ಮಂಡ್ಯ: ಮಹಿಳೆಯೊಬ್ಬಳು ತೋಟದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ನಾಶ ಮಾಡಿ ಕಳ್ಳತನ ಮಾಡಲು ಮುಂದಾಗಿದ್ದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ಜರುಗಿದೆ. ಇದನ್ನೂ ಓದಿ: ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ
ಬಂಡಿಹೊಳೆ ಗ್ರಾಮದ ರೈತ ಕೆ.ರಾಮೇಗೌಡ ಅವರು ತಮ್ಮ ತೋಟದಲ್ಲಿ ನಡೆಯುತ್ತಿದ್ದ ಕಳ್ಳತನವನ್ನು ತಡೆಗಟ್ಟಲು ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದರು. ಶುಕ್ರವಾರ ತೋಟಕ್ಕೆ ಬಂದ ಮಹಿಳೆಯೊಬ್ಬಳು ಸಿಸಿಟಿವಿ ಕ್ಯಾಮೆರಾವನ್ನು ಕೋಲಿನಿಂದ ಹೊಡೆದು ಹಾಕಿರುವ ದೃಶ್ಯ ಅದೇ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳತನಕ್ಕೆ ಬಂದಿರುವ ಮಹಿಳೆ ಸಿಸಿಟಿವಿ ಕ್ಯಾಮೆರಾವನ್ನು ಹೊಡೆದು ಹಾಕಿ ಕಳ್ಳತನ ಮಾಡಿಕೊಂಡು ಹೋಗಿದ್ದಾಳೆ ಎಂದು ಕೂಡ ಆರೋಪಿಸಲಾಗಿದೆ. ಇದನ್ನೂ ಓದಿ:ಕೈ ಸನ್ನೆ ಮಾಡಿ ಕರೆದೊಯ್ದೊಳು- ಹಲ್ಲೆ ಮಾಡಿ ಹಣ ದೋಚಿದ್ರು
ಸಿಸಿಟಿವಿ ಕ್ಯಾಮೆರಾವನ್ನು ಹೊಡೆದು ಹಾಕಿರುವ ಮಹಿಳೆ ಬಂಡಿಹೊಳೆ ಗ್ರಾಮದ ರಶ್ಮಿ ಎಂದು ಗುರುತಿಸಲಾಗಿದ್ದು, ಈ ಕುರಿತು ರಾಮೇಗೌಡರು ಕೆಆರ್ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಸದ್ಯ ಸಿಸಿಟಿವಿ ಕ್ಯಾಮೆರಾದಲ್ಲಿನ ದೃಶ್ಯದ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.