ ಚಿತ್ರ ಕಂಡು ಕಣ್ಣು ಕೆಂಪು ಮಾಡಿಕೊಂಡ ಪಾಕಿಸ್ತಾನ..ಏನ್ ಕಾರಣ?
Cinema Latest Top Stories
Premi Movie 2
`ಪ್ರೇಮಿ’ಗಾಗಿ ಮೊದಲ ಹಾಡು ಬಿಡುಗಡೆ
Cinema Latest Sandalwood
MB Khazima
ವಿಶ್ವ ಚಾಂಪಿಯನ್ ಖಾಜಿಮಾ ಬಯೋಪಿಕ್‌ಗೆ ಚಾಲನೆ
Cinema Latest Sandalwood South cinema Top Stories

You Might Also Like

cow theft in koppa chikkamagaluru outrage from hindu activists
Chikkamagaluru

ಹೈಟೆಕ್ ಕಾರಿನಲ್ಲಿ ಗೋ ಕಳ್ಳತನ – ಹಿಂದೂ ಕಾರ್ಯಕರ್ತರಿಂದ ಸಿನಿಮಾ ಶೈಲಿಯಲ್ಲಿ ಚೇಸ್!

Public TV
By Public TV
23 minutes ago
coffee worth thousands of rupees stolen 6 arrested in hassan beluru
Crime

ಕಾಫಿ ಬೆಳೆಗಾರನಿಗೆ ಥಳಿಸಿ ಕಳ್ಳತನ – 6 ಮಂದಿ ಅರೆಸ್ಟ್

Public TV
By Public TV
46 minutes ago
elephant mundagod
Latest

ಮುಂಡಗೋಡಿನ ಕಾತೂರಿನಲ್ಲಿ ಆನೆ ಪ್ರತ್ಯಕ್ಷ; ಗಂಟೆಗಟ್ಟಲೇ ರಸ್ತೆ ಬಂದ್

Public TV
By Public TV
48 minutes ago
US Shooting
Crime

ಅಮೆರಿಕದಲ್ಲಿ ಎಂಜಿನಿಯರಿಂಗ್‌ ಪರೀಕ್ಷೆ ವೇಳೆ ಗುಂಡಿನ ದಾಳಿ; ಇಬ್ಬರು ಸಾವು, 8 ಮಂದಿಗೆ ಗಾಯ

Public TV
By Public TV
1 hour ago
DVG SOUND AV 6
Chitradurga

ದಾವಣಗೆರೆ ಗಡಿ ಗ್ರಾಮದಲ್ಲಿ ವಿಚಿತ್ರ ಶಬ್ಧ – ಬೆಚ್ಚಿಬಿದ್ದ ಗ್ರಾಮಸ್ಥರು

Public TV
By Public TV
1 hour ago
Cabbage Kabab
Food

ಸಂಡೇ ಸ್ಪೆಷಲ್ ಕ್ಯಾಬೇಜ್ ಕಬಾಬ್ ಮಾಡಿ…… ಸವಿಯಿರಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?