Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಬಾರಿ ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಚಲುವರಾಯಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಈ ಬಾರಿ ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಚಲುವರಾಯಸ್ವಾಮಿ

Latest

ಈ ಬಾರಿ ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಚಲುವರಾಯಸ್ವಾಮಿ

Public TV
Last updated: September 22, 2024 3:56 pm
Public TV
Share
3 Min Read
varanasi gangarathi
SHARE

– ಕಾವೇರಿ ಆರತಿ ಒಮ್ಮೆ ಶುರು ಮಾಡಿದ್ರೆ ನಿಲ್ಲಿಸುವಂತಿಲ್ಲ

ಲಕ್ನೋ: ದಸರಾದಲ್ಲಿ (Mysuru Dasara) ಗಂಗಾರತಿಯಂತೆ (Gangarathi) ಕಾವೇರಿ ಆರತಿ ಮಾಡಬೇಕು ಎನ್ನುವುದು ಆಸೆ ಇದೆ. ಸಾಂಕೇತಿಕವಾಗಿ ಮಾಡುವ ಬಗ್ಗೆ ಚಿಂತಿಸಲಾಗುವುದು. ನಮ್ಮಲ್ಲಿ ಸರ್ಕಾರದಿಂದ ಮಾಡಬೇಕು ಅಂದುಕೊಂಡಿದ್ದೇವೆ. ಕಾವೇರಿ ಆರತಿ ಮಾಡುವ ಬಗ್ಗೆ ಚರ್ಚಿಸಿದಾಗ ಇಲ್ಲಿ ಗಂಗಾರತಿ ಆಯೋಜಕರು ಖುಷಿ ವ್ಯಕ್ತಪಡಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಅಧ್ಯಯನ ವರದಿ ನೀಡಲಾಗುವುದು ಎಂದು ವಾರಣಾಸಿಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N Chaluvarayaswamy) ಹೇಳಿಕೆ ನೀಡಿದ್ದಾರೆ.

ವಾರಣಾಸಿಯಲ್ಲಿ (Varanasi) ಕಾವೇರಿ ಆರತಿ ಅಧ್ಯಯನ ತಂಡದೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿದ್ವಾರ ಮತ್ತು ವಾರಣಾಸಿಯಲ್ಲಿ ಭಿನ್ನ ಅನುಭವವಾಗಿದೆ. ಗಂಗಾ ಮಹಾ ಸಭಾ ಸೊಸೈಟಿ ಅಡಿಯಲ್ಲಿ ಆರತಿ ಕಾರ್ಯಕ್ರಮ ನಡೆಯುತ್ತಿದೆ. ಹರಿದ್ವಾರದಲ್ಲಿ ನೂರಕ್ಕೂ ಅಧಿಕ ವರ್ಷದ ಅನುಭವ ಇದೆ. ವಾರಣಾಸಿಯಲ್ಲಿ 35 ವರ್ಷಕ್ಕೂ ಹೆಚ್ಚಿನ ಇತಿಹಾಸ ಇದೆ. ಗಂಗಾನದಿಯಂತೆ ಕಾವೇರಿ ಕೂಡಾ ಅತಿ ಮುಖ್ಯವಾದ ನದಿ. ಪ್ರವಾಹ ಬಂದು ಜನರು ಸಾವನ್ನಪ್ಪುತ್ತಿದ್ದ ಸಂದರ್ಭದಲ್ಲಿ ಅದು ನಿಯಂತ್ರಣಕ್ಕೆ ಬರಲಿ ಎಂದು ಆರತಿ ಶುರು ಮಾಡಿದ ಪ್ರತಿತಿ ಇದೆ. ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ, ನದಿ ಸಮಸ್ಯೆ ಇತ್ಯರ್ಥವಾಗಲಿ ಎಂದು ನಾವು ಮಾಡಲಿದ್ದೇವೆ ಎಂದರು. ಇದನ್ನೂ ಓದಿ: ದೇಹವನ್ನ ಪೀಸ್‌ ಪೀಸ್‌ ಮಾಡಿ ತರಕಾರಿ ಜೋಡಿಸಿದಂತೆ ಫ್ರಿಡ್ಜ್‌ನಲ್ಲಿ ತುಂಬಿಟ್ಟಿದ್ದ ಹಂತಕ; ಕ್ರೂರತೆಗೆ ಕೊನೆ ಇಲ್ವಾ?

varanasi gangarati

ರಾಜ್ಯದಲ್ಲಿ ಒಳ್ಳೆ ಮಳೆಯಾದಲಿ, ನದಿ ಸಮಸ್ಯೆ ಇತ್ಯರ್ಥ ವಾಗಲಿ ಅಂತಾ ನಾವು ಮಾಡಲಿದ್ದೇವೆ. ಆರತಿ ಎಲ್ಲಿ ಮಾಡಬೇಕು, ಹೇಗೆ ಮಾಡಬೇಕು ಸಿಎಂ, ಡಿಸಿಎಂ ಜೊತೆಗೆ ಚರ್ಚಿಸಿ ನಿರ್ಧಾರ ಮಾಡ್ತೇವೆ. ಅಧಿಕಾರಿಗಳನ್ನು ಕಳುಹಿಸಿ ಇನ್ನು ಹೆಚ್ಚಿನ ಮಾಹಿತಿ ಪಡೆಯಲಿದ್ದೇವೆ. ಒಮ್ಮೆ ಶುರು ಮಾಡಿದ ಮೇಲೆ ನಿಲ್ಲಿಸಬಾರದು. ಯಾರೇ ಬಂದರು ಇದನ್ನ ಮುಂದುವರಿಸಿಕೊಂಡು ಹೋಗಬೇಕು. ಅದಕ್ಕಾಗಿ ಇನ್ನಷ್ಟು ಪರಿಶೀಲನೆ ಮಾಡಲಾಗುವುದು. ಬಳಿಕ ಸೂಕ್ತ ತಿರ್ಮಾನ ಬೆಂಗಳೂರಿನಲ್ಲಿ (Bengaluru) ತಿರ್ಮಾನ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಚಲುವರಾಯಸ್ವಾಮಿ ನೇತೃತ್ವದ ಸುಮಾರು 25ಕ್ಕೂ ಹೆಚ್ಚು ಶಾಸಕರಿರುವ ನಿಯೋಗ ವಾರಣಾಸಿಗೆ ಭೇಟಿ ನೀಡಿದೆ. ಹರಿದ್ವಾರದಲ್ಲಿ ಗಂಗಾರತಿ ಬಗ್ಗೆ ಅಧ್ಯಯನ ಮಾಡಿದ ತಂಡ ವಾರಣಾಸಿಗೆ ತೆರಳಿ ವ್ಯವಸ್ಥೆಯನ್ನು ಅಧ್ಯಯನ ನಡೆಸಿದೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ – ಪೇಜಾವರ ಶ್ರೀ

ಮಾಗಡಿ ಶಾಸಕ ಬಾಲಕೃಷ್ಣ ಮಾತನಾಡಿ, ನಾವು ಇದನ್ನು ರಾಜಕೀಯ ಕಾರಣಕ್ಕೆ ಮಾಡುತ್ತಿಲ್ಲ, ಕಾವೇರಿ ನದಿಗೆ ತನ್ನದೇಯಾದ ಇತಿಹಾಸವಿದೆ ಹೀಗಾಗೀ ಆರತಿ ಮಾಡುವ ಚಿಂತನೆ ಮಾಡಿದೆ. ಕಾಂಗ್ರೇಸ್ (Congress) ಸರ್ವ ಧರ್ಮಗಳನ್ನು ಒಂದೇ ರೀತಿಯಲ್ಲಿ ನೋಡುತ್ತದೆ. ಯಾವುದೇ ಸರ್ಕಾರ ಬಂದರು ಇದನ್ನು ಮುಂದುವರಿಸಬೇಕು ಎಂದರು. ಇದನ್ನೂ ಓದಿ: ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ವಿಶೇಷ ರೈಲನ್ನು ಸ್ಫೋಟಿಸಲು ಯತ್ನ

ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಗಂಗಾನದಿಗೆ ತನ್ನದೇ ಆದ ಇತಿಹಾಸವಿದೆ. ಅದೇ ರೀತಿ ಕಾವೇರಿಗೂ ತನ್ನದೇ ಇತಿಹಾಸ ಇದೆ. ಕಾವೇರಿ ಲಕ್ಷಾಂತರ ರೈತರಿಗೆ ಕೃಷಿಗೆ ಅನುಕೂಲವಾಗಿದೆ. ಕೊಟ್ಯಾಂತರ ಜನರಿಗೆ ಜೀವ ಜಲವಾಗಿದೆ. ಇದಕ್ಕೆ ಕೃತ್ಯಜ್ಞತೆ ಸಲ್ಲಿವುದು ಎನ್ನುವುದು ನನ್ನ ಉದ್ದೇಶ ಹೀಗಾಗೀ ನಾನು ಡಿಸಿಎಂ ಡಿ.ಕೆ ಶಿವಕಿಮಾರ್ (DK Shivakumar) ಜೊತೆಗೆ ಚರ್ಚಿಸಿದೆ ಅವರು ಸಕಾರಾತ್ಮವಾಗಿ ಸ್ಪಂಧಿಸಿದರು. ತಂಡ ಬಂದು ಅಧ್ಯಯನ ಮಾಡಿದ್ದು ಶೀಘ್ರದಲ್ಲಿ ವರದಿ ಸಲ್ಲಿಸಲಾಗುವುದು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ರಾಜ್ಯಪಾಲರೇ ವಿರೋಧ ಪಕ್ಷದ ನಾಯಕನಂತೆ ನಡೆದುಕೊಳ್ಳುತ್ತಿದ್ದಾರೆ: ದಿನೇಶ್ ಗುಂಡೂರಾವ್

TAGGED:chaluvarayaswamyGangarathiharidwarkaverimysuru dasaraVaranasiಎನ್ ಚಲುವರಾಯಸ್ವಾಮಿಕಾವೇರಿ ಆರತಿಗಂಗಾರತಿಮೈಸೂರು ದಸರಾಲಕ್ನೋವಾರಣಾಸಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
7 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
7 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
8 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
8 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
8 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?