ಬೆಂಕಿ ಹಚ್ಚಿಕೊಂಡು ಗೃಹಿಣಿ ಆತ್ಮಹತ್ಯೆ

Public TV
1 Min Read
MYS copy 1

ಮೈಸೂರು: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರು ತಾಲೂಕಿನ ಉದ್ಬೂರಿನಲ್ಲಿ ನಡೆದಿದೆ.

26 ವರ್ಷದ ಭಾಗ್ಯ ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿ. ಘಟನೆಯಿಂದ ತೀವ್ರ ಸುಟ್ಟಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.

ಭಾಗ್ಯ ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಸೀಮೆಎಣ್ಣೆ ಸುರಿದುಕೊಂಡು ನಿನ್ನೆ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಸುಟ್ಟಗಾಯಗಳ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

MYS SUCIDE

ಕಳೆದ ನಾಲ್ಕು ವರ್ಷಗಳ ಹಿಂದೆ ಉದ್ಬೂರು ಗ್ರಾಮದ ಸುರೇಶ್ ಎಂಬಾತನೊಂದಿಗೆ ಮೈಸೂರಿನ ಶಾರದಾದೇವಿನಗರ ನಿವಾಸಿಯಾಗಿರೋ ಭಾಗ್ಯ ಅವರ ವಿವಾಹ ನಡೆದಿತ್ತು. ಭಾಗ್ಯ ಅವರಿಗೆ ಒಂದೂವರೆ ವರ್ಷದ ಗಂಡು ಮಗು, ಎರಡೂವರೆ ವರ್ಷದ ಹೆಣ್ಣುಮಗು ಇದೆ.

ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *