ಚಿಕ್ಕಬಳ್ಳಾಪುರ: ಪ್ರಿಯಕರ ಫೋನ್ ಕರೆ ರಿಸೀವ್ ಮಾಡಲಿಲ್ಲ ಅಂತ ಮನನೊಂದ ಯುವತಿಯೊರ್ವಳು ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಕಂದವಾರ ಗ್ರಾಮದಲ್ಲಿ ನಡೆದಿದೆ.
ಸ್ವಾತಿ(22) ಮೃತ ಯುವತಿ. ತನ್ನ ತಂದೆಯ ಜೊತೆ ಕೆಲಸ ಮಾಡುತ್ತಿದ್ದ ನವೀನ್ ಎಂಬಾತನನ್ನ ಸ್ವಾತಿ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಆದ್ರೆ ಕಳೆದ 4, 5 ದಿನಗಳಿಂದ ಯುವಕ ಫೋನ್ ಕರೆಗೆ ಸ್ಪಂದಿಸುತ್ತಿರಲಿಲ್ಲ. ಇದರಿಂದ ಯುವತಿ ಬಹಳಷ್ಟು ನೊಂದಿದ್ದಳು. ಅಲ್ಲದೆ ತನ್ನ ಪ್ರೀತಿ ವೈಫಲ್ಯವಾಯಿತು ಎಂದು ಮನನೊಂದು ಸ್ವಾತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಂದವಾರ ಗ್ರಾಮದಲ್ಲಿರುವ ತನ್ನ ಮನೆಯ ಕೊಠಡಿಯೊಂದರಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಯುವತಿ ಸ್ವಾತಿ ಶುಕ್ರವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಮೃತ ಯುವತಿ ತಂದೆ ನವೀನ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಸದ್ಯ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv