ಮೂರು ಮಕ್ಕಳನ್ನು ನೀರಿನ ಸಂಪ್‌ಗೆ ಎಸೆದು, ಮಹಿಳೆ ಆತ್ಮಹತ್ಯೆ

Public TV
1 Min Read
VIJAYAPURA WOMAN

ವಿಜಯಪುರ: ಮೂರು ಮಕ್ಕಳನ್ನು ನೀರಿನ ಸಂಪ್‌ಗೆ ಎಸೆದು ಮಹಿಳೆಯೊಬ್ಬಳು (Woman) ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ನಡೆದಿದೆ.

ವಿಜಯಪುರ (Vijayapura) ಜಿಲ್ಲೆಯ ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ಘಟನೆ ನಡೆದಿದೆ. ಜಾಲಗೇರಿ ಗ್ರಾಮದ ಬಳಿಯ ವಿಠಲವಾಡಿ ತಾಂಡಾದ ಗೀತಾ ರಾಮು ಚೌವ್ಹಾಣ (32), ಸೃಷ್ಟಿ (6), ಸಮರ್ಥ (4), ಕಿಶನ್ (3) ಮೃತ ದುರ್ದೈವಿಗಳಾಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.

crime

ಶನಿವಾರ ರಾತ್ರಿ ಪತಿಯೊಂದಿಗೆ ಗೀತಾ ಜಗಳ ಮಾಡಿದ್ದಳಂತೆ. ಇದಾದ ಬಳಿಕ ಪತಿ ರಾಮು ಮಲಗಿದ್ದ ವೇಳೆ ಮೂವರು‌ ಮಕ್ಕಳನ್ನು ನೀರಿನ‌ ಸಂಪ್‌ಗೆ ಎಸೆದ ತಾಯಿ, ಬಳಿಕ ಸಂಪ್‌ನಲ್ಲಿ ತಾನೂ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಪೆರುವಿನಲ್ಲಿ ಭೀಕರ ಬಸ್ ಅಪಘಾತಕ್ಕೆ 24 ಮಂದಿ ಬಲಿ

police jeep 1

ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ತಿಕೋಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬಸವ ಕಲ್ಯಾಣದಿಂದ ಸಿದ್ದರಾಮಯ್ಯ, ಕುರಡುಮಲೆಯಿಂದ ಡಿಕೆಶಿ ಬಸ್ ಯಾತ್ರೆ- ಫೆ. 3ರಿಂದ ಆರಂಭ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *