ಮಹಿಳೆಯರನ್ನು ಚುಡಾಯಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿದ ಗ್ರಾಮಸ್ಥರು

Public TV
1 Min Read
CKD 1

-ಮಹಿಳೆಯ ಕೊಲೆ ಮಾಡಿ ರಸ್ತೆ ಬದಿಗೆ ಬೀಸಾಕಿದ ದುಷ್ಕರ್ಮಿಗಳು

ಚಿಕ್ಕೋಡಿ: ಮಹಿಳೆಯರನ್ನು ಚುಡಾಯಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿ ಗ್ರಾಮಸ್ಥರು ಬುದ್ಧಿ ಕಲಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹೇಶವಾಡಗಿ ಗ್ರಾಮದಲ್ಲಿ ನಡೆದಿದ್ದರೆ, ಇನ್ನೊಂದೆಡೆ ಮಹಿಳೆಯನ್ನು ಕೊಲೆ ಮಾಡಿ ರಸ್ತೆ ಬದಿಗೆ ಬೀಸಾಕಿ ದುಷ್ಕರ್ಮಿಗಳು ಪಾರಾರಿಯಾಗಿರುವ ಘಟನೆ ರಾಯಭಾಗ ತಾಲೂಕಿನ ಕೋಳಿಗುಡ್ಡ ಗ್ರಾಮದಲ್ಲಿ ನಡೆದಿದೆ.

CKD 2

ವಾಟ್ಸಪ್ ನಲ್ಲಿ ಅಸಹ್ಯವಾಗಿ ಮೆಸೇಜ್ ಮಾಡುತ್ತಿದ್ದ ಸುಧಾಕರ್ ಡುಮ್ಮಗೋಳ ಎಂಬಾತನಿಗೆ ಗ್ರಾಮಸ್ಥರೆಲ್ಲರೂ ಸೇರಿ ಧರ್ಮದೇಟು ನೀಡಿ ತಲೆ ಬೋಳಿಸಿ ಪಾಠ ಕಲಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಖಯಾಲಿ ಮುಂದುವರೆಸಿದ್ದ ಸುಧಾಕರ್‍ಗೆ ವಾನಿರ್ಂಗ್ ಮಾಡಿದರೂ ಸಹ ಕೇಳದ ಸುಧಾಕರ್‍ನನ್ನು ಹಿಡಿದು ಗ್ರಾಮಸ್ಥರು ತಲೆ ಬೋಳಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಘಟನೆಯಿಂದ ಅವಮಾನಗೊಂಡ ಸುಧಾಕರ್ ಇದೀಗ ಊರು ಬಿಟ್ಟು ತಲೆ ಮರೆಸಿಕೊಂಡಿದ್ದಾನೆ. ಅಲ್ಲದೇ ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ:ಅನ್ನದಾತರ ಬಾಳು ಹಸನಾಗಲು ಸಮಗ್ರ ಕೃಷಿ ಅಭಿಯಾನ ಸಹಕಾರಿ: ಶಶಿಕಲಾ ಜೊಲ್ಲೆ

CKD 3

ಮತ್ತೊಂದೆಡೆ ಕೊಲೆ ಮಾಡಿ ರಸ್ತೆ ಪಕ್ಕದಲ್ಲಿ ಮಹಿಳೆಯ ಶವ ಎಸೆದು ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕೋಳಿಗುಡ್ಡ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿ 31ರ ಪಕ್ಕದ ಕಬ್ಬಿನ ಗದ್ದೆಯಲ್ಲಿ ದುಷ್ಕರ್ಮಿಗಳು ಶವ ಎಸೆದು ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಅಂದಾಜು 35 ವರ್ಷದ ಅಪರಚಿತ ಮಹಿಳೆಯ ಶವವನ್ನು ಬೀಸಾಕಿ ಹೋಗಿರುವ ಕಾರಣ ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮಹಿಳೆಯ ಪರಿಚಯ ಸಿಗುತ್ತಿದ್ದಂತೆ ದುಷ್ಕರ್ಮಿಗಳ ಹುಡುಕಾಟಕ್ಕೆ ಬಲೆ ಬೀಸಲಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಪಂಚರ್ ಆಗಿ ಹಿಮ್ಮುಖವಾಗಿ ಚಲಿಸಿ ಟ್ರ್ಯಾಕ್ಟರ್ ಪಲ್ಟಿ

Share This Article
Leave a Comment

Leave a Reply

Your email address will not be published. Required fields are marked *