– ತಬ್ಬಲಿಯಾಯ್ತು 5 ತಿಂಗಳ ಗಂಡು ಮಗು
ಕಲಬುರಗಿ: ಪತಿಯ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ತಾಲೂಕಿನ ಉದನೂರು ಗ್ರಾಮದಲ್ಲಿ ನಡೆದಿದೆ.
25 ವರ್ಷದ ಕಾವ್ಯ ನೇಣಿಗೆ ಶರಣಾದ ಗೃಹಿಣಿ. ಈಕೆಯನ್ನು ಅಗ್ರಿಕಲ್ಚರ್ ಫಿಲ್ಡ್ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಬಸವರಾಜ್ ಜೊತೆ ಕಳೆದ ಒಂದೂವರೆ ವರ್ಷದ ಹಿಂದೆ 50 ಸಾವಿರ ಹಣ, 50 ಗ್ರಾಂ ಚಿನ್ನವನ್ನ ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ಅಲ್ಲದೇ ಕಳೆದ ಐದು ತಿಂಗಳ ಹಿಂದೆಯಷ್ಟೇ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿ, ಮೂರು ದಿನಗಳ ಹಿಂದೆ ಗಂಡನ ಮನೆಗೆ ಹೋಗಿದ್ದಳು.
ಮಗುವಿನ ಮುಖ ನೋಡಿ ಸಹ ಅವಳನ್ನು ಚೆನ್ನಾಗಿ ನೋಡಿಕೊಳ್ಳದ ಪತಿ ಬಸವರಾಜ್ ಮತ್ತು ಆಕೆಯ ಮನೆಯವರು, ತವರು ಮನೆಯಿಂದ ಎರಡು ಲಕ್ಷ ರೂಪಾಯಿ ತಗೊಂಡು ಬಾ ಅಂತಾ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದು ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ಪ್ರಕರಣವನ್ನು ದಾಖಲಿಸಿಕೊಂಡಿರುವ ಗ್ರಾಮೀಣ ಠಾಣೆ ಪೊಲೀಸರು ಪತಿ ಬಸವರಾಜ್ ನನ್ನು ಬಂಧಿಸಿದ್ದಾರೆ. ಅಲ್ಲದೇ ಒಂಬತ್ತು ಜನರ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv