ಶಿವಮೊಗ್ಗ: ದೆವ್ವ (Evil) ಅಂಟಿಕೊಂಡಿದೆ, ಬಿಡಿಸುತ್ತೇನೆಂದು ಹೇಳಿ ಚಿತ್ರಹಿಂಸೆ ನೀಡಿದ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ (Woman) ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟೆಯಲ್ಲಿ ನಡೆದಿದೆ.
ಜಂಬರಗಟ್ಟೆ ನಿವಾಸಿ ಗೀತಮ್ಮ (50) ಸಾವನ್ನಪ್ಪಿದ ಮಹಿಳೆ. ತಾಯಿಗೆ ಹುಷಾರಿಲ್ಲದ ಹಿನ್ನೆಲೆ ಮಗನೇ ದೆವ್ವ ಬಿಡಿಸಲು ಹೊಸ ಜಂಬರಘಟ್ಟಕ್ಕೆ ಕರೆದುಕೊಂಡು ಹೋಗಿದ್ದ. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಗೀತಮ್ಮನನ್ನು ದೆವ್ವ ಹಿಡಿದಿದೆ ಎಂದು ಕರೆದುಕೊಂಡು ಹೋಗಿದ್ದ. ಇದನ್ನೂ ಓದಿ: ನಮಗೆ ಕುಡಿಯೋಕೆ ನೀರು ಕೊಡಿ: ಸಿಎಂಗೆ ವಿದ್ಯಾರ್ಥಿನಿ ಪತ್ರ
ಈ ವೇಳೆ ದೆವ್ವಾ ಬಿಡಿಸುತ್ತೇನೆ ಎಂದು ಶಾಂತಮ್ಮ ಎಂಬ ಮಹಿಳೆ ಗೀತಮ್ಮನಿಗೆ ಚಿತ್ರಹಿಂಸೆ ನೀಡಿದ್ದಾಳೆ. ಚಿತ್ರಹಿಂಸೆ ತಾಳಲಾರದೇ ಗೀತಮ್ಮ ಸಾವನ್ನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ರೌಡಿಶೀಟರ್ನಿಂದ ದಾಂಧಲೆ – 18ಕ್ಕೂ ಹೆಚ್ಚು ವಾಹನಗಳ ಗಾಜು ಪುಡಿಪುಡಿ, ಮೂವರು ಅರೆಸ್ಟ್