ರಾಯ್ಪುರ್: ಮಹಿಳೆಯೊಬ್ಬರು ತಮ್ಮ ನಾಲಿಗೆಯನ್ನೇ ಕತ್ತರಿಸಿ ಶಿವನಿಗೆ ಅರ್ಪಿಸಿರುವ ಆಘಾತಕಾರಿ ಘಟನೆ ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಫರ್ತು ರಾಮ್ ಗೊಂಡ್ ಎಂಬುವರ ಪತ್ನಿ 28 ವರ್ಷದ ಸೀಮಾಭಾಯಿ ತನ್ನ ನಾಲಿಗೆಯನ್ನೇ ಕತ್ತರಿಸಿ ಶಿವನಿಗೆ ಅರ್ಪಿಸಿದ್ದಾರೆ. ಕೊರ್ಬಾ ಜಿಲ್ಲೆಯ ನುನೆರಾ ಗ್ರಾಮದಲ್ಲಿರುವ ಶಿವ ದೇವಾಲಯದಲ್ಲಿ ಬುಧವಾರ ಬೆಳಗ್ಗೆ ಈ ಘಟನೆ ನಡೆದಿದೆ.
ಸೀಮಾಭಾಯಿ ಶಿವರಾತ್ರಿ ಪ್ರಯುಕ್ತ ಬೆಳಿಗ್ಗೆ ಹತ್ತಿರದ ಶಿವ ದೇವಸ್ಥಾನಕ್ಕೆ ಹೋಗಿದ್ದಾರೆ. ನಂತರ ಪ್ರಾರ್ಥನೆ ಮುಗಿದ ಬಳಿಕ ಏಕಾಏಕಿ ಶಿವಲಿಂಗದ ಮುಂದೆ ಚಾಕುವಿನಿಂದ ತಮ್ಮ ನಾಲಿಗೆ ಕತ್ತರಿಸಿಕೊಂಡಿದ್ದಾರೆ. ಅಲ್ಲಿದ್ದ ಗ್ರಾಮಸ್ಥರು ತಕ್ಷಣವೇ ದೇವಸ್ಥಾನದಲ್ಲಿ ರಕ್ತಸ್ರಾವದಿಂದ ಬಿದ್ದಿದ್ದ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದೀಗ ಮಹಿಳೆಯ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಕೊರ್ಬಾ ಜಿಲ್ಲೆಯ ಕೇಂದ್ರ ಕಚೇರಿಯಿಂದ 60 ಕಿ.ಮೀ. ದೂರದಲ್ಲಿದೆ. ಆದರೆ ಈ ಘಟನೆಯ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.