Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಬ್ ಇನ್ಸ್‌ಪೆಕ್ಟರ್ ಕೆಲಸದ ಆಮಿಷ – ಪ್ರೀತಿಸುವಂತೆ ಬ್ಲ್ಯಾಕ್ ಮೇಲ್, ಯುವತಿಗೆ 5 ಲಕ್ಷ ರೂ. ವಂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಬ್ ಇನ್ಸ್‌ಪೆಕ್ಟರ್ ಕೆಲಸದ ಆಮಿಷ – ಪ್ರೀತಿಸುವಂತೆ ಬ್ಲ್ಯಾಕ್ ಮೇಲ್, ಯುವತಿಗೆ 5 ಲಕ್ಷ ರೂ. ವಂಚನೆ

Bengaluru City

ಸಬ್ ಇನ್ಸ್‌ಪೆಕ್ಟರ್ ಕೆಲಸದ ಆಮಿಷ – ಪ್ರೀತಿಸುವಂತೆ ಬ್ಲ್ಯಾಕ್ ಮೇಲ್, ಯುವತಿಗೆ 5 ಲಕ್ಷ ರೂ. ವಂಚನೆ

Public TV
Last updated: November 6, 2019 1:51 pm
Public TV
Share
2 Min Read
bagalgunte car 2
SHARE

ಬೆಂಗಳೂರು: ಸಬ್ ಇನ್ಸ್‌ಪೆಕ್ಟರ್ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಗೆ 5 ಲಕ್ಷ ರೂ. ವಂಚಿಸಿರುವ ಘಟನೆ ನಗರದ ಬಗಲಗುಂಟೆಯಲ್ಲಿ ನಡೆದಿದೆ.

ಒಟ್ಟು ಎಂಟು ಆರೋಪಿಗಳು ಈ ಕೃತ್ಯ ಎಸಗಿದ್ದು, ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೇವಿ ಪ್ರಸಾದ್ ಸಾಹೋ, ಮೋಹನ್, ಮೋಹನ್ ತಾಯಿ ರತ್ನಮ್ಮ, ತಂದೆ ರತ್ನಾಕರ ಹೆಗಡೆ, ವಿಜಯಾ ಕರ್ನಾಟಕ ಸಂಘದ ಸತೀಶ್ ಮತ್ತು ನಂಜಪ್ಪ, ನಾರಾಯಣ್ ದಾಸ್ ಜಾಜೂ, ಎಂ.ರಂಗಪ್ಪ ಯುವತಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದ್ದಾರೆ.

bagalgunte 1

ಆರೋಪಿ ದೇವಿಪ್ರಸಾದ್ 5 ಲಕ್ಷ ರೂ. ಹಣ ಪಡೆದು, ಯುವತಿಗೆ ವಂಚಿಸಿದ್ದಾನೆ. ಪ್ರೀತಿಯ ನೆಪದಲ್ಲಿ ಯುವತಿಗೆ ಹತ್ತಿರವಾಗಿದ್ದ ದೇವಿಪ್ರಸಾದ್. ಅದೇ ಸಲಿಗೆಯಲ್ಲಿ ಯುವತಿಗೆ ಪಿಎಸ್‌ಐ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದಿದ್ದ. ಹಣ ಮರಳಿ ಹಣ ಕೇಳಿದ್ದಕ್ಕೆ ಅಶ್ಲೀಲ ಫೋಟೋ ಫೇಸ್‌ಬುಕ್‌ಗೆ ಹಾಕುತ್ತೇನೆ ಎಂದು ಬೆದರಿಕೆ ಒಡ್ಡಿದ್ದ.

ಪ್ರಕರಣದ ವಿವರ
ಯುವತಿ ಗಂಗಾ(ಹೆಸರು ಬದಲಾಯಿಸಲಾಗಿದೆ) 2016ರಲ್ಲಿ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿದ್ದರು. ಎ1 ಆರೋಪಿ ದೇವಿ ಪ್ರಸಾದ್ ಸಾಹೋ ಎ7 ಆರೋಪಿ ನಾರಾಯಣ ದಾಸ್ ಜಾಜೂನನ್ನು ಗಂಗಾಗೆ ಪರಿಚಯಿಸಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದಾನೆ. ಇದಕ್ಕಾಗಿ ಮೊದಲ ಹಂತದಲ್ಲಿ ಯುವತಿಯಿಂದ 3.50 ಲಕ್ಷ ರೂ. ಹಾಗೂ ಚಿನ್ನಾಭರಣ, ಲ್ಯಾಪ್‌ಟಾಪ್ ಪಡೆದಿದ್ದಾನೆ. ನಂತರ ಪ್ರೀತಿಸುವಂತೆ ಯುವತಿಗೆ ಕಿರುಕುಳ ನೀಡಿದ್ದಾರೆ.

Police Jeep

ಇದರಿಂದ ಬೇಸತ್ತ ಗಂಗಾ ದೇವಿ ಪ್ರಸಾದ್‌ಗೆ ಪರಿಚಿತನಾದ ಎ2 ಆರೋಪಿ ಮೋಹನ್‌ನನ್ನು ಸಂಪರ್ಕಿಸಿ ಹಣ ವಾಪಸ್ ಕೊಡಿಸುವಂತೆ ಮನವಿ ಮಾಡಿದ್ದಾರೆ. ಆರೋಪಿ ಮೋಹನ್, ನಾರಾಯಣ ದಾಸ್ ಜೊತೆ ಮಾತನಾಡಿ ಕೆಲಸ ಕೊಡಿಸುವ ಕುರಿತು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾನೆ. ಸೆ.4ರಂದು ಪ್ರಮುಖ ಆರೋಪಿ ದೇವಿ ಪ್ರಸಾದ್ ಗಂಗಾಳನ್ನು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಕರೆಸಿ ಕೈ ಹಿಡಿದು ಎಳೆದಾಡಿ ಅವಮಾನಿಸಿದ್ದಾನೆ. ಅಲ್ಲದೆ ಸಂತ್ರಸ್ತೆ ಹೆಸರಲ್ಲಿ ಫೇಸ್‌ಬುಕ್ ಖಾತೆ ತೆರೆದು ತನ್ನೊಂದಿಗೆ ಗಂಗಾ ಇದ್ದ ಫೋಟೋಗಳನ್ನು ಗಂಡನ ಸಂಬಂಧಿಕರ ಫೇಸ್‌ಬುಕ್ ಖಾತೆಗೆ ಕಳುಹಿಸಿದ್ದಾನೆ.

ಈ ಫೋಟೋಗಳನ್ನು ಫೇಸ್‌ಬುಕ್‌ನಿಂದ ತೆಗೆಯಲು 5 ಲಕ್ಷ ರೂ. ನೀಡುವಂತೆ ಎ2 ಆರೋಪಿ ಮತ್ತೆ ಬೇಡಿಕೆ ಇಟ್ಟಿದ್ದಾನೆ. ಈ ಬಗ್ಗೆ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿದ್ದಾರೆ.

ಈ ವೇಳೆ ಎ1 ಆರೋಪಿ ದೇವಿ ಪ್ರಸಾದ್ ಗಂಗಾಳನ್ನು ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮದುವೆಯಾಗಿದ್ದೇನೆ. ಈ ಕುರಿತು ಮದುವೆ ನೋಂದಣಿ ಸಹ ಆಗಿದೆ ಎಂದು ತಿಳಿಸಿದ್ದ. ಈ ಕುರಿತು ನಕಲಿ ಮದುವೆ ಪತ್ರಗಳನ್ನು ಸಹ ಸೃಷ್ಟಿಸಿದ್ದ.

bagalgunte

ಎ7 ಆರೋಪಿ ನಾರಾಯಣ ದಾಸ್‌ಗೆ ಸಂತ್ರಸ್ತೆ 2.50 ಲಕ್ಷ ರೂ.ಹಣ ನೀಡದ್ದಕ್ಕೆ ಇಬ್ಬರೂ ಇರುವ ಫೋಟೋಗಳನ್ನು ಮತ್ತೆ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದಾನೆ. ಅಲ್ಲದೆ ವಾಟ್ಸಪ್ ಮೂಲಕ ಅಶ್ಲೀಲ ಚಿತ್ರಗಳನ್ನು ಕಳುಹಿಸಿ ಅವಮಾನಿಸಿದ್ದಾನೆ. ಎ2 ಆರೋಪಿ ಮೋಹನ್ ಹಾಗೂ ಎ3 ಆರೋಪಿ ರತ್ನಮ್ಮ ಸಂತ್ರಸ್ತೆಯಿಂದ ಬಲವಂತವಾಗಿ 1.50 ಲಕ್ಷ ರೂ.ಗಳನ್ನು ಪಡೆದಿದ್ದಾರೆ. ಸಮಸ್ಯೆ ಬಗೆಹರಿಸುತ್ತೇವೆ ಎಂದು ಮತ್ತೆ 2.50 ರೂ.ಗಳನ್ನು ಪಡೆದಿದ್ದಾರೆ. ಇಷ್ಟು ಹಣ ಪಡೆದರೂ ಸಹ ಮತ್ತೆ 2.50 ಲಕ್ಷ ರೂ. ನೀಡುವಂತೆ ಒತ್ತಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ವಿವರಿಸಿದ್ದಾಳೆ.

TAGGED:bagalaguntepolicePublic TVSub inspectoryouthಪಬ್ಲಿಕ್ ಟಿವಿಪೊಲೀಸರುಬಗಲಗುಂಟೆಯುವತಿಸಬ್ ಇನ್ಸ್‍ಪೆಕ್ಟರ್
Share This Article
Facebook Whatsapp Whatsapp Telegram

Cinema news

rajath Chaitra
ಕಂಟೆಸ್ಟೆಂಟ್‌ಗಳಲ್ಲ.. ಅತಿಥಿಗಳು – ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ, ರಜತ್
Cinema Latest Sandalwood Top Stories
calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
KGF
7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Cinema Latest Sandalwood Top Stories
Kiara Adwani
ಯಶ್ ನಾಯಕಿ ಕಿಯಾರಾ ಫಸ್ಟ್ ಲುಕ್.. ಅಬ್ಬಬ್ಬಾ ಬೆಂಕಿ !
Cinema Latest Sandalwood Top Stories

You Might Also Like

Siddaramaiah 4
Bengaluru City

ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ

Public TV
By Public TV
52 minutes ago
ISRO 2
Latest

ಮೊಬೈಲ್‌ಗೆ ನೇರ ಇಂಟರ್‌ನೆಟ್ ಸೌಲಭ್ಯ – ಮತ್ತೊಂದು ಪರಾಕ್ರಮಕ್ಕೆ ಸಜ್ಜಾದ ಇಸ್ರೋ

Public TV
By Public TV
2 hours ago
DKSHI HDK
Hassan

ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಹೆಚ್‌ಡಿಕೆ

Public TV
By Public TV
3 hours ago
Draupadi Murmu
Latest

ವಿಕಸಿತ ಭಾರತ ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

Public TV
By Public TV
3 hours ago
Namma Metro Greenline
Bengaluru City

ಮಾದಾವರ-ತುಮಕೂರು ಮೆಟ್ರೋ; ಆರ್‌ವಿ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಲಿಮಿಟೆಡ್‌ಗೆ DPR ಹೊಣೆ

Public TV
By Public TV
3 hours ago
ozempic
Explainer

PublicTV Explainer: ಮಧುಮೇಹಿಗಳು, ಸ್ಥೂಲಕಾಯರಿಗೆ ಗುಡ್ ನ್ಯೂಸ್; ಭಾರತಕ್ಕೆ ಬಂತು ಓಝೆಂಪಿಕ್ – ಏನಿದು ಔಷಧಿ?

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?