ಚಿಕ್ಕಮಗಳೂರು: ಲಾರಿ ಚಾಲಕ ಒನ್ ವೇನಲ್ಲಿ ಬಂದ ಪರಿಣಾಮ ಬೈಕ್ಗೆ ಡಿಕ್ಕಿಯಾಗಿ, ಮಹಿಳೆ ಸ್ಥಳದಲ್ಲೇ ಸಾವಿಗೀಡಾದ ಘಟನೆ ಕಡೂರು (Kadur) ತಾಲೂಕಿನ ತಂಗಲಿ ಬಳಿ ನಡೆದಿದೆ. ಮಹಿಳೆಯ ಪತಿ ದಾವಣಗೆರೆ (Davanagere ) ಎಎಸ್ಪಿ ಗನ್ಮ್ಯಾನ್ ಜಯಣ್ಣ ಸ್ಥಿತಿ ಗಂಭೀರವಾಗಿದೆ.
ಸುಮಾ (25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಕಡೂರು ತಾಲೂಕಿನ ತಂಗಲಿ ಮೂಲದ ಜಯಣ್ಣ, ಪತ್ನಿ ಜೊತೆ ಬೈಕಿನಲ್ಲಿ ಹೋಗುವಾಗ ಈ ಅಪಘಾತ ನಡೆದಿದೆ. ಡ್ಯೂಟಿಗೆ ಹೋಗಲು ಪತ್ನಿ ಜೊತೆ ದಾವಣಗೆರೆಗೆ ತೆರಳಲು ರೈಲ್ವೇ ನಿಲ್ದಾಣಕ್ಕೆ ಹೊರಟಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಷ್ಯಾದಲ್ಲಿ ನಡೆದ ಭೀಕರ ದಾಳಿ ಖಂಡಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಜಯಣ್ಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒನ್ ವೇನಲ್ಲಿ ಬಂದ ಲಾರಿ ಚಾಲಕನಿಂದ ಅಪಘಾತ ನಡೆದಿದೆ. ಲಾರಿ ಚಾಲಕನ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ- ತಾನೇ ಹೋಗಿ ಮೆಟ್ರೋ ಹಳಿಗೆ ತಲೆ ಕೊಟ್ಟ ವೀಡಿಯೋ ಲಭ್ಯ