ಕರ್ತವ್ಯ ಲೋಪ, ಚಿಕ್ಕಮಗಳೂರು ಡಿಎಚ್‍ಓ ಅಮಾನತು

Public TV
1 Min Read
ckm officer

ಚಿಕ್ಕಮಗಳೂರು: ಕರ್ತವ್ಯ ಲೋಪದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಅಧಿಕಾರಿಯನ್ನು ಅಮಾನತುಗೊಳಿಸಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಆದೇಶ ಹೊರಡಿಸಿದ್ದಾರೆ.

ಡಾ.ಪ್ರಭು ಅಮಾನತುಗೊಂಡ ಅಧಿಕಾರಿ. ಚಿಕ್ಕಮಗಳೂರಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಸರ್ಕಾರದ ಆದೇಶ ಅನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಬೇಕಿತ್ತು. ಆದರೆ ಸರ್ಕಾರದ ಆದೇಶ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿರುವ ಬಗ್ಗೆ ಸಾರ್ವಜನಿಕರಿಂದ ದೂರು ದಾಖಲಾಗಿತ್ತು.

ಈ ಹಿನ್ನೆಲೆ ಕಡತಗಳು ಮತ್ತು ದಾಖಲಾತಿಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾ ಪಂಚಾಯಿತಿಯ ಮುಖ್ಯ ಲೆಕ್ಕಾಧಿಕಾರಿಗಳಿಗೆ ಸೂಚಿಸಲಾಗಿತ್ತು. ತನಿಖೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಮಾರ್ಗಸೂಚಿಗೆ ಅನುಗುಣವಾಗಿ ಕ್ರಮ ವಹಿಸದಿರುವುದು ಕಂಡುಬಂದಿದೆ. ಈ ಹಿನ್ನೆಲೆ ಮೇಲಾಧಿಕಾರಿಗಳ ಸೂಚನೆಯಂತೆ ಕೆಲಸ ಮಾಡದೆ, ದೈನಂದಿನ ಕಾರ್ಯನಿರ್ವಹಣೆ ಮತ್ತು ಕಡತ ಮಂಡನೆಯಲ್ಲಿ ಸ್ವತಃ ಲಿಖಿತವಾಗಿ ಅಭಿಪ್ರಾಯ ಸೂಚಿಸದೆ ಸರ್ಕಾರಿ ಸೇವೆಯಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ಡಾ.ಪ್ರಭು ಆಮಾನತುಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *