ಬೆಂಗಳೂರು: ಮಹಿಳಾ ಟೆಕ್ಕಿಯೊಬ್ಬರ ಉಸಿರುಗಟ್ಟಿಸಿ ಮುಖಕ್ಕೆ ಹೊಡೆದು ಕೊಲೆ ಮಾಡಿರುವ ಘಟನೆ ನಗರದ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೆಹಲಿ ಮೂಲದ ವಿಜಯಲಕ್ಷ್ಮಿ (23) ಕೊಲೆಯಾದ ಯುವತಿ. ಕಳೆದ ಒಂದು ವಾರದ ಹಿಂದಷ್ಟೇ ಈಕೆ ಇಮ್ಮಡಿಹಳ್ಳಿಯ ಸಮೀಪದ ಕೈ ತೋಟದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಪ್ರಿಯಕರನ ಜೊತೆಯಲ್ಲಿ ಬಂದು ನೆಲೆಸಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಎರಡು ಮೂರು ದಿನಗಳ ಹಿಂದೆ ಟೆಕ್ಕಿ ಕೊಲೆಯಾಗಿದೆ. ಮನೆಯ ಬಳಿ ಯಾರು ಕಾಣಿಸಿಕೊಳ್ಳದ ಕಾರಣ ಸ್ಥಳೀಯರು ಅನುಮಾನಗೊಂಡು ಪರಿಶೀಲನೆ ನಡೆಸಿದ ವೇಳೆ ಕೊಲೆಯಾಗಿರುವ ಸಂಗತಿ ಬೆಳಕಿಗೆ ಬಂದಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸದ್ಯ ಕೊಲೆಯಾದ ವಿಜಯಲಕ್ಷ್ಮಿ ಪ್ರಿಯಕರ ನಾಪತ್ತೆಯಾಗಿದ್ದು, ಆತನೇ ಕೊಲೆ ಮಾಡಿ ಪರಾರಿಯಾಗಿರುವ ಕುರಿತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ವೈಟ್ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ನಾಪತ್ತೆಯಾಗಿರುವ ಟೆಕ್ಕಿ ಹುಡುಕಾಟ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv