ಕಲಬುರಗಿ: ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಅಂಬಿಕಾ ನಗರದಲ್ಲಿ ನಡೆದಿದೆ.
ಮೀನಾಕ್ಷಿ (25) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಎರಡೂವರೆ ವರ್ಷದ ಹಿಂದೆ ಆನಂದ್ ಜೊತೆ ಮೀನಾಕ್ಷಿ ಮದುವೆ ನಡೆದಿತ್ತು. ಆದರೆ ಬುಧವಾರ ರಾತ್ರಿ ಎಲ್ಲರೂ ಮಲಗಿದ ಮೇಲೆ ಅಡುಗೆ ಮನೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಜಾನೆ ಎಲ್ಲರು ಎದ್ದು ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ನನ್ನ ಮಗಳಿಗೆ ಮದುವೆಯಾದಗಿನಿಂದ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಇದರಿಂದ ಮಗಳು ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳ ಸಾವಿಗೆ ಪತಿಯೇ ಕಾರಣ ಎಂದು ಮೃತ ಮೀನಾಕ್ಷಿ ಪೋಷಕರು ಆರೋಪಿಸಿದ್ದಾರೆ.
ಈ ಕುರಿತು ಕಲಬುರಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪತಿ ಆನಂದ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv