Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿವೇಶನದ ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಅಧಿವೇಶನದ ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ

Belgaum

ಅಧಿವೇಶನದ ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ

Public TV
Last updated: December 9, 2018 7:53 am
Public TV
Share
2 Min Read
suvarna vidhana soudha
SHARE

-ಪ್ರತಿಪಕ್ಷದ ಅಸ್ತ್ರವಾಗಲಿದೆ ಉತ್ತರ ಕರ್ನಾಟಕದ ಕಡೆಗಣನೆ, ಬರ ನಿರ್ವಹಣೆ
-ಶಾಸಕರಿಗೆ ಮಧ್ಯಾಹ್ನದ ಊಟ, ವಸತಿ ವ್ಯವಸ್ಥೆ ಅಷ್ಟೇ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು, ಅನೇಕ ವಿಷಯಗಳ ಚರ್ಚೆಗೆ ಸಾಕ್ಷಿಯಾಗಲಿದೆ. ಈಗಾಗಲೇ ಅಧಿವೇಶನದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ.

ರೈತರ ನೂರೆಂಟು ಸಮಸ್ಯೆಗಳ ನಡುವೆ ಅಧಿವೇಶನ ನಡೆಸುತ್ತಿದ್ದು, ಮೈತ್ರಿ ಸರ್ಕಾರ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಹಲವು ಕ್ರಮಗಳನ್ನು ಕೈಗೊಂಡಿದೆ. ಈ ಅಧಿವೇಶನವು ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಭಾರೀ ಚರ್ಚೆಗೆ ವೇದಿಕೆಯಾಗಲಿದೆ. ರೈತರು ಮತ್ತು ಕಬ್ಬು ಬೆಳೆಗಾರರ ಸಮಸ್ಯೆ, ಸಾಲಮನ್ನಾ ವಿಳಂಬ, ಉತ್ತರ ಕರ್ನಾಟಕದ ಕಡೆಗಣನೆ, ಬರ ನಿರ್ವಹಣೆ ಸೇರಿದಂತೆ ಹಲವು ವಿಷಯಗಳನ್ನು ಇಟ್ಟುಕೊಂಡು ಪ್ರತಿಪಕ್ಷ ಬಿಜೆಪಿವು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವನ್ನು ತರಾಟೆ ತೆಗೆದುಕೊಳ್ಳಲು ಸಿದ್ಧತೆ ಮಾಡಿಕೊಂಡಿದೆ. ಪ್ರತಿಪಕ್ಷ ಬಿಜೆಪಿ ಅಸ್ತ್ರಗಳಿಗೆ ತಕ್ಕ ಪ್ರತಿ ಅಸ್ತ್ರ ಹೂಡಲು ಸರ್ಕಾರವೂ ಸಜ್ಜುಗೊಂಡಿದೆ.

171114kpn79

ಸುವರ್ಣಸೌಧದ ಎದುರು ರೈತರು, ಕಬ್ಬು ಬೆಳೆಗಾರರು ಹಾಗೂ ಉತ್ತರ ಕರ್ನಾಟಕದ ವಿವಿಧ ಮಠಾಧೀಶರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಪಕ್ಷ ಬಿಜೆಪಿ ನಾಯಕರೂ ಈ ಪ್ರತಿಭಟನೆ ಬೆಂಬಲಿಸಿದ್ದಾರೆ. ಹೀಗಾಗಿ ಪ್ರತಿಭಟನಾಕಾರರಿಗೆ ಸರ್ಕಾರವು ಸೂಕ್ತ ವ್ಯವಸ್ಥೆ ಕಲ್ಪಿಸಿದೆ. ಈ ಮೂಲಕ ಮೈತ್ರಿ ಸರ್ಕಾರವು ಮೊದಲ ದಿನವೇ ಭಾರೀ ಪ್ರತಿಭಟನೆಯ ಶಾಕ್ ಎದುರಿಸಬೇಕಾಗುತ್ತದೆ.

ಅಧಿವೇಶನ ನಿರ್ವಹಣೆಗೆ ಸೂಕ್ತ ಭದ್ರತೆ ಒದಗಿಸಿದ್ದು, 4 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ಎದುರಾಗದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ತೀವ್ರ ನಿಗಾ ವಹಿಸಲಿದ್ದಾರೆ. ಸುವರ್ಣಸೌಧದ ಸುತ್ತ ಭಾರೀ ಭದ್ರತೆ ಒದಗಿಸಲಾಗಿದೆ.

suvarna vidhana soudha 1

ವಿಶೇಷಾಧಿಕಾರಿ ನೇಮಕ:
ಅಧಿವೇಶನ ಪಾರದರ್ಶಕವಾಗಿರಲು ಹಾಗೂ ಸರ್ಕಾರದ ಹಣ ದುರುಪಯೋಗವಾಗದಿರಲು ಇದೇ ಮೊದಲ ಬಾರಿಗೆ ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಅವರನ್ನು ವಿಶೇಷ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಲಾಪ ಹೊರಗಿನ ನಿರ್ವಹಣಾ ಸಮಿತಿಗಳು ಪ್ರತಿಯೊಂದು ಖರ್ಚಿಗೂ ಉಜ್ವಲ್ ಕುಮಾರ್ ಘೋಷ್ ಅವರ ಮೂಲಕವೇ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ.

ದುಂದು ವೆಚ್ಚಕ್ಕೆ ಕತ್ತರಿ:
ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರ ಆಶಯದಂತೆ ಈ ಬಾರಿ ಅಧಿವೇಶನದಲ್ಲಿ ಅನಗತ್ಯ ವೆಚ್ಚ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿಯೊಂದು ವೆಚ್ಚದಲ್ಲಿಯೂ ಪಾರದರ್ಶಕತೆ ಕಾಯ್ದುಕೊಳ್ಳಲು ಸರ್ಕಾರ ಮುಂದಾಗಿದೆ. ಅಧಿವೇಶನದಲ್ಲಿ ಶಾಸಕರ ಊಟದ ಮೆನು ಬದಲಾಯಿಸಲಾಗಿದೆ. ಹಿಂದಿನ ಅಧಿವೇಶನಗಳಂತೆ ಇಲ್ಲಿಯ ಊಟದಿಂದ ಆರೋಗ್ಯದಲ್ಲಿ ಏರುಪೇರು ಆಗದಿರಲು ಆಯಾ ಭಾಗದ ಊಟದ ವ್ಯವಸ್ಥೆ ಮಾಡಲಾಗಿದೆ.

suvarna vidhana soudha 2

ಅಧಿವೇಶನದಲ್ಲಿ ಭಾಗವಹಿಸುವ ಶಾಸಕರಿಗೆ ಸರ್ಕಾರ ಈ ಬಾರಿ ಕೇವಲ ಮಧ್ಯಾಹ್ನದ ಊಟಕ್ಕೆ ಮಾತ್ರ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ಬೆಳಗಿನ ತಿಂಡಿ ಮತ್ತು ರಾತ್ರಿ ಊಟವನ್ನು ಶಾಸಕರು ತಮಗೆ ಸಿಗುವ ಭತ್ಯೆಯಲ್ಲಿಯೇ ಸೇವಿಸಬೇಕು. ತಮ್ಮ ಪಿಎ, ಗನ್ ಮ್ಯಾನ್ ಗಳು, ಡ್ರೈವರ್ ಗಳ ಊಟಕ್ಕೂ ಶಾಸಕರೇ ಭರಿಸಬೇಕು. ಅಷ್ಟೇ ಅಲ್ಲದೆ ಶಾಸಕರಿಗೆ ಮಾತ್ರ ರೂಂ ವ್ಯವಸ್ಥೆ ಮಾಡಲಾಗಿದೆ.

ಸಚಿವಾಲಯ ಶಿಫ್ಟ್:
ಅಧಿವೇಶನದ ಹಿನ್ನೆಲೆಯಲ್ಲಿ ವಿಧಾನಸಭೆ ಮತ್ತು ಪರಿಷತ್‍ನ ಎರಡೂ ಸಚಿವಾಲಯ ಸುವರ್ಣಸೌಧಕ್ಕೆ ಶಿಫ್ಟ್ ಆಗಿವೆ. ಸುಮಾರು 300 ಸಿಬ್ಬಂದಿ ಶನಿವಾರದಿಂದ ಬೆಳಗಾವಿ ಸುವರ್ಣಸೌಧದಲ್ಲಿ ಕೆಲಸ ಆರಂಭಿಸಿದ್ದಾರೆ. ಅಧಿವೇಶನದಲ್ಲಿ ಸುಮಾರು ಐದು ಸಾವಿರ ಅಧಿಕಾರಿ ವರ್ಗ, ಶಾಸಕರು ಹಾಗೂ ಪತ್ರಕರ್ತರಿಗೆ ವಸತಿ, ಊಟ, ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಭದ್ರತೆಗೆ ನಿಯೋಜಿತರಾಗುವ ಕನಿಷ್ಠ ಪೊಲೀಸ್ ಸಿಬ್ಬಂದಿಗೂ ಈ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಇಡೀ ಅಧಿವೇಶನದ ವೆಚ್ಚವನ್ನು 17.57 ಕೋಟಿ ರೂ. ಗೆ ನಿಗದಿಪಡಿಸಲಾಗಿದೆ.

dks hdk congress jds 1

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:belagaviMLAPublic TVwinter sessionಅಧಿವೇಶನಪಬ್ಲಿಕ್ ಟಿವಿಬೆಳಗಾವಿವಿಧಾನ ಪರಿಷತ್ವಿಧಾನಸಭೆಶಾಸಕರುಸಚಿವರುಸುವರ್ಣಸೌಧ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
7 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
8 hours ago
01 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-1

Public TV
By Public TV
8 hours ago
03 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-2

Public TV
By Public TV
8 hours ago
02 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-3

Public TV
By Public TV
8 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?