ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಮಹಿಳೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಬೈಪಾಸ್ ರಸ್ತೆಯ ಅಗಲಗುರ್ಕಿ ಬಳಿ ನಡೆದಿದೆ.
ಬೈಪಾಸ್ ರಸ್ತೆಯ ಬಳಿ ಇನ್ನೋವಾ ಕಾರಿನ ಮೇಲೆ ಟಿಪ್ಪರ್ ಲಾರಿ ಹರಿದಿತ್ತು. ಪರಿಣಾಮ ಕಾರು ಚಲಾಯಿಸುತ್ತಿದ್ದ 32 ವರ್ಷದ ಮಹಿಳೆ ದೀಪಾ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಆದರೆ ಈ ವೇಳೆ ಕಾರಿನಲ್ಲಿ ಮಹಿಳೆಯ ರಕ್ಷಣೆಗೆ ಧಾವಿಸಿದ್ದ ಜನರ ಗುಂಪಿನಲ್ಲಿದ್ದ ಕಳ್ಳನೊಬ್ಬ ಸುಮಾರು 80 ಗ್ರಾ ಮಾಂಗಲ್ಯ ಸರ ಕಳ್ಳತನ ಮಾಡಿದ್ದಾನೆ.
ಟಿಪ್ಪರ್ ಲಾರಿ ಹರಿದ ಪರಿಣಾಮ ಕಾರು ಅಪ್ಪಚ್ಚಿಯಾಗಿತ್ತು. ಈ ವೇಳೆ ಮಹಿಳೆಯನ್ನು ಕಾರಿನಿಂದ ರಕ್ಷಣೆ ಮಾಡಲು ಹೊರ ತೆಗೆದ ವೇಳೆ ಘಟನೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಕುಟುಂಬಸ್ಥರೊಂದಿಗೆ ಚಿಕ್ಕಜಾಲ ಬಳಿಯ ಉತ್ತನಹಳ್ಳಿ ಬೆಟ್ಟದ ಮುನೇಶ್ವರ ದೇವಸ್ಥಾನಕ್ಕೆ ತೆರಳಿ ಸ್ವಗ್ರಾಮ ಅಗಲಗುರ್ಕಿಗೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ಈ ವೇಳೆ ಕಾರಿನಲ್ಲಿದ್ದ ದೀಪಾ ಅವರ ತಾಯಿಗೆ ಕಾಲು ಮುರಿದಿದ್ದು, ಮೃತ ದೀಪಾ ಅವರ ಬಾವನ ಮಕ್ಕಳಾದ ಪವನ್ ಹಾಗೂ ಸಂಗೀತ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ.
ಈ ಕುರಿತು ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv