Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 20 ದಿನಗಳಲ್ಲಿ 11 ದಾಳಿ, ಇಬ್ಬರು ಬಾಲಕಿಯರು ಸಾವು – ಬಹ್ರೈಚ್‌ನಲ್ಲಿ ಮತ್ತೆ ನರಭಕ್ಷಕ ತೋಳಗಳ ಹಾವಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 20 ದಿನಗಳಲ್ಲಿ 11 ದಾಳಿ, ಇಬ್ಬರು ಬಾಲಕಿಯರು ಸಾವು – ಬಹ್ರೈಚ್‌ನಲ್ಲಿ ಮತ್ತೆ ನರಭಕ್ಷಕ ತೋಳಗಳ ಹಾವಳಿ

Crime

20 ದಿನಗಳಲ್ಲಿ 11 ದಾಳಿ, ಇಬ್ಬರು ಬಾಲಕಿಯರು ಸಾವು – ಬಹ್ರೈಚ್‌ನಲ್ಲಿ ಮತ್ತೆ ನರಭಕ್ಷಕ ತೋಳಗಳ ಹಾವಳಿ

Public TV
Last updated: September 18, 2025 10:37 pm
Public TV
Share
3 Min Read
Wolf Attacks
SHARE

– ಇಲ್ಲಿನ ತೋಳಗಳು ನರಭಕ್ಷಕಗಳಾಗಿದ್ದು ಹೇಗೆ? – ದಾಳಿಯ ʻಸೇಡಿನ ಕಥೆʼ

ಲಕ್ನೋ: ರುದ್ರಪ್ರಯಾಗದಲ್ಲಿ ನರಭಕ್ಷಕ ಚಿರತೆಗೆ ಹೆದರಿದ್ದ ಜನ ಸಂಜೆ ಹೊತ್ತಾದ್ರೆ ಸಾಕು ಮನೆಯಿಂದಾಚೆಗೆ ಕಾಲಿಡುವುದಕ್ಕೂ ಹೆದರುತ್ತಿದ್ದರು. ಅದೇ ಪರಿಸ್ಥಿತಿ ಉತ್ತರ ಪ್ರದೇಶದ (Uttar Pradesh) ಬಹ್ರೈಚ್‌ನಲ್ಲಿ ಮತ್ತೆ ಶುರುವಾಗಿದೆ. ನರಭಕ್ಷಕ ತೋಳಗಳ ಹಾವಳಿ ಮುಂದುವರಿದಿದ್ದು, ಬ್ರಹ್ರೈಚ್‌ನ ಕೈಸರ್‌ಗಂಜ್ ಮತ್ತು ಮಹ್ಸಿ ತಹಸಿಲ್‌ಗಳಲ್ಲಿರುವ ಹಳ್ಳಿಗಳ ಜನರಲ್ಲಿ ಭೀತಿ ಉಂಟುಮಾಡಿದೆ.

ಕಳೆದ 20 ದಿನಗಳಲ್ಲಿ 11 ದಾಳಿ ನಡೆದಿದ್ದು, ಇಬ್ಬರು ಹುಡುಗಿಯರು ಸಾವನ್ನಪ್ಪಿದ್ದಾರೆ. 9 ಮಂದಿ ತೋಳಗಳ ದಾಳಿಗೆ ಸಿಕ್ಕಿ ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ನರಭಕ್ಷಕ ತೋಳಗಳನ್ನ (Wolf) ಸೆರೆ ಹಿಡಿಯಲು ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು (Forest Department Officers) ಹಾಗೂ ಅಂತಾರಾಜ್ಯ ತಜ್ಞರು ಸೇರಿದಂತೆ 100ಕ್ಕೂ ಹೆಚ್ಚು ಸಿಬ್ಬಂದಿಯನ್ನ ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Wolves IN UP 2

ಈ ಕುರಿತು ಮಾತನಾಡಿರುವ ದೇವಿಪಟನ್ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಂ ಸಿಮ್ರಾನ್, ಕಾರ್ಯಾಚರಣೆ ಹಾಗೂ ಸಾರ್ವಜನಿಕರ ಮಾಹಿತಿಗಾಗಿ ಕಂಟ್ರೋಲ್‌ ರೂಮ್‌ ಸ್ಥಾಪಿಸಲಾಗಿದೆ. ಜೊತೆಗೆ ಡ್ರೋನ್‌ (Drone), ನೈಟ್‌ ವಾಚ್‌ಕ್ಯಾಮೆರಾಗಳನ್ನೂ ಕಣ್ಗಾವಲಿಗೆ ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆ ಬೆಳಕಿಗೆ ಬಂದಿದ್ದು ಯಾವಾಗ?
ಕಳೆದ ವರ್ಷ ಸೆಪ್ಟಂಬರ್‌ನಲ್ಲೇ ನರಭಕ್ಷಕ ತೋಳಗಳು ಬಹ್ರೈಚ್‌ನ (Bahraich) ಜನರನ್ನ ಕಾಡಿದ್ದವು. ಈ ವರ್ಷ ಸೆಪ್ಟೆಂಬರ್‌ನಲ್ಲಿ ಮತ್ತೆ ತೋಳಗಳ ಹಾವಳಿ ಹೆಚ್ಚಾಗಿದೆ. ಇದೇ ಸೆ.9ರಂದು ಜ್ಯೋತಿ ಎಂಬ ನಾಲ್ಕು ವರ್ಷದ ಬಾಲಕಿಯನ್ನ ತೋಳವೊಂದು ಹೊತ್ತೊಯ್ದಿತ್ತು. ಮರುದಿನ ಬೆಳಗ್ಗೆ ಆಕೆಯ ಮೃತದೇಹ ಪತ್ತೆಯಾಗಿತ್ತು. ನಂತ್ರ ಸೆ.11ರಂದು ಮೂರು ತಿಂಗಳ ಸಂಧ್ಯಾ ಎಂಬ ಹೆಣ್ಣು ಮಗುವನ್ನು ಆಕೆಯ ತಾಯಿ ಕಂಕುಳಲ್ಲಿ ಇರಿಸಿಕೊಂಡಿದ್ದಾಗಲೇ ಕಚ್ಚಿಕೊಂಡು ಎಳೆದೊಯ್ದಿತ್ತು. ಆ ನಂತರ ತೋಳಗಳ ಹಾವಳಿ ಮತ್ತೆ ಶುರುವಾಗಿರುವುದು ಕಂಡುಬಂದಿತು. ಅಧಿಕಾರಿಗಳು ಡ್ರೋನ್‌ ಕಾರ್ಯಾಚರಣೆ ವೇಳೆ 2 ತೋಳಗಳ ದೃಶ್ಯ ಸೆರೆಯಾಗಿತ್ತು. ಆದ್ರೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ವಿಫಲರಾದ್ರು.

Wolves IN UP 4

ಇಲ್ಲಿನ ತೋಳಗಳು ನರಭಕ್ಷಕಗಳಾಗಿದ್ದು ಹೇಗೆ?
ಇಲ್ಲಿನ ಸಾಯಿ ನದಿ ತಟದ ಜಾನ್‌ ಪುರ, ಪ್ರತಾಪ್‌ಗಢ ಮತ್ತು ಸುಲ್ತಾನ್‌ ಪುರದ ಗಡಿಗೆ ಹೊಂದಿಕೊಂಡಂತಿರುವ ಅರಣ್ಯ ಪ್ರದೇಶಗಳು ಅಂದು ತೋಳಗಳ ಆವಾಸಸ್ಥಾನವಾಗಿತ್ತು. ನರಿಗಳೂ ಸಹ ಇಲ್ಲಿ ವಾಸಿಸುತ್ತಿದ್ದವು. ಸಾಮಾನ್ಯವಾಗಿ ಸುಲಭವಾಗಿ ಆಹಾರ ಹುಡುಕಾಟದಲ್ಲಿದ್ದಾಗ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತವೆ ಎಂದು ವನ್ಯಜೀವಿ ತಜ್ಞರು ಹೇಳುತ್ತಾರೆ. ಅದೇ ರೀತಿ ಇಲ್ಲಿಯೂ ಆಗಿದೆ. ಇಲ್ಲಿನ ಹೆಣ್ಣು ತೋಳವೊಂದು ಮರಿಗಳಿಗೆ ಜನ್ಮ ನೀಡಿತ್ತು. ಈ ಸಮಯದಲ್ಲಿ ಹೆಣ್ಣು ತೋಳಗಳು ಬೇಟೆಯಾಡಲು ಸಾಧ್ಯವಿರಲಿಲ್ಲ. ಹಾಗಾಗಿ ಗಂಡು ತೋಳದ ಆಶ್ರಯ ಬಯಸಿತ್ತು. ಒಮ್ಮೆ ಆಹಾರ ಹುಡುಕಿಕೊಂಡು ಹೊರಟಿದ್ದ ಗಂಡು ತೋಳ ಮಗುವೊಂದನ್ನು ಬೇಟೆಯಾಡಿ, ಭಾಗಶಃ ತಾನು ತಿಂದು ಉಳಿದ ಮಾಂಸವನ್ನು ಮರಿಗಳಿಗಾಗಿ ಹೊತ್ತೊಯ್ದಿತ್ತು. ಆದ್ರೆ ಮರಿಗಳು ಮನುಷ್ಯನ ಆಹಾರ ತಿನ್ನುತ್ತಿದ್ದಂತೆ ವಾಂತಿ ಮಾಡಿಕೊಂಡಿದ್ದವು, ಕ್ರಮೇಣ ಅದೇ ಆಹಾರಕ್ಕೆ ಒಗ್ಗಿಕೊಂಡವು. ಆ ನಂತರದಲ್ಲಿ ತೋಳಗಳು ಮಕ್ಕಳನ್ನು ಬೇಟೆಯಾಟಲು ಮುಂದುವರಿಸಿದವು.

ತೋಳಗಳು ನರಭಕ್ಷಕವೇ?
ಭಾರತೀಯ ತೋಳಗಳು ಪ್ರಾಚೀನ ವಂಶಾವಳಿ ಹೊಂದಿವೆ ಎಂದು ವನ್ಯಜೀವಿ ತಜ್ಞರು ಹೇಳುತ್ತಾರೆ. ತೋಳಗಳಲ್ಲಿ ಬೂದು ತೋಳ ಹಾಗೂ ನಾಯಿ ತೋಳ ಎಂಬ ಸಂತತಿಗಳಿವೆ. ಅವುಗಳನ್ನು ದೇಹದ ಆಕಾರ, ಬಣ್ಣಗಳಿಂದ ಪ್ರತ್ಯೇಕಿಸಬಹುದು. ಈ ಎರಡು ಉಪಜಾತಿಗಳ ಪೈಕಿ ನಾಯಿ ತೋಳಗಳು ನರಭಕ್ಷಕ ತೋಳಗಳಾಗಿವೆ. ಇವು ಅತ್ಯಂತ ಚುರುಕು ಬುದ್ಧಿ ಹೊಂದಿರುತ್ತವೆ. ಇವುಗಳನ್ನು ಸೆರೆ ಹಿಡಿಯುವಾಗ ಮೀನಿಗೆ ಗಾಳ ಹಾಕಿದಂತೆ, ಮಾಂಸವನ್ನು ಬಳಸಿ ಎಚ್ಚರಿಕೆಯಿಂದ ಹಿಡಿಯಬೇಕಾಗುತ್ತದೆ ಎನ್ನುತ್ತಾರೆ ತಜ್ಞರು.

ದಾಳಿ ಹಿಂದಿದೆ ʻಸೇಡಿನ ಕಥೆʼ:
ಬಹ್ರೈಚ್‌ ಜಿಲ್ಲೆಯ ಕತರ್ನಿಯಾಘಾಟ್ ವನ್ಯಜೀವಿ ವಿಭಾಗದ ನಿವೃತ್ತ ಭಾರತೀಯ ಅರಣ್ಯ ಸೇವೆ ಅಧಿಕಾರಿ ಜ್ಞಾನ್ ಪ್ರಕಾಶ್ ಸಿಂಗ್ ತೋಳಗಳ ದಾಳಿಯ ಬಗ್ಗೆ ರೋಚಕ ಸಂಗತಿಯೊಂದನ್ನ ಈ ಹಿಂದೆಯೇ ಬಿಚ್ಚಿಟ್ಟಿದ್ದರು. ತೋಳಗಳು ಇತರ ಕಾಡು ಪ್ರಾಣಿಗಳಿಗಿಂತ ಭಿನ್ನವಾಗಿ ಸೇಡು ತೀರಿಸಿಕೊಳ್ಳುವ ಪ್ರವೃತ್ತಿಯನ್ನು ಹೊಂದಿವೆ. ನನ್ನ ಅನುಭವದ ಆಧಾರದ ಮೇಲೆ ಹೇಳುವುದಾದ್ರೆ, ತೋಳಗಳು ಸೇಡು ತೀರಿಸಿಕೊಳ್ಳುತ್ತವೆ. ಈ ಹಿಂದೆ ಮನುಷ್ಯರು ತೋಳಗಳಿಗೆ ಯಾವುದೋ ಒಂದು ರೀತಿಯಲ್ಲಿ ತೊಂದರೆ ಕೊಟ್ಟಿರುವುದರಿಂದ ಈ ದಾಳಿಗಳು ನಡೆಯುತ್ತಿವೆ ಎಂದಿದ್ದಾರೆ.

wolf

ಸುಮಾರು 25 ವರ್ಷಗಳ ಹಿಂದೆ ಉತ್ತರ ಪ್ರದೇಶದ ಚೌನ್‌ಪುರ ಮತ್ತು ಪ್ರತಾಪ್‌ ಗಢ ಜಿಲ್ಲೆಗಳ ಸಾಯಿ ನದಿಯ ಜಲಾನಯನ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಮಕ್ಕಳನ್ನು ತೋಳಗಳು ಕೊಂದಿದ್ದವು. ಈ ಬಗ್ಗೆ ತನಿಖೆ ಮಾಡಿದ ನಂತರ ಕೆಲವು ಮಕ್ಕಳು ಎರಡು ತೋಳದ ಮರಿಗಳನ್ನು ಗುಹೆಯಲ್ಲಿ ಕೊಂದಿರುವುದು ಕಂಡುಬಂದಿತು. ಬಳಿಕ ತೋಳದ ಮರಿಗಳ ಪೋಷಕರು ತುಂಬಾ ಆಕ್ರಮಣಕಾರಿಯಾದವು ಮತ್ತು ಆ ಪ್ರದೇಶದಲ್ಲಿ ವಾಸಿಸುವ ಮನುಷ್ಯರ ಮೇಲೆ ದಾಳಿ ಮಾಡಲು ಪ್ರಾರಂಭಿಸಿದವು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಪ್ರಾರಂಭಿಸಿ, ಕೆಲವು ತೋಳಗಳನ್ನು ಹಿಡಿಯಲಾಯಿತು ಆದರೆ, ಎರಡು ನರಭಕ್ಷಕ ತೋಳಗಳು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದವು. ಅಂತಿಮವಾಗಿ ಆ ತೋಳಗಳನ್ನು ಗುರುತಿಸಿ, ಗುಂಡಿಕ್ಕಿ ಕೊಲ್ಲಲಾಯಿತು ಎಂದು ಜ್ಞಾನ್ ಪ್ರಕಾಶ್ ಸಿಂಗ್ ಹೇಳಿದ್ದರು.

TAGGED:BahraichBahraich Forestforest departmentuttar pradeshWolf Attacksಅರಣ್ಯ ಇಲಾಖೆಉತ್ತರ ಪ್ರದೇಶತೋಳಗಳುಬಹ್ರೈಚ್
Share This Article
Facebook Whatsapp Whatsapp Telegram

Cinema news

Kavya 01
BBK Season 12 | 3ನೇ ರನ್ನರ್‌ಅಪ್‌ ಕಾವ್ಯ ಶೈವ ಔಟ್‌ – ಸಿಕ್ಕ ಬಹುಮಾನ ಎಷ್ಟು?
Bengaluru City Cinema Latest Main Post TV Shows
Raghu
BBK Season 12 | ಗ್ರ್ಯಾಂಡ್‌ ಫಿನಾಲೆಯಿಂದ ರಗಡ್‌ ರಘು ಔಟ್‌
Cinema Latest Main Post TV Shows
AR Rahman 2
ಭಾರತ ನನ್ನ ಸ್ಫೂರ್ತಿ, ತವರು – ಕೆಲವೊಮ್ಮೆ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಲ್ಪಡಬಹುದು: ರೆಹಮಾನ್ ಸ್ಪಷ್ಟನೆ
Bollywood Cinema Latest National
Dhanush Gowda
BBK 12 | Top-5 ಪಟ್ಟದಿಂದ ಔಟ್‌ – ಗ್ರ್ಯಾಂಡ್‌ ಫಿನಾಲೆಯಿಂದ ಹೊರಬಂದ ಧನುಷ್‌
Cinema Latest Main Post TV Shows

You Might Also Like

Narendra Modi
Latest

ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಶಿಕ್ಷೆಯಾಗಲೇಬೇಕು, ‘ಮಹಾ ಜಂಗಲ್ ರಾಜ್’ ಯುಗ ಕೊನೆಗೊಳಿಸಬೇಕು: ಮೋದಿ ಕರೆ

Public TV
By Public TV
3 hours ago
Haveri Sadhana Samavesha Shivananda Patil
Districts

ಫೆ. 13ರಂದು ಹಾವೇರಿಯಲ್ಲಿ ಬೃಹತ್ ಸಾಧನಾ ಸಮಾವೇಶ – ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

Public TV
By Public TV
3 hours ago
Road Accident
Latest

ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Public TV
By Public TV
3 hours ago
Agriculture Award For Karnataka PM Fasal Bima Yojana
Bengaluru City

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

Public TV
By Public TV
4 hours ago
HT Manju
Bengaluru City

ಅಬಕಾರಿ ಇಲಾಖೆ ಕರ್ಮಕಾಂಡ | ಸನ್ನದು ಪಡೆಯಲು 2.30 ಕೋಟಿ ಬೇಡಿಕೆ ಆರೋಪದ ಆಡಿಯೋ ವೈರಲ್ – ಹೆಚ್‌ಟಿ ಮಂಜು ದೂರು

Public TV
By Public TV
4 hours ago
Sara Mahesh
Bengaluru City

ಜೆಡಿಎಸ್‌ ಪಾಳಯದಲ್ಲಿ ಕ್ಷಿಪ್ರ ಕ್ರಾಂತಿ – ಜಿಟಿಡಿ ಕ್ಷೇತ್ರದಿಂದ ಸಾರಾ ಮಹೇಶ್‌ ಕಣಕ್ಕಿಳಿಸಲು ಪ್ಲ್ಯಾನ್‌!

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?