ಲಾಕ್‍ಡೌನ್ ಎಫೆಕ್ಟ್: ಊಟಕ್ಕಾಗಿ ತಹಶೀಲ್ದಾರ್ ಕಚೇರಿಗೆ ನುಗ್ಗಿದ ಮಹಿಳೆಯರು

Public TV
1 Min Read
RCR 14

ರಾಯಚೂರು: ಐದು ದಿನಗಳಿಂದ ಊಟವಿಲ್ಲದೆ ಪರದಾಡಿದ ಬೀದಿಬದಿಯ ಅಲೆಮಾರಿ ವ್ಯಾಪಾರಿಗಳು ಊಟಕ್ಕಾಗಿ ತಹಶೀಲ್ದಾರ್ ಕಚೇರಿಗೆ ನುಗ್ಗಿರುವ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ.

ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿರುವುದರಿಂದ ಹೊಟ್ಟೆಪಾಡಿಗೆ ದುಡಿಯಲು ಬಂದ ಅಲೆಮಾರಿಗಳಿಗೆ ಕೆಲಸವಿಲ್ಲದೆ ಊಟವೂ ಇಲ್ಲದಂತಾಗಿದೆ.

RCR 1 2 1

ಊಟ ನೀಡುವಂತೆ ಕೇಳಿಕೊಂಡು ತಹಶೀಲ್ದಾರ್ ಕಚೇರಿಗೆ ಮಹಿಳೆಯರು ನುಗ್ಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಐದಾರು ದಿನಗಳಿಂದ ವ್ಯಾಪಾರವೇ ಇಲ್ಲದಾಗಿ ಊಟವೂ ಸಿಕ್ಕಿಲ್ಲ. ದೆಹಲಿಯಿಂದ ವ್ಯಾಪಾರಕ್ಕಾಗಿ ಸಿಂಧನೂರಿಗೆ ಆಗಮಿಸಿದ 10 ಕುಟುಂಬಗಳು ಕಳೆದ 5 ದಿನಗಳಿಂದ ಊಟ ಇಲ್ಲದೇ ಪರದಾಡಿವೆ.

RCR 1 3 1

ಹಸಿವು ತಾಳಲಾರದೆ ಸಿಂಧನೂರು ತಹಶೀಲ್ದಾರ್ ಕಛೇರಿಗೆ ನುಗ್ಗಿ ದಿನಸಿ ಅಥವಾ ಊಟದ ವ್ಯವಸ್ಥೆಗೆ ಒತ್ತಾಯಿಸಿದ್ದಾರೆ. ಊಟದ ವ್ಯವಸ್ಥೆ ಮಾಡುವವರೆಗೆ ಕಚೇರಿ ಬಿಟ್ಟು ಕದಲುವುದಿಲ್ಲ ಅಂತ ಮಹಿಳೆಯರು ಪಟ್ಟು ಹಿಡಿದಿದ್ದಾರೆ. ಕೊನೆಗೆ ಸಿಂಧನೂರು ತಹಶೀಲ್ದಾರ್ ಮಂಜುನಾಥ್ 50 ಕೆ.ಜಿ ಅಕ್ಕಿ ನೀಡಿದ್ದು ಊಟದ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ.

RCR 1 1 1

Share This Article
Leave a Comment

Leave a Reply

Your email address will not be published. Required fields are marked *