Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: SORRY ಕೇಳುವಂತೆ ಯುವಕನ ಬಾಯಿಗೆ ಚಪ್ಪಲಿ ತುರುಕಿ ಹಲ್ಲೆಗೈದ ಮಹಿಳಾ ಉದ್ಯಮಿ & ಟೀಂ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | SORRY ಕೇಳುವಂತೆ ಯುವಕನ ಬಾಯಿಗೆ ಚಪ್ಪಲಿ ತುರುಕಿ ಹಲ್ಲೆಗೈದ ಮಹಿಳಾ ಉದ್ಯಮಿ & ಟೀಂ!

Crime

SORRY ಕೇಳುವಂತೆ ಯುವಕನ ಬಾಯಿಗೆ ಚಪ್ಪಲಿ ತುರುಕಿ ಹಲ್ಲೆಗೈದ ಮಹಿಳಾ ಉದ್ಯಮಿ & ಟೀಂ!

Public TV
Last updated: November 24, 2023 7:37 pm
Public TV
Share
2 Min Read
GUJRAT WOMAN RANIBA
SHARE

ಗಾಂಧಿನಗರ: ದಲಿತ ಯುವಕನ ಮೇಲೆ ಹಲ್ಲೆ ಹಾಗೂ ಆತನ ಬಾಯಿಗೆ ಚಪ್ಪಲಿ ತುರುಕಿದ ಆರೋಪದ ಮೇಲೆ ಮಹಿಳಾ ಉದ್ಯಮಿ (Woman Businessman) ಜೊತೆ 6 ಮಂದಿಯ ವಿರುದ್ಧ ಗುಜರಾತ್‍ನ (Gujrat) ಮೊರ್ಬಿ ನಗರದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೃತ್ಯ ಎಸಗಿದ ಮಹಿಳಾ ಉದ್ಯಮಿಯನ್ನು ವಿಭೂತಿ ಪಟೇಲ್ ಅಕಾ ರಾಣಿಬಾ ಎಂದು ಗುರುತಿಸಲಾಗಿದೆ. ಈ ಸಂಬಂಧ ಸಂತ್ರಸ್ತ ನಿಲೇಶ್ ದಲ್ಸಾನಿಯಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಮೊರ್ಬಿ ನಗರದ ಪೊಲೀಸರು ಇಂದು ಮಹಿಳೆ ವಿಭೂತಿ ಪಟೇಲ್ ಅಕಾ ರಾಣಿಬಾ ಮತ್ತು ಆಕೆಯ ಸಹೋದರ ಓಂ ಪಟೇಲ್ ಮತ್ತು ಮ್ಯಾನೇಜರ್ ಸೇರಿದಂತೆ ಇತರರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಸಿ/ಎಸ್‍ಟಿ ಸೆಲ್) ಪ್ರತಿಪಾಲ್‍ಸಿನ್ಹ್ ಝಾಲಾ ಹೇಳಿದರು.

ವಿಭೂತಿ ಪಟೇಲ್ ಅಕಾ ರಾಣಿಬಾ ಕಂಪನಿಯಲ್ಲಿ 21 ವರ್ಷದ ದಲಿತ ಯುವಕ 15 ದಿನ ಕೆಲಸ ಮಾಡಿದ್ದನು. ಅಂತೆಯೇ ಆತ ಸಂಬಳಕ್ಕೆ ಬೇಡಿಕೆ ಇಟ್ಟಿದ್ದಕ್ಕಾಗಿ ಮಹಿಳಾ ಉದ್ಯಮಿಯು ಯುವಕನ ಬಾಯಿಗೆ ತುರುಕಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾಳೆ. ಈ ಘಟನೆ ಬುಧವಾರ ನಡೆದಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: 4 ತಿಂಗಳ ಪುಟ್ಟ ಕಂದಮ್ಮನಿಗೆ ಹಾಲುಣಿಸಿ ಸಂತೈಸಿದ ಮಹಿಳಾ ಪೊಲೀಸ್: ಭಾರೀ ಮೆಚ್ಚುಗೆ

ದೂರಿನಲ್ಲೇನಿದೆ..?: ಕಳೆದ ಅಕ್ಟೋಬರ್‍ನಲ್ಲಿ ರಾಣಿ ಬಾ ಅವರು ತಮ್ಮ ಸಂಸ್ಥೆಗೆ ನಿಲೇಶ್ ದಲ್ಸಾನಿಯಾನನ್ನು ನೇಮಕ ಮಾಡಿಕೊಂಡಿದ್ದರು. ಅಂತೆಯೇ ಟೈಲ್ಸ್ ಮಾರ್ಕೆಟಿಂಗ್ ಕೆಲಸಕ್ಕಾಗಿ ನಿಲೇಶ್‍ನನ್ನು ನಿಯೋಜಿಸಲಾಗಿತ್ತು. ಆತನಿಗೆ 12 ಸಾವಿರ ರೂಪಾಯಿ ಸಂಬಳ ಕೊಡೋದಾಗಿ ಹೇಳಲಾಗಿತ್ತು. ಆದರೆ ಸಂಬಳವನ್ನೇ ಕೊಟ್ಟಿರಲಿಲ್ಲ ಎಂದು ಎಫ್‍ಐಆರ್ ನಲ್ಲಿ ವಿವರಿಸಲಾಗಿದೆ.

POLICE JEEP 1

ಅಕ್ಟೋಬರ್ ಅಂತ್ಯದ ವೇಳೆಗೆ ನಿಲೇಶ್‍ನನ್ನು ಇದ್ದಕ್ಕಿದ್ದಂತೆಯೇ ಕೆಲಸದಿಂದ ಕಿತ್ತು ಹಾಕಿದ್ದರು. ಹೀಗಾಗಿ 16 ದಿನ ಕೆಲಸ ಮಾಡಿದ್ದು, ಅಷ್ಟು ದಿನಗಳ ವೇತನವನ್ನಾದರೂ ಕೊಡಿ ಎಂದು ನಿಲೇಶ್ ದಲ್ಸಾನಿಯಾ ಬೇಡಿಕೆ ಇಟ್ಟಿದ್ದರು. ಆದರೆ ಯುವಕ ಬೇಡಿಕೆಗೆ ರಾಣಿ ಬಾ ಕ್ಯಾರೇ ಎಂದಿಲ್ಲ. ಆತನ ಫೋನ್ ಕರೆಗಳನ್ನೂ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಬೇಸತ್ತ ನಿಲೇಶ್ ದಲ್ಸಾನಿಯಾ ತಮ್ಮ ಸಹೋದರ ಮೇಹುಲ್ ಹಾಗೂ ನೆರೆ ಮನೆಯ ಭಾವೇಶ್ ಎಂಬಾತನ ಜೊತೆಗೆ ಕಳೆದ ಬುಧವಾರ ರಾಣಿಬಾ ಅವರ ಕಚೇರಿಗೆ ತೆರಳಿದ್ದ. ತಮ್ಮ ಸಂಬಳ ಕೊಡಿ ಎಂದು ಬೇಡಿಕೆ ಇಟ್ಟ. ಈ ವೇಳೆ ರಾಣಿಬಾ ತಮ್ಮ ಸಹೋದರ ಓಂ ಪಟೇಲ್ ಕರೆ ಮಾಡಿದರು.

ಆರೋಪಿ ಮಹಿಳಾ ಉದ್ಯಮಿ ರಾಣಿಬಾ, ಆಕೆಯ ಸಹೋದರ ಓಂ ಪಟೇಲ್, ಕಂಪನಿಯ ಮ್ಯಾನೇಜರ್ ಹಾಗೂ ಇತರ ಕಾರ್ಮಿಕರು ಸೇರಿಕೊಂಡು ಮೂವರಿಗೂ ಥಳಿಸಿದರು. ಕೊನೆಗೆ ನಿಲೇಶ್ ದಲ್ಸಾನಿಯಾ ಬಾಯಿಗೆ ತನ್ನ ಚಪ್ಪಲಿ ತಿರುಕಿದ ರಾಣಿಬಾ ಕ್ಷಮೆ ಕೇಳುವಂತೆ ಆಗ್ರಹಿಸಿದರು. ಇಷ್ಟು ಮಾತ್ರವಲ್ಲದೆ ಮೂವರನ್ನೂ ತಮ್ಮ ವಾಣಿಜ್ಯ ಕಟ್ಟಡದ ಟೆರೇಸ್‍ಗೆ ಎಳೆದೊಯ್ದು ಅಲ್ಲಿಯೂ ಹಿಗ್ಗಾಮುಗ್ಗ ಥಳಿಸಿದರು ಎಂದು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಇದೀಗ ಆರು ಮಂದಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.

TAGGED:gujratಗುಜರಾತ್ಚಪ್ಪಲಿದಲಿತ ಯುವಕಮಹಿಳಾ ಉದ್ಯಮಿಹಲ್ಲೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
12 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
21 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
56 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?