ಅಭಿನಂದನ್‍ ಮೀಸೆಯನ್ನು ರಾಷ್ಟ್ರೀಯ ಮೀಸೆಯನ್ನಾಗಿ ಮಾಡಿ: ಎ.ಆರ್ ಚೌಧರಿ ಮನವಿ

Public TV
1 Min Read
Abhinandan Varthaman

ನವದೆಹಲಿ: ಭಾರತೀಯ ವಾಯು ಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಮೀಸೆಯನ್ನು ರಾಷ್ಟ್ರೀಯ ಮೀಸೆಯೆಂದು ಘೋಷಿಸಿ, ಗೌರವ ನೀಡಿ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮನವಿ ಮಾಡಿದ್ದಾರೆ.

ಲೋಕಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಅವರು, ವಿಂಗ್ ಕಮಾಂಡರ್ ಅಭಿನಂದನ್ ಅವರು ನಮ್ಮ ಹೆಮ್ಮೆಯ ಯೋಧ. ಸರ್ಕಾರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಬೇಕು ಹಾಗೂ ಅವರ ಮೀಸೆಯನ್ನು ರಾಷ್ಟ್ರೀಯ ಮೀಸೆಯೆಂದು ಘೋಷಿಸಬೇಕು ಎಂದು ಹೇಳಿದರು.

ಬಾಲಕೋಟ್ ನಲ್ಲಿರುವ ಉಗ್ರರ ನೆಲೆಯ ಮೇಲೆ ದಾಳಿ ನಡೆಸಿದ ಬಳಿಕ ಫೆ.27 ರಂದು ಪಾಕಿಸ್ತಾನ ಭಾರತದ ಮೇಲೆ ವಾಯು ದಾಳಿ ನಡೆಸಲು ಮುಂದಾಗಿತ್ತು. ಈ ವೇಳೆ ಪಾಕ್ ವಿಮಾನದ ಜೊತೆಗಿನ ಡಾಗ್ ಫೈಟ್ ಕಾಳಗದಲ್ಲಿ ಎಫ್-16 ವಿಮಾನವನ್ನು ಅಭಿನಂದನ್ ಹೊಡೆದು ಉರುಳಿಸಿದ್ದರು. ಈ ವೇಳೆ ಪಾಕ್ ಅಭಿನಂದನ್ ಅವರಿದ್ದ ಮಿಗ್ -21 ವಿಮಾನದ ಮೇಲೆ ಕ್ಷಿಪಣಿ ದಾಳಿ ಮಾಡಿತ್ತು. ಪರಿಣಾಮ ಅಭಿನಂದನ್ ವಿಮಾನ ಪತನಗೊಂಡು ಪಾಕ್ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಬಿದ್ದಿತ್ತು. ನಂತರ ಪಾಕ್ ಸೇನೆ ಅಭಿನಂದನ್ ಅವರನ್ನು ವಶಕ್ಕೆ ಪಡೆದು ಮಾರ್ಚ್ 1 ರಂದು ರಾತ್ರಿ ಬಿಡುಗಡೆ ಮಾಡಿತ್ತು.

abhinandan 1551541519

ವೀರಯೋಧ ಅಭಿನಂದನ್ ಭಾರತಕ್ಕೆ ಹಿಂದಿರುಗಿದ ಬಳಿಕ ಇಡೀ ದೇಶವೇ ಸಂಭ್ರಮಾಚರಣೆ ಮಾಡಿತ್ತು. ಅಲ್ಲದೆ ಹೆಮ್ಮೆಯಿಂದ ಹಲವು ಪೋಷಕರು ಅಭಿನಂದನ್ ಅವರ ಹೆಸರನ್ನು ತಮ್ಮ ಮಕ್ಕಳಿಗೆ ನಾಮಕರಣ ಮಾಡಿದ್ದರು. ಅಲ್ಲದೆ ಅವರ ಹೇರ್ ಸ್ಟೈಲ್, ಮಿಸೆ ಎಲ್ಲೆಡೆ ಸಖತ್ ಫೇಮಸ್ ಆಗಿತ್ತು.

Share This Article
Leave a Comment

Leave a Reply

Your email address will not be published. Required fields are marked *