ಬೆಂಗಳೂರು: ಎರಡು ವರ್ಷದ ಮಗನ ಹುಟ್ಟುಹಬ್ಬವನ್ನು ಆಚರಿಸಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ 35 ವರ್ಷದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ತೇಜಸ್ವಿನಿ (35) ಎಂದು ಗುರುತಿಸಲಾಗಿದ್ದು, ಮೇ 6ರ ಶುಕ್ರವಾರದಂದು ಸಂಜೆ 5.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸ್ಥಳೀಯರು ತೇಜಸ್ವಿ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾರೆ. ಇದನ್ನೂ ಓದಿ : ದೇವೇಂದ್ರ ಫಡ್ನವಿಸ್ರಿಂದ ಠಾಕ್ರೆ ಆಡಳಿತ ನಡೆಸೋದನ್ನ ಕಲಿಬೇಕು: ನವನೀತ್ ರಾಣಾ
ಈ ಸಂಬಂಧ ಮೃತ ಮಹಿಳೆಯ ಸಹೋದರ ಅಜಯ್ ಕುಮಾರ್ ಅವರು, ತೇಜಸ್ವಿನಿ ಅವರು ಶ್ರೀಕಾಂತ ಅವರನ್ನು ಮದುವೆಯಾಗಿದ್ದರು. ಈ ದಂಪತಿಗೆ ಎರಡು ವರ್ಷದ ಧನುಷ್ ಮತ್ತು ನಾಲ್ಕು ವರ್ಷದ ದೀಕ್ಷಾ ಎಂಬ ಇಬ್ಬರು ಮಕ್ಕಳಿದ್ದಾರೆ. ಆದರೆ ಅವರು ನಡೆಸುತ್ತಿದ್ದ ವ್ಯಾಪಾರದಲ್ಲಿ ಭಾರೀ ನಷ್ಟ ಉಂಟಾಗಿ, ಅಂಗಡಿಯನ್ನು ಮುಚ್ಚಲಾಯಿತು. ಇದರಿಂದ ಅವರ ಆರ್ಥಿಕ ಪರಿಸ್ಥಿತಿ ತೀರ ಹದಗೆಟ್ಟಿತ್ತು.
ಇದೇ ವೇಳೆ ಮಗನ ಹುಟ್ಟುಹಬ್ಬವನ್ನು ಆಚರಿಸುವ ಬಗ್ಗೆ ಪತಿಯೊಂದಿಗೆ ಚರ್ಚಿಸಿದ್ದಾರೆ. ಕುಟುಂಬದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರಿಂದ ಮೈಸೂರಿನಲ್ಲಿದ್ದ ಶ್ರೀಕಾಂತ್ ಅವರು ಮನೆಗೆ ಹಿಂದಿರುಗುವವರೆಗೂ ಕಾಯುವಂತೆ ತಿಳಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದ ಬೇಸತ್ತು ನನ್ನ ಸಹೋದರಿ ನೇಣಿಗೆ ಶರಣಾಗಿದ್ದಾಳೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನೂ ಓದಿ : ಬಿಕಿನಿಯಲ್ಲೇ ಕೇಕ್ ಕತ್ತರಿಸಿದ ಅಮೀರ್ ಖಾನ್ ಪುತ್ರಿ ಇರಾ