Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧೋನಿಯನ್ನು ಹಾಡಿ ಹೊಗಳಿದ ಸೌರವ್ ಗಂಗೂಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಧೋನಿಯನ್ನು ಹಾಡಿ ಹೊಗಳಿದ ಸೌರವ್ ಗಂಗೂಲಿ

Cricket

ಧೋನಿಯನ್ನು ಹಾಡಿ ಹೊಗಳಿದ ಸೌರವ್ ಗಂಗೂಲಿ

Public TV
Last updated: March 1, 2018 4:53 pm
Public TV
Share
3 Min Read
dhoni ganguly
SHARE

ನವದೆಹಲಿ: 2003ರ ವಿಶ್ವಕಪ್ ವೇಳೆ ಎಂಎಸ್ ಧೋನಿ ಟೀಂ ಇಂಡಿಯಾದ ಸದಸ್ಯರಾಗಿ ಇರುತ್ತಿದ್ದರೆ ಪಂದ್ಯದ ಫಲಿತಾಂಶವೇ ಬದಲಾಗುತಿತ್ತು ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಬಂಗಾಳ ಕ್ರಿಕೆಟ್ ಸಂಸ್ಥೆ (ಸಿಎಬಿ) ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ, ತಮ್ಮ ಜೀವನವನ್ನು ಆಧರಿಸಿ ಬರೆದಿರುವ `ಎ ಸೆಂಚೂರಿ ಈಸ್ ನಾಟ್ ಇನಫ್’ ಪುಸ್ತಕದಲ್ಲಿ ಕ್ರಿಕೆಟ್ ಜೀವನವನ್ನು ಮೆಲುಕು ಹಾಕಿ ಧೋನಿ ಅವರನ್ನು ಹೊಗಳಿದ್ದಾರೆ.

ಒತ್ತಡದ ಸನ್ನಿವೇಶದಲ್ಲಿ ಆಟವಾಡಿ ಪಂದ್ಯದ ಗತಿಯನ್ನೇ ಬದಲಾಯಿಸಬಲ್ಲ ಆಟಗಾರರನ್ನು ನಾನು ಕೆಲ ವರ್ಷಗಳಿಂದ ಗಮನಿಸುತ್ತಲೇ ಇದ್ದೇನೆ. 2004ರಲ್ಲಿ ಧೋನಿ ನನ್ನ ಗಮನಕ್ಕೆ ಬಂದರು. ಅವರನ್ನು ನೋಡಿದ ಮೊದಲ ದಿನದಿಂದಲೇ ಅವರ ಆಟಕ್ಕೆ ಆಕರ್ಷಿತನಾದೆ ಎಂದು ಬರೆದಿದ್ದಾರೆ.

dhoni and ganguly

ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ನಲ್ಲಿ 2003ರ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಪಡೆಯ ಬೇಕಾಯಿತು. ಆದರೆ ಅಂದು ಧೋನಿ ನನ್ನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ ಪಂದ್ಯದ ಫಲಿತಾಂಶ ಬೇರೆಯಾಗಿರುತ್ತಿತ್ತು. ಈ ವೇಳೆ ಧೋನಿ ರೈಲ್ವೇಯ ಟಿಕೆಟ್ ಕಲೆಕ್ಟರ್ ಆಗಿದ್ದರು. ಇದು ನಂಬಲು ಅಸಾಧ್ಯ ಸಂಗತಿ. ಆದರೆ ಈಗ ಅವರ ಸಾಧನೆಯಿಂದ ಗುರುತಿಸುತ್ತಿರುವುದು ನನಗೆ ಸಂತಸ ತಂದಿದೆ ಎಂದು ಹೇಳಿದ್ದಾರೆ.

ಧೋನಿ ಅವರು ಗಂಗೂಲಿ ಅವರ ನಾಯಕತ್ವದಲ್ಲಿ 2004 ರಲ್ಲಿ ಬಾಂಗ್ಲಾ ದೇಶದ ವಿರುದ್ಧದ ಚಿತ್ತಗಾಂಗ್ ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಕ್ರಿಕೆಟ್ ವೃತ್ತಿ ಜೀವನ ಆರಂಭಿಸಿದ್ದರು. ಆರಂಭದ ಪಂದ್ಯಗಳಲ್ಲಿ ಧೋನಿ ಆರಂಭಿಕ ಬ್ಯಾಟ್ಸ್ ಮನ್ ಗಳಾಗಿ ಕಣಕ್ಕೆ ಇಳಿಯುತ್ತಿದ್ದರು. ನಂತರ ಧೋನಿ ಅವರು ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದರು. ಈ ವೇಳೆ ಅವರ ಬ್ಯಾಟಿಂಗ್ ಸ್ಥಾನವನ್ನು ಬದಲಾಯಿಸಿ ಮೂರನೇ ಕ್ರಮಾಂಕದಲ್ಲಿ ಇಳಿಯಲು ಆರಂಭಿಸಿದರು. ಈ ವೇಳೆ ಧೋನಿ ಪಾಕಿಸ್ತಾನದ ವಿರುದ್ಧದ ಏಕದಿನ ಪಂದ್ಯದಲ್ಲಿ ಆಕರ್ಷಕ 148 ರನ್ ಸಿಡಿಸಿ ಶತಕ ಗಳಿಸಿದರು. ಕೆಲ ತಿಂಗಳ ಬಳಿಕ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 183 ರನ್ ಸಿಡಿಸಿದ್ದರು. ಇದನ್ನೂ ಓದಿ: ಕೊಹ್ಲಿಯಂತೆ ಧೋನಿ ಹೆಲ್ಮೆಟ್ ನಲ್ಲಿ ತ್ರಿವರ್ಣ ಧ್ವಜ ಯಾಕಿಲ್ಲ?

ms dhoni

ಅನಂತರದಲ್ಲಿ 2007 ರಲ್ಲಿ ನಡೆದ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಟಿ20 ವಿಶ್ವಕಪ್ ತಂಡದ ನಾಯಕತ್ವವನ್ನು ಧೋನಿ ಅವರಿಗೆ ವಹಿಸಲಾಯಿತು. ಯುವ ಆಟಗಾರರನ್ನೇ ಹೊಂದಿದ್ದ ತಂಡವನ್ನು ಸಮರ್ಥವಾಗಿ ಮುನ್ನಡೆಸಿ ಪಾಕಿಸ್ತಾನದ ವಿರುದ್ಧದ ಫೈನಲ್ ರೋಚಕ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡ ಶ್ರೇಷ್ಠ ನಾಯಕರಾಗಿ ಹೊರಹೊಮ್ಮಿದರು.  ಇದನ್ನೂ ಓದಿ: ಆ ಕಡೆ ಯಾಕೆ ನೋಡ್ತಿದ್ದಿ, ನನ್ನನ್ನು ನೋಡು – ಪಾಂಡೆ ವಿರುದ್ಧ ಕ್ಯಾಪ್ಟನ್ ಕೂಲ್ ಗರಂ

ಮೊದಲ ಟಿ20 ವಿಶ್ವಕಪ್ ನಡೆದ ನಾಲ್ಕು ವರ್ಷಗಳ ನಂತರ ಧೋನಿ 2011ರ ಶ್ರೀಲಂಕಾ ವಿರುದ್ಧ ಏಕದಿನ ವಿಶ್ವಕಪ್ ಫೈನಲ್ ನಲ್ಲಿ 78 ಎಸೆತಗಳಲ್ಲಿ 91 ರನ್ ಸಿಡಿಸುವ ಮೂಲಕ ಭಾರತಕ್ಕೆ ಎರಡನೇ ವಿಶ್ವ ಕಪ್ ಗೆಲ್ಲಿಸಿಕೊಟ್ಟು ಇತಿಹಾಸ ನಿರ್ಮಿಸಿದರು. ಆದರೆ ಧೋನಿ ಫೈನಲ್ ಪಂದ್ಯ ಹೊರತು ಪಡಿಸಿ ಸರಣಿಯ ಎಂಟು ಪಂದ್ಯಗಳಲ್ಲಿ ಕ್ರಮವಾಗಿ 31,34,19,12,22,7 ಮತ್ತು 25 ರನ್ ಗಳಿಸಿ ಕೆಟ್ಟ ಫಾರ್ಮ್ ಹೊಂದಿದ್ದರು. ಆದರೆ ಶ್ರೀಲಂಕಾ ವಿರುದ್ಧ ಫೈನಲ್ ಪಂದ್ಯದಲ್ಲಿ 275 ರನ್ ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಭರ್ಜರಿ ಗೆಲುವು ಪಡೆದಿತ್ತು. ಈ ಪಂದ್ಯದಲ್ಲಿ ಧೋನಿ ಹಾಗೂ ಗೌತಮ್ ಗಂಭೀರ್ (97) ಜೋಡಿ ನಾಲ್ಕನೇ ವಿಕೆಟ್ ಗೆ 109 ರನ್ ಕಾಣಿಕೆ ನೀಡಿದ್ದರು.

2013 ರಲ್ಲಿ ಇಂಗ್ಲೆಂಡ್ ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಧೋನಿ ಸಾರಥ್ಯದಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಗೆದ್ದುಕೊಂಡಿತ್ತು.  ಇದರೊಂದಿಗೆ ಧೋನಿ ತಮ್ಮ ವೃತ್ತಿ ಜೀವನದಲ್ಲಿ ಐಸಿಸಿ ನಡೆಸುವ ಎಲ್ಲಾ ಟ್ರೋಫಿ ಗಳನ್ನು ಗೆದ್ದ ಏಕೈಕ ನಾಯಕ ಎನ್ನುವ ಹೆಗ್ಗಳಿಕೆ ಪಡೆದಿದ್ದಾರೆ. ಇದನ್ನೂ ಓದಿ: ಮೊದಲ ಟಿ-20ಯಲ್ಲಿ ಧೋನಿಯಿಂದ ವಿಶ್ವದಾಖಲೆ

dhoni 3

TAGGED:2003 World Cup2003 ವಿಶ್ವಕಪ್cricketdhoniPublic TVsourav gangulyTeam indiaಕ್ರಿಕೆಟ್ಟೀಂ ಇಂಡಿಯಾಧೋನಿಪಬ್ಲಿಕ್ ಟಿವಿಸೌರವ್ ಗಂಗೂಲಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
9 minutes ago
LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
19 minutes ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
24 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
56 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?