ಹೈದರಾಬಾದ್: ಬ್ಲೌಸ್ ಸರಿಯಾಗಿ ಹೊಲಿಯಲಿಲ್ಲವೆಂದು ಪತಿಯೊಂದಿಗೆ ಮಹಿಳೆ ಜಗಳವಾಡಿದ್ದಾಳೆ. ಇದೇ ವಿಚಾರವಾಗಿ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಶ್ರೀನಿವಾಸ್ ಪತ್ನಿ ವಿಜಯಲಕ್ಷ್ಮಿ (36) ಮೃತರು. ಬ್ಲೌಸ್ ವಿಚಾರವಾಗಿ ದಂಪತಿ ನಡುವೆ ನಡೆದಿರುವ ಜಗಳ ಪತ್ನಿ ಪ್ರಾಣವನ್ನು ಕಳೆದುಕೊಳ್ಳವ ಮಟ್ಟಿಗೆ ಹೋಗಿದೆ. ಇದನ್ನೂ ಓದಿ: ರಾಜ್ ಕುಟುಂಬದಿಂದ ಗಂಧದಗುಡಿಯ 3ನೇ ಪ್ರಯೋಗ
ದಂಪತಿ ಹೈದರಾಬಾದ್ನ ಅಂಬರಪೇಟ್ನಲ್ಲಿ ವಾಸವಾಗಿದ್ದರು. ಶ್ರೀನಿವಾಸ್ ಟೈಲರ್ ಆಗಿದ್ದು, ಸೀರೆ ವ್ಯಾಪಾರವನ್ನೂ ಮಾಡುತ್ತಿದ್ದರು. ಶನಿವಾರ ಪತ್ನಿ ವಿಜಯಲಕ್ಷ್ಮಿಗೆ ಬ್ಲೌಸ್ ಹೊಲಿದು ಕೊಟ್ಟಿದ್ದಾರೆ. ಆದರೆ ಆಕೆಗೆ ಬ್ಲೌಸ್ ಇಷ್ಟವಾಗಿರಲಿಲ್ಲ. ಈ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿದೆ. ಇದನ್ನೂ ಓದಿ: ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್
ಇದೇ ಸಿಟ್ಟಿನಿಂದ ವಿಜಯಲಕ್ಷ್ಮಿ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾಳೆ. ಮಧ್ಯಾಹ್ನ 12.30ಕ್ಕೆ ಮಕ್ಕಳು ಶಾಲೆಯಿಂದ ಮನೆಗೆ ಬಂದು ಬಾಗಿಲು ತಟ್ಟಿದರೂ ಆಕೆ ಪ್ರತಿಕ್ರಿಯಿಸಲಿಲ್ಲ. ಆಕೆ ಪತಿ ಶ್ರೀನಿವಾಸ್ ಬಾಗಿಲು ಒಡೆದು ಒಳ ಹೋದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಶ್ರೀನಿವಾಸ್ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಂಬರ್ಪೇಟ್ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.