Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧೋನಿಯನ್ನು ಹಾಡಿ ಹೊಗಳಿದ ಸೌರವ್ ಗಂಗೂಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಧೋನಿಯನ್ನು ಹಾಡಿ ಹೊಗಳಿದ ಸೌರವ್ ಗಂಗೂಲಿ

Cricket

ಧೋನಿಯನ್ನು ಹಾಡಿ ಹೊಗಳಿದ ಸೌರವ್ ಗಂಗೂಲಿ

Public TV
Last updated: March 1, 2018 4:53 pm
Public TV
Share
3 Min Read
dhoni ganguly
SHARE

ನವದೆಹಲಿ: 2003ರ ವಿಶ್ವಕಪ್ ವೇಳೆ ಎಂಎಸ್ ಧೋನಿ ಟೀಂ ಇಂಡಿಯಾದ ಸದಸ್ಯರಾಗಿ ಇರುತ್ತಿದ್ದರೆ ಪಂದ್ಯದ ಫಲಿತಾಂಶವೇ ಬದಲಾಗುತಿತ್ತು ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಬಂಗಾಳ ಕ್ರಿಕೆಟ್ ಸಂಸ್ಥೆ (ಸಿಎಬಿ) ಅಧ್ಯಕ್ಷರಾಗಿರುವ ಸೌರವ್ ಗಂಗೂಲಿ, ತಮ್ಮ ಜೀವನವನ್ನು ಆಧರಿಸಿ ಬರೆದಿರುವ `ಎ ಸೆಂಚೂರಿ ಈಸ್ ನಾಟ್ ಇನಫ್’ ಪುಸ್ತಕದಲ್ಲಿ ಕ್ರಿಕೆಟ್ ಜೀವನವನ್ನು ಮೆಲುಕು ಹಾಕಿ ಧೋನಿ ಅವರನ್ನು ಹೊಗಳಿದ್ದಾರೆ.

ಒತ್ತಡದ ಸನ್ನಿವೇಶದಲ್ಲಿ ಆಟವಾಡಿ ಪಂದ್ಯದ ಗತಿಯನ್ನೇ ಬದಲಾಯಿಸಬಲ್ಲ ಆಟಗಾರರನ್ನು ನಾನು ಕೆಲ ವರ್ಷಗಳಿಂದ ಗಮನಿಸುತ್ತಲೇ ಇದ್ದೇನೆ. 2004ರಲ್ಲಿ ಧೋನಿ ನನ್ನ ಗಮನಕ್ಕೆ ಬಂದರು. ಅವರನ್ನು ನೋಡಿದ ಮೊದಲ ದಿನದಿಂದಲೇ ಅವರ ಆಟಕ್ಕೆ ಆಕರ್ಷಿತನಾದೆ ಎಂದು ಬರೆದಿದ್ದಾರೆ.

dhoni and ganguly

ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ನಲ್ಲಿ 2003ರ ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಪಡೆಯ ಬೇಕಾಯಿತು. ಆದರೆ ಅಂದು ಧೋನಿ ನನ್ನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ ಪಂದ್ಯದ ಫಲಿತಾಂಶ ಬೇರೆಯಾಗಿರುತ್ತಿತ್ತು. ಈ ವೇಳೆ ಧೋನಿ ರೈಲ್ವೇಯ ಟಿಕೆಟ್ ಕಲೆಕ್ಟರ್ ಆಗಿದ್ದರು. ಇದು ನಂಬಲು ಅಸಾಧ್ಯ ಸಂಗತಿ. ಆದರೆ ಈಗ ಅವರ ಸಾಧನೆಯಿಂದ ಗುರುತಿಸುತ್ತಿರುವುದು ನನಗೆ ಸಂತಸ ತಂದಿದೆ ಎಂದು ಹೇಳಿದ್ದಾರೆ.

ಧೋನಿ ಅವರು ಗಂಗೂಲಿ ಅವರ ನಾಯಕತ್ವದಲ್ಲಿ 2004 ರಲ್ಲಿ ಬಾಂಗ್ಲಾ ದೇಶದ ವಿರುದ್ಧದ ಚಿತ್ತಗಾಂಗ್ ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಕ್ರಿಕೆಟ್ ವೃತ್ತಿ ಜೀವನ ಆರಂಭಿಸಿದ್ದರು. ಆರಂಭದ ಪಂದ್ಯಗಳಲ್ಲಿ ಧೋನಿ ಆರಂಭಿಕ ಬ್ಯಾಟ್ಸ್ ಮನ್ ಗಳಾಗಿ ಕಣಕ್ಕೆ ಇಳಿಯುತ್ತಿದ್ದರು. ನಂತರ ಧೋನಿ ಅವರು ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದರು. ಈ ವೇಳೆ ಅವರ ಬ್ಯಾಟಿಂಗ್ ಸ್ಥಾನವನ್ನು ಬದಲಾಯಿಸಿ ಮೂರನೇ ಕ್ರಮಾಂಕದಲ್ಲಿ ಇಳಿಯಲು ಆರಂಭಿಸಿದರು. ಈ ವೇಳೆ ಧೋನಿ ಪಾಕಿಸ್ತಾನದ ವಿರುದ್ಧದ ಏಕದಿನ ಪಂದ್ಯದಲ್ಲಿ ಆಕರ್ಷಕ 148 ರನ್ ಸಿಡಿಸಿ ಶತಕ ಗಳಿಸಿದರು. ಕೆಲ ತಿಂಗಳ ಬಳಿಕ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 183 ರನ್ ಸಿಡಿಸಿದ್ದರು. ಇದನ್ನೂ ಓದಿ: ಕೊಹ್ಲಿಯಂತೆ ಧೋನಿ ಹೆಲ್ಮೆಟ್ ನಲ್ಲಿ ತ್ರಿವರ್ಣ ಧ್ವಜ ಯಾಕಿಲ್ಲ?

ms dhoni

ಅನಂತರದಲ್ಲಿ 2007 ರಲ್ಲಿ ನಡೆದ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಟಿ20 ವಿಶ್ವಕಪ್ ತಂಡದ ನಾಯಕತ್ವವನ್ನು ಧೋನಿ ಅವರಿಗೆ ವಹಿಸಲಾಯಿತು. ಯುವ ಆಟಗಾರರನ್ನೇ ಹೊಂದಿದ್ದ ತಂಡವನ್ನು ಸಮರ್ಥವಾಗಿ ಮುನ್ನಡೆಸಿ ಪಾಕಿಸ್ತಾನದ ವಿರುದ್ಧದ ಫೈನಲ್ ರೋಚಕ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡ ಶ್ರೇಷ್ಠ ನಾಯಕರಾಗಿ ಹೊರಹೊಮ್ಮಿದರು.  ಇದನ್ನೂ ಓದಿ: ಆ ಕಡೆ ಯಾಕೆ ನೋಡ್ತಿದ್ದಿ, ನನ್ನನ್ನು ನೋಡು – ಪಾಂಡೆ ವಿರುದ್ಧ ಕ್ಯಾಪ್ಟನ್ ಕೂಲ್ ಗರಂ

ಮೊದಲ ಟಿ20 ವಿಶ್ವಕಪ್ ನಡೆದ ನಾಲ್ಕು ವರ್ಷಗಳ ನಂತರ ಧೋನಿ 2011ರ ಶ್ರೀಲಂಕಾ ವಿರುದ್ಧ ಏಕದಿನ ವಿಶ್ವಕಪ್ ಫೈನಲ್ ನಲ್ಲಿ 78 ಎಸೆತಗಳಲ್ಲಿ 91 ರನ್ ಸಿಡಿಸುವ ಮೂಲಕ ಭಾರತಕ್ಕೆ ಎರಡನೇ ವಿಶ್ವ ಕಪ್ ಗೆಲ್ಲಿಸಿಕೊಟ್ಟು ಇತಿಹಾಸ ನಿರ್ಮಿಸಿದರು. ಆದರೆ ಧೋನಿ ಫೈನಲ್ ಪಂದ್ಯ ಹೊರತು ಪಡಿಸಿ ಸರಣಿಯ ಎಂಟು ಪಂದ್ಯಗಳಲ್ಲಿ ಕ್ರಮವಾಗಿ 31,34,19,12,22,7 ಮತ್ತು 25 ರನ್ ಗಳಿಸಿ ಕೆಟ್ಟ ಫಾರ್ಮ್ ಹೊಂದಿದ್ದರು. ಆದರೆ ಶ್ರೀಲಂಕಾ ವಿರುದ್ಧ ಫೈನಲ್ ಪಂದ್ಯದಲ್ಲಿ 275 ರನ್ ಗಳ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ಭರ್ಜರಿ ಗೆಲುವು ಪಡೆದಿತ್ತು. ಈ ಪಂದ್ಯದಲ್ಲಿ ಧೋನಿ ಹಾಗೂ ಗೌತಮ್ ಗಂಭೀರ್ (97) ಜೋಡಿ ನಾಲ್ಕನೇ ವಿಕೆಟ್ ಗೆ 109 ರನ್ ಕಾಣಿಕೆ ನೀಡಿದ್ದರು.

2013 ರಲ್ಲಿ ಇಂಗ್ಲೆಂಡ್ ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಧೋನಿ ಸಾರಥ್ಯದಲ್ಲಿ ಟೀಂ ಇಂಡಿಯಾ ಪ್ರಶಸ್ತಿ ಗೆದ್ದುಕೊಂಡಿತ್ತು.  ಇದರೊಂದಿಗೆ ಧೋನಿ ತಮ್ಮ ವೃತ್ತಿ ಜೀವನದಲ್ಲಿ ಐಸಿಸಿ ನಡೆಸುವ ಎಲ್ಲಾ ಟ್ರೋಫಿ ಗಳನ್ನು ಗೆದ್ದ ಏಕೈಕ ನಾಯಕ ಎನ್ನುವ ಹೆಗ್ಗಳಿಕೆ ಪಡೆದಿದ್ದಾರೆ. ಇದನ್ನೂ ಓದಿ: ಮೊದಲ ಟಿ-20ಯಲ್ಲಿ ಧೋನಿಯಿಂದ ವಿಶ್ವದಾಖಲೆ

dhoni 3

TAGGED:2003 World Cup2003 ವಿಶ್ವಕಪ್cricketdhoniPublic TVsourav gangulyTeam indiaಕ್ರಿಕೆಟ್ಟೀಂ ಇಂಡಿಯಾಧೋನಿಪಬ್ಲಿಕ್ ಟಿವಿಸೌರವ್ ಗಂಗೂಲಿ
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
5 minutes ago
Desh Garima
Latest

ಮುಂಬೈ ತಲುಪಿದ ಕಚ್ಚಾ ತೈಲ ಹೊತ್ತ `ದೇಶ್ ಗರಿಮಾ’ ಹಡಗು

Public TV
By Public TV
13 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?

Public TV
By Public TV
35 minutes ago
is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
55 minutes ago
011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
57 minutes ago
epaminondas ship IRGC
Latest

ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?