Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಳಿಗಾಲದ ಅಧಿವೇಶನ; ಸಿಎಂ ಕರೆದ ಸಭೆಗೆ ಬರೋದು ಅಸಾಧ್ಯ – ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚಳಿಗಾಲದ ಅಧಿವೇಶನ; ಸಿಎಂ ಕರೆದ ಸಭೆಗೆ ಬರೋದು ಅಸಾಧ್ಯ – ಜೋಶಿ

Latest

ಚಳಿಗಾಲದ ಅಧಿವೇಶನ; ಸಿಎಂ ಕರೆದ ಸಭೆಗೆ ಬರೋದು ಅಸಾಧ್ಯ – ಜೋಶಿ

Public TV
Last updated: December 3, 2025 9:21 pm
Public TV
Share
2 Min Read
Siddaramaiah Pralhad Joshi
SHARE

* ಸಿಎಂಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪತ್ರ
* ಮತ್ತೊಂದು ದಿನ ಗೊತ್ತುಪಡಿಸಲು ಸಲಹೆ

ನವದೆಹಲಿ: ಸಂಸತ್‌ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕರೆದಿರುವ ಸಂಸದರ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯವೆಂದು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಸಭೆಯಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಸಕಾರಣ ಸಮೇತ ಸ್ಪಷ್ಟಪಡಿಸಿರುವ ಸಚಿವರು, ತಾವು ಸಭೆ ನಿಗದಿಪಡಿಸುವ ಮೊದಲೇ ಚರ್ಚಿಸಿ ದಿನಾಂಕ ನಿಗದಿಪಡಿಸಿದ್ದಿದ್ದರೆ ಅನುಕೂಲವಾಗುತ್ತಿತ್ತು ಎಂದೂ ತಿಳಿಸಿದ್ದಾರೆ. ಇದನ್ನೂ ಓದಿ: ಬಾಬರಿ ಮಸೀದಿ ನಿರ್ಮಾಣಕ್ಕೆ ನೆಹರು ಸರ್ಕಾರಿ ಹಣ ಬಳಲು ಮುಂದಾಗಿದ್ರು: ರಾಜನಾಥ್ ಸಿಂಗ್ ಹೇಳಿಕೆಗೆ ʻಕೈʼ ಖಂಡನೆ

ಸಂಸದರ ಜತೆ ಚರ್ಚಿಸದೆ ಸಭೆ ನಿಗದಿಪಡಿಸಿದ್ದ ಸಿಎಂ: ರಾಜ್ಯದ ಅಭಿವೃದ್ಧಿ ಮತ್ತು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರದ ಗಮನ ಸೆಳೆಯಲೆಂದು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಡಿ.8ರಂದು ರಾಜ್ಯವನ್ನು ಪ್ರತಿನಿಧಿಸುವ ಸಂಸದರ ಸಭೆ ಕರೆದಿದ್ದರು. ಆದರೆ, ಈ ಬಗ್ಗೆ ಮೊದಲೇ ಸಂಸದರೊಂದಿಗೆ ಚರ್ಚಿಸಿ ದಿನಾಂಕ ನಿಗದಿಪಡಿಸಿರುವುದಿಲ್ಲ ಎಂಬ ಅಂಶ ಇದೀಗ ಸಚಿವ ಪ್ರಹ್ಲಾದ್ ಜೋಶಿ ಅವರ ಪತ್ರದಿಂದ ಬಹಿರಂಗವಾಗಿದೆ.

Prahlad Joshi 1

ಸಚಿವ ಜೋಶಿ ಅವರು ಸಿಎಂಗೆ ಬರೆದ ಪತ್ರದ ಒಕ್ಕಣೆ ಇಂತಿದೆ. ‘ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಾವು ಡಿ.8ಕ್ಕೆ ನವದೆಹಲಿಯಲ್ಲಿ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಲಿರುವ ಬಗ್ಗೆ ಬರೆದ ಪತ್ರ ಡಿ.2ರಂದು ಸ್ವೀಕೃತವಾಗಿದೆ. ಆದರೆ, ತಮಗೇ ತಿಳಿದಿರುವಂತೆ ಕೇಂದ್ರದಲ್ಲಿ ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅಧಿವೇಶನ ವೇಳೆ ಕಾರ್ಯ ಬಾಹುಳ್ಯ ಸಾಕಷ್ಟಿರುವುದು ತಮಗೆ ಗೊತ್ತಿರುವ ವಿಷಯವೇ. ಹಣಕಾಸು ಇಲಾಖೆ ಮಸೂದೆ ಮಂಡನೆಯಾಗುತ್ತಿವೆ. ಹಾಗಾಗಿ ಸಚಿವರಾದ ನಮಗೆಲ್ಲ ಸಂಸತ್ ಅಧಿವೇಶನ ಹಾಗೂ ಇಲಾಖೆಗಳ ಕಾರ್ಯದೊತ್ತಡವಿದೆ. ಅಲ್ಲದೇ, ಡಿ.8ರಂದೇ ಹೊಸ ಮತ್ತು ನವೀಕೃತ ಇಂಧನ ಇಲಾಖೆ ಸಂಬಂಧ ಪ್ರಧಾನಿ ವಿಶೇಷ ಸಭೆಯಿದೆ. ಹಣಕಾಸು ಸಚಿವಾಲಯದಿಂದ ಸಂಸತ್ತಿನಲ್ಲಿ ಬಿಲ್ ಮಂಡನೆಗೊಳಿಸುವುದು ಪೂರ್ವದಲ್ಲೇ ನಿಗದಿಗೊಂಡಿದೆ. ಅದೇ ದಿನ “ವಂದೇ ಮಾತರಂ” ಗೀತೆಯ 150ನೇ ವರ್ಷಾಚರಣೆ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಡಿ.8ರಂದು ನಿಗದಿಪಡಿಸಿದ ಸಭೆಯಲ್ಲಿ ನಾವುಗಳು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂದು ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಎಲ್ಲಾ ಕೇಂದ್ರ ಸಚಿವರೂ ಸಿಎಂಗೆ ಮರುಪತ್ರ ಬರೆದು ತಿಳಿಸಿದ್ದಾರೆ.

ಮೊದಲೇ ಚರ್ಚಿಸಿ ಸಭೆ ನಿಗದಿಪಡಿಸಿದ್ದರೆ ಅನುಕೂಲವಿತ್ತು: ಮುಖ್ಯಮಂತ್ರಿಗಳು ಮೊದಲೇ ಚರ್ಚಿಸಿ ದಿನಾಂಕ ನಿಗದಿಪಡಿಸಿದ್ದರೆ ಅನುಕೂಲವಾಗುತ್ತಿತ್ತು ಎಂದಿರುವ ಸಚಿವ ಜೋಶಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ ಸಚಿವಾಲಯದ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರೂ ಸಭೆಗೆ ಪಾಲ್ಗೊಳ್ಳಲು ಸಾಧ್ಯವಾಗದಿರುವ ಬಗ್ಗೆ ತಿಳಿಸಿಯಪಡಿಸಿದ್ದಾರೆ ಎಂದು ಸಿಎಂಗೆ ಪತ್ರ ಮುಖೇನವೇ ಪ್ರತ್ಯುತ್ತರ ನೀಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು; 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ: ಎಂ.ಬಿ.ಪಾಟೀಲ್

ಒಮ್ಮೆ ಚರ್ಚಿಸಿ ಮತ್ತೊಂದು ದಿನ ಗೊತ್ತುಪಡಿಸಿ: ರಾಜ್ಯದ ಸಮಗ್ರ ಅಭಿವೃದ್ಧಿ ಜನಕಲ್ಯಾಣದ ವಿಷಯದಲ್ಲಿ ತಾವು ಬದ್ಧವಾಗಿದ್ದೇವೆ ಮತ್ತು ತಮ್ಮೊಂದಿಗೆ ಚರ್ಚಿಸಲು ಉತ್ಸುಕರಾಗಿದ್ದೇವೆ. ದಯಮಾಡಿ ಡಿ.8ರ ಬದಲಾಗಿ ಮತ್ತೊಂದು ದಿನವನ್ನು ಗೊತ್ತುಪಡಿಸಿ. ಆದರೆ, ಇದಕ್ಕೂ ಮುನ್ನ ಒಮ್ಮೆ ರಾಜ್ಯದ ಕೇಂದ್ರ ಸಚಿವರೊಂದಿಗೆ ಒಮ್ಮೆ ಸಮಾಲೋಚಿಸಿ ದಿನಾಂಕ ನಿಗದಿಪಡಿಸಿದಲ್ಲಿ ಅನುಕೂಲವಾಗುತ್ತದೆ ಎಂದು ಸಿಎಂ ಗಮನ ಸೆಳೆದಿದ್ದಾರೆ.

TAGGED:Pralhad Joshisiddaramaiahwinter sessionಚಳಿಗಾಲದ ಅಧಿವೇಶನಪ್ರಹ್ಲಾದ್ ಜೋಶಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows

You Might Also Like

anganwadi asha workers h.d.kumaraswamy
Latest

ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ

Public TV
By Public TV
6 minutes ago
Darshan Pavithra
Bengaluru City

ಒಂದೂವರೆ ವರ್ಷಗಳ ಬಳಿಕ ರೇಣುಕಾ ಕೇಸ್ ವಿಚಾರಣೆ – ಲೆಕ್ಕ ಕೊಡದ 82 ಲಕ್ಷ ರೂ. ಇಡಿ ಸುಪರ್ದಿಗೆ

Public TV
By Public TV
1 hour ago
Techie
Bengaluru City

ಬೆಂಗಳೂರು | ತಾನೇ ಕಟ್ಟಿಸುತ್ತಿದ್ದ ಕನಸಿನ ಮನೆಯಲ್ಲಿ ಟೆಕ್ಕಿ ನೇಣಿಗೆ ಶರಣು

Public TV
By Public TV
1 hour ago
Afghanistan
Latest

ಒಂದೇ ಕುಟುಂಬದ 13 ಮಂದಿ ಹತ್ಯೆ; ಆಫ್ಘನ್‌ನಲ್ಲಿ ಹಂತಕನಿಗೆ ಬೀದಿಯಲ್ಲಿ ಗುಂಡಿಟ್ಟು ಕೊಲೆ

Public TV
By Public TV
2 hours ago
Rajnath Singh 1
Latest

ಬಾಬರಿ ಮಸೀದಿ ನಿರ್ಮಾಣಕ್ಕೆ ನೆಹರು ಸರ್ಕಾರಿ ಹಣ ಬಳಲು ಮುಂದಾಗಿದ್ರು: ರಾಜನಾಥ್ ಸಿಂಗ್ ಹೇಳಿಕೆಗೆ ʻಕೈʼ ಖಂಡನೆ

Public TV
By Public TV
2 hours ago
namma metro driverless train
Bengaluru City

ಯೆಲ್ಲೋ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್ – ಬೆಂಗಳೂರಿಗೆ ಬಂತು 6ನೇ ಡ್ರೈವರ್‌ಲೆಸ್‌ ರೈಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?