ಕೋಲ್ಕತ್ತಾ: ಪ್ರೀತಿಸಿದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬರ್ಹಾಂಪೋರ್ನಲ್ಲಿ ನಡೆದಿದೆ.
ಆರೋಪಿಯನ್ನು ಸುಶಾಂತ್ ಚೌಧರ್ಯ ಎಂದು ಗುರುತಿಸಲಾಗಿದ್ದು, ಆರೋಪಿ ಹಾಗೂ ಸಂತ್ರಸ್ತೆ ಬಹಳ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ನಂತರ ಇಬ್ಬರ ನಡುವೆ ಜಗಳ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಚೌಧರಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ: ಹರಿಯಾಣ ಶಾಸಕ ಅಸೀಮ್ ಪ್ರತಿಜ್ಞೆ
- Advertisement 2
- Advertisement 3
ಮುರ್ಷಿದಾಬಾದ್ ಪೊಲೀಸರು ಆತನನ್ನು ಹಿಡಿಯಲು ಚೆಕ್ಪೋಸ್ಟ್ ಪೊಲೀಸ್ ಠಾಣೆಗಳಿಗೆ ಎಚ್ಚರಿಕೆ ನೀಡಿದರು. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಬಳಿ ಇದ್ದ ನಕಲಿ ಆಟಿಕೆ ಬಂದೂಕು ಮತ್ತು ಚಾಕುವನ್ನು ವಶಪಡಿಸಿಕೊಂಡರು. ಯುವತಿಯನ್ನು ಕೊಲ್ಲಲು ಅದೇ ಚಾಕುವನ್ನು ಆರೋಪಿ ಬಳಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬಾಬರಿ ಧ್ವಂಸ ವೇಳೆ ಶಿವಸೇನೆ ಎಲ್ಲಿತ್ತು ಎಂದು ನಿಮ್ಮ ನಾಯಕರನ್ನು ಕೇಳಿ: ಬಿಜೆಪಿಗೆ ರಾವತ್ ತಿರುಗೇಟು