ವಂಚಿಸಿದ ಪ್ರಿಯಕರನ ಮೇಲೆ ಕುದಿಯುವ ಎಣ್ಣೆ ಸುರಿದ ಯುವತಿ

Public TV
1 Min Read
Tamil Nadu woman

ಚೆನ್ನೈ: ವಂಚಿಸಿದ (Cheat) ಪ್ರಿಯಕರನ (Boy Friend) ಮೇಲೆ ಯುವತಿಯೊಬ್ಬಳು ಕುದಿಯುವ ಎಣ್ಣೆ ಸುರಿದ ಘಟನೆ ತಮಿಳುನಾಡಿನ (Tamil Nadu) ಈರೋಡ್‍ನಲ್ಲಿ ನಡೆದಿದೆ.

ಕಾರ್ತಿ (27) ತಮಿಳುನಾಡಿನ ಭವಾನಿಯ ವರ್ಣಪುರಂ ನಿವಾಸಿಯಾಗಿದ್ದು, ಪೆರುಂದುರೈನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ. ಈತ ತನ್ನ ಸಂಬಂಧಿ ಮೀನಾ ದೇವಿಯೊಂದಿಗೆ ಸಂಬಂಧ ಹೊಂದಿದ್ದ. ಜೊತೆಗೆ ಮದುವೆಯಾಗುವುದಾಗಿಯೂ ಭರವಸೆ ನೀಡಿದ್ದ.

Tamil Nadu police

ಆದರೆ ಕಾರ್ತಿ ಬೇರೊಬ್ಬ ಮಹಿಳೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಷಯವನ್ನು ಮೀನಾದೇವಿ ತಿಳಿದಿದ್ದಾಳೆ. ಅದಾದ ಬಳಿಕ ಈ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಅದಾದ ಬಳಿಕ ಮೀನಾದೇವಿಯನ್ನು ಕಾರ್ತಿ ಭೇಟಿಯಾಗಲು ಹೋದಾಗ ಮತ್ತೆ ಜಗಳ ನಡೆದಿದೆ. ಇದರಿಂದ ಕೋಪಗೊಂಡ ಮೀನಾ ದೇವಿ ಆತನ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾಳೆ. ಇದನ್ನೂ ಓದಿ: ಉದ್ಯಮಿ ಪ್ರದೀಪ್ ಶೂಟೌಟ್ ಕೇಸ್- A3 ಆರೋಪಿ ಲಿಂಬಾವಳಿ ಹೇಳಿಕೆ ಕೂಡ ದಾಖಲು

police jeep 1

ಇದರಿಂದಾಗಿ ಕೈ ಮತ್ತು ಮುಖ ಉರಿಯಲಾರಂಭಿಸಿದ್ದರಿಂದ ಕಾರ್ತಿ ನೆಲಕ್ಕೆ ಬಿದ್ದಿದ್ದಾನೆ. ಸಹಾಯಕ್ಕಾಗಿ ಆತನ ಕೂಗು ಕೇಳಿದ ನೆರೆಹೊರೆಯವರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರು. ಘಟನೆಗೆ ಸಂಬಂಧಿಸಿ ಪೊಲೀಸರು ಮೀನಾದೇವಿಯನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಸುತ್ತಿಗೆಯಿಂದ ಹೊಡೆದು ತಂದೆಯ ಕೊಲೆ – ಶವವನ್ನು ಪೀಸ್ ಪೀಸ್ ಮಾಡಿ ಸೂಟ್‍ಕೇಸ್‍ನಲ್ಲಿ ತುಂಬಿದ ಪಾಪಿ ಮಗ

Share This Article
Leave a Comment

Leave a Reply

Your email address will not be published. Required fields are marked *