– ಪತಿ ವಿರುದ್ಧ ಕೊಲೆ ಆರೋಪ
ಬೆಂಗಳೂರು: ಪತಿಯ ವಿರುದ್ಧ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ (Wife) ಆತ್ಮಹತ್ಯೆ ಶರಣಾದ ಘಟನೆ ಹೆಬ್ಬಾಳದ (Hebbal) ಕನಕನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಬಾಹರ್ ಅಸ್ಮಾ (29) ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಬಶೀರ್ ವುಲ್ಲಾ ಎಂಬಾತನನ್ನು ಮದುವೆ ಆಗಿದ್ದರು. ಆತನಿಗೆ ಬೇರೆ ಯುವತಿ ಜೊತೆಗೆ ಅನೈತಿಕ ಸಂಬಂಧವಿದೆ ಎಂಬ ಆರೋಪ ಕೇಳಿಬಂದಿದೆ.
ಮಹಿಳೆ ಕುಟುಂಬಸ್ಥರು ಅಸ್ಮಾಳನ್ನು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಆರೋಪಿಸಿದೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.