– ಎಕ್ಸ್ನಲ್ಲಿ ವೀಡಿಯೋ ಹಂಚಿಕೊಂಡ ಕೆಎ ಪೌಲ್
ಸನಾ: ಯೆಮೆನ್ನಲ್ಲಿ (Yemen) ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ (Nimisha Priya) ವಿಧಿಸಲಾಗಿದ್ದ ಮರಣದಂಡನೆ ರದ್ದಾಗಿದೆ ಎಂದು ಗ್ಲೋಬಲ್ ಪೀಸ್ ಇನಿಶಿಯೇಟಿವ್ನ ಸಂಸ್ಥಾಪಕ ಡಾ. ಕೆ.ಎ ಪೌಲ್ (KL Paul) ತಿಳಿಸಿದ್ದಾರೆ.
ಈ ಕುರಿತು ಭಾರತ ಸರ್ಕಾರ, ನಿಮಿಷ ಪ್ರಿಯಾ ಕುಟುಂಬಸ್ಥರು ಮತ್ತು ಮರಣದಂಡನೆ ಮುಂದೂಡಿಕೆ ಕಾರಣರಾದ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯಿಂದ ಯಾವುದೇ ಅಧಿಕೃತ ಹೇಳಿಕೆಗಳು ಹೊರಬಂದಿಲ್ಲ.ಇದನ್ನೂ ಓದಿ: ಜಗದೀಪ್ ಧನಕರ್ ರಾಜೀನಾಮೆ ಸುತ್ತ ಅನುಮಾನದ ಹುತ್ತ- ದಿಢೀರ್ ರಿಸೈನ್ ಮಾಡಿದ್ದು ಯಾಕೆ?
ಸೋಮವಾರ ರಾತ್ರಿ ಯೆಮೆನನ್ ಸನಾದಿಂದ ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ ಪೌಲ್ ಅವರು, ದೇವರ ದಯೆಯಿಂದ, ನಿಮಿಷ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ. ಅವರನ್ನು ಬಿಡುಗಡೆ ಮಾಡಲು ಭಾರತಕ್ಕೆ ಅವಕಾಶ ಕಲ್ಪಿಸಲಾಗಿದೆ. ನಿಮಿಷಾ ಅವರ ಸುರಕ್ಷಿತ ಪ್ರಯಾಣಕ್ಕಾಗಿ ರಾಜತಾಂತ್ರಿಕರನ್ನು ಕಳುಹಿಸಲು ತಯಾರಿ ನಡೆಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ನಿಮಿಷಾ ಅವರ ಮರಣದಂಡನೆ ರದ್ದಾಗಿರುವುದನ್ನು ಖಚಿತಪಡಿಸಿ ಈವರೆಗೆ ಯಾವುದೇ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮುಖ್ಯವಾಹಿನಿ ಮಾಧ್ಯಮಗಳು ವರದಿ ಮಾಡಿಲ್ಲ.
BIG BREAKING NEWS. Indian Nurse Nimisha Priya from Sanaa , Yemen Prison will be released . English & Telugu . pic.twitter.com/oAbX5LABly
— Dr KA Paul (@KAPaulOfficial) July 21, 2025
ಈ ಮೊದಲು ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರು ಯೆಮನ್ನಲ್ಲಿ ಜು.16ಕ್ಕೆ ಮರಣದಂಡನೆಗೆ ಗುರಿಯಾಗಬೇಕಿತ್ತು. ಆದರೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ಮಧ್ಯಪ್ರವೇಶದ ಬಳಿಕ ಈ ಬೆಳವಣಿಗೆ ನಡೆದಿತ್ತು ಎಂದು ಉನ್ನತ ಮೂಲಗಳು ತಿಳಿಸಿದ್ದವು.
ಏನಿದು ಪ್ರಕರಣ?
2017ರಲ್ಲಿ ನಿಮಿಷಾ ಪ್ರಿಯಾ ಅವರಿಂದ ತಲಾಲ್ ಅಬ್ದೋ ಮೆಹದಿ ಕೊಲೆಯಾಗಿದ್ದರು. ಪ್ರಕರಣ ಸಂಬಂಧ ಪ್ರಿಯಾಳಿಗೆ ಯೆಮನ್ ರಾಷ್ಟ್ರದ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಈ ಸಂಬಂಧ ಕೊಲೆಯಾದ ವ್ಯಕ್ತಿಯ ಸಹೋದರ ಅಬ್ದೆಲ್ಫತ್ತಾ ಮೆಹದಿ ಪ್ರತಿಕ್ರಿಯಿಸಿದ್ದು, ಈ ಅಪರಾಧಕ್ಕೆ ಕ್ಷಮೆ ನೀಡಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದರು.ಇದನ್ನೂ ಓದಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ