ಬೆಂಗಳೂರು: ಮಗಳ ಮದುವೆಗೆ ಬಾರದೇ ತನ್ನ ಎರಡನೇ ಪತ್ನಿ ಜೊತೆ ಪತಿರಾಯ ಇದ್ದ ಎಂದು ಸಿಟ್ಟಿಗೆದ್ದ ಮೊದಲ ಪತ್ನಿ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಆನೇಕಲ್ನಲ್ಲಿ ನಡೆದಿದೆ.
ಇಬ್ಬರ ಪತ್ನಿಯರ ಬೀದಿ ರಂಪಾಟದಿಂದ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಆನೇಕಲ್ ಬನಹಳ್ಳಿಯಲ್ಲಿ ವಾಸ ಮಾಡುತ್ತಿದ್ದ ಕೃಷ್ಣಪ್ಪ ಮೊದಲ ಹೆಂಡತಿ ಚಂದ್ರಕಲಾರೊಂದಿಗೆ ವಾಸ ಮಾಡುತ್ತಿದ್ದ. ಆದರೆ ಒಬ್ಬಳು ಪತ್ನಿ ಸಾಕಾಗಲ್ಲ ಅನ್ನೋ ಹಾಗೆ ಕೃಷ್ಣಪ್ಪ ವಸಂತಕುಮಾರಿಯನ್ನು ಕೂಡ ಮದುವೆ ಆಗಿದ್ದ. ಬಳಿಕ ಮೊದಲ ಪತ್ನಿ ಹಾಗೂ ಮಕ್ಕಳನ್ನು ಬಿಟ್ಟು ಎರಡನೇ ಪತ್ನಿ ಜೊತೆ ಮನೆ ಮಾಡಿಕೊಂಡು ವಾಸಿಸುತ್ತಿದ್ದನು.
ಮೊದಲಿಂದಲೂ ಈ ವಿಚಾರಕ್ಕಾಗಿ ಇಬ್ಬರು ಪತ್ನಿಯರ ನಡುವೆ ಜಗಳ, ಗಲಾಟೆಗಳು ನಡೆಯುತ್ತಲೇ ಇತ್ತು. ಆದ್ರೆ ಪತಿ ಯಾವಾಗ ಮಗಳ ಮದುವೆಗೆ ಬಾರದೇ ಎರಡನೇ ಪತ್ನಿ ಜೊತೆ ಇದ್ದನೋ ಮೊದಲನೇ ಪತ್ನಿ ಮತ್ತು ಮಕ್ಕಳು ಸಿಟ್ಟಿಗೆದ್ದಿದ್ದಾರೆ. ಬಳಿಕ ವಸಂತಕುಮಾರಿ ಹಾಗೂ ಕೃಷ್ಣಪ್ಪನ ಮನೆಗೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೇ ಕೃಷ್ಣಪ್ಪ ಹಾಗೂ ವಸಂತಕುಮಾರಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಈ ಘಟನೆ ಕುರಿತು ಹಲ್ಲೆಗೊಳಗಾದ ಕೃಷ್ಣಪ್ಪ ಹಾಗೂ ವಸಂತಕುಮಾರಿ ಪೊಲೀಸರಿಗೆ ದೂರು ನೀಡಿದ್ದು, ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv