ಮೊಬೈಲ್ ಜಾಸ್ತಿ ಬಳಸಬೇಡ ಅಂದಿದ್ದಕ್ಕೆ ಯುವತಿ ಆತ್ಮಹತ್ಯೆ

Public TV
0 Min Read
mobile

ಕಾರವಾರ: ಮೊಬೈಲ್ ನೋಡದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಬ್ಬುವಾಡದಲ್ಲಿ ನಡೆದಿದೆ.

Mobile 1

ಮೇಘ (20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಈಕೆ ಮೂಲತಃ ಸಿದ್ದಾಪುರದವಳು. ಪ್ಯಾರಾಮೇಡಿಕಲ್ ಕೋರ್ಸ್ ಮುಗಿಸಿಕೊಂಡಿದ್ದ ಯುವತಿ ಮೊಬೈಲ್ ಗೀಳು ಹಚ್ಚಿಕೊಂಡಿದ್ದಳು. ಇದಲ್ಲದೇ ಸ್ನೇಹಿತರೊಂದಿಗೆ ಮೊಬೈಲ್ ನಲ್ಲಿ ಹರಟುತ್ತಿದ್ದರಿಂದ ಪೋಷಕರು ತಿಳಿಹೇಳಿದ್ದಾರೆ. ಇದನ್ನೂ ಓದಿ: ಸೀಬೆ ಹಣ್ಣು ಕೀಳಲು ಹೋಗಿ ಪ್ರಾಣ ಕಳೆದುಕೊಂಡ ಸಹೋದರಿಯರು

woman mobile

ಹೆತ್ತವರ ಮಾತಿನಿಂದ ಕೋಪಗೊಂಡಿದ್ದ ಈಕೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *