ವಿಜಯಪುರ: ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದವನಿಗೆ ತಕ್ಕಶಾಸ್ತಿ ಮಾಡಿದ ಘಟನರ ವಿಜಯಪುರದಲ್ಲಿ ನಡೆದಿದೆ.
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ದೇವರಹುಲಗಬಾಳ ಗ್ರಾಮದ ಕುರಿ ಕಾಯುವ ಮಹಿಳೆಯೊಬ್ಬರಿಗೆ ಇದೇ ತಾಲೂಕಿನ ಕುಂಟೋಜಿ ಗ್ರಾಮದ ಭೀಮು ಬಿರಾದಾರ ಎಂಬಾತ ಕೈ ಮಾಡಿ ಕರೆದು ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ ಮಹಿಳೆ ಮನೆ ಮುಂದೆ ಹೋಗಿ ಮತ್ತೆ ಅಸಭ್ಯವಾಗಿ ವರ್ತಿಸಿದ್ದಾನೆ.
ಇದರಿಂದ ಕೆರಳಿದ ಅಕ್ಕಪಕ್ಕದ ಮನೆಯ ಮಹಿಳೆಯರು ದುರುಳನಿಗೆ ಚಪ್ಪಲಿಯಿಂದ ಹೊಡೆದು ತಕ್ಕ ಶಾಸ್ತಿ ಮಾಡಿದ್ದಾರೆ. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ದೂರು ದಾಖಲಾಗಿಲ್ಲ.