Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಿಶ್ವ ಸಾಂಸ್ಕೃತಿಕ ಉತ್ಸವ; ಉಕ್ರೇನ್‌ ಶಾಂತಿಗಾಗಿ ಪ್ರಾರ್ಥಿಸಿದ 180 ದೇಶಗಳ ಜನ

Public TV
Last updated: October 2, 2023 1:46 am
Public TV
Share
4 Min Read
Hundreds Of Thousands Of Meditating Under Gurudev s Guidance At The 4th WCF
SHARE

– ಉತ್ಸವದಲ್ಲಿ ಯೋಗ ಕಾರ್ಯಕ್ರಮ ನಡೆಸಿಕೊಟ್ಟ ಶ್ರೀ ಶ್ರೀ ರವಿಶಂಕರ್ ಗುರೂಜಿ

ಬೆಂಗಳೂರು: ಅಮೆರಿಕದ ವಾಷಿಂಗ್ಟನ್‌ (Washington DC) ಡಿಸಿಯ ನ್ಯಾಷನಲ್‌ ಮಾಲ್‌ನಲ್ಲಿ ಆಯೋಜಿಸಿರುವ ‘ವಿಶ್ವ ಸಾಂಸ್ಕೃತಿಕ ಉತ್ಸವ’ (World Culture Festival) 2ನೇ ದಿನವೂ ಅದ್ಧೂರಿಯಾಗಿ ಜರುಗಿತು. ಉತ್ಸವಕ್ಕೆ 180 ದೇಶಗಳಿಂದ ಆಗಮಿಸಿದ್ದ ಜನರು, ಉಕ್ರೇನ್‌ನಲ್ಲಿ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದರು.

Performers From Bolivia

ಉತ್ಸವದಲ್ಲಿ ಎರಡನೆಯ ದಿನವು ಕೂಡ ನೂರಾರು ಬಾವುಟಗಳು ಹಾರಾಡಿದವು. ಮತ್ತೊಮ್ಮೆ ಏಕತೆಯ ಭಾವವು ಎಲ್ಲೆಡೆ ರಾರಾಜಿಸಿತು. 180 ದೇಶಗಳಿಂದ ಬಂದಿದ್ದ ಜನರು ಒಬ್ಬರನ್ನೊಬ್ಬರು ಕಲೆತು, ನೃತ್ಯ, ಸಂಗೀತ ಮತ್ತು ಆಹಾರದೊಡನೆ ಜಗತ್ತಿನ ವಿವಿಧ ಸಂಸ್ಕೃತಿಗಳನ್ನು ಸಂಭ್ರಮಿಸಿದರು.

Ex President Of India Ram Nath Kovind Felicitated On The Stage By Gurudev For His Birthday

ಬೃಹತ್ ಪ್ರಮಾಣದಲ್ಲಿ ನಡೆದ ಈ ಉತ್ಸವವು ವಿಶ್ವವನ್ನು ಒಗ್ಗೂಡಿಸಲು ಹೊರಟಿರುವ ಭಾರತದ ಸಂಕಲ್ಪ ಶಕ್ತಿಯನ್ನು ಪ್ರತಿಬಿಂಬಿಸಿತು. ವಾಷಿಂಗ್ಟನ್ ಡಿಸಿ ನ್ಯಾಷನಲ್ ಮಾಲಿನ ಐತಿಹಾಸಿಕ ಲಿಂಕನ್ ಸ್ಮಾರಕದ ಎದುರು ಸಾವಿರಾರು ಜನ ತಮ್ಮ ತಮ್ಮ ಮ್ಯಾಟ್ ಹಾಸಿ ಯೋಗ ಮಾಡುವುದರೊಂದಿಗೆ 2ನೇ ದಿನದ ಉತ್ಸವಕ್ಕೆ ಚಾಲನೆ ಕೊಟ್ಟರು. ಅಲ್ಲಿ ನೆರೆದಿದ್ದ ಎಲ್ಲರಿಗೂ ಗುರುದೇವ ಶ್ರೀ ಶ್ರೀ ರವಿಶಂಕರ್ ಗುರೂಜಿ (Ravishankar Guruji) ಅವರು ಒಂದು ಅನುಪಮವಾದ ಉಸಿರಾಟ, ಯೋಗ ಮತ್ತು ಧ್ಯಾನದ ಪ್ರಕ್ರಿಯೆಗಳನ್ನು ಹೇಳಿಕೊಟ್ಟರು. ಸಂಜೆಯ ವೇಳೆಗೆ ಮನಸೂರೆಗೊಳ್ಳುವಂತಹ ಪ್ರದರ್ಶನಗಳು ಜರುಗಿದವು. ಇದನ್ನೂ ಓದಿ: ನಾವೆಲ್ಲರೂ ವಿಶ್ವ ಕುಟುಂಬಕ್ಕೆ ಸೇರಿದವರು: ಶ್ರೀ ಶ್ರೀ ರವಿಶಂಕರ್‌ ಗುರೂಜಿ

Beats Of Brazil

Andre Hahn Member Of Parliament Germany Addressing At The 4th Edition Of WCF

ಗಣ್ಯರ ಸ್ಫೂರ್ತಿದಾಯಕ ಭಾಷಣಗಳು ಮನುಷ್ಯರ ಬಾಂಧವ್ಯಗಳನ್ನು ಇನ್ನಷ್ಟು ಬೆಸೆಯುವಂತಿತ್ತು. ಭಾರತದ ಮಾಜಿ ರಾಷ್ಟ್ರಪತಿಗಳಾದ ರಾಮ್‌ನಾಥ್ ಕೋವಿಂದ್ ಮಾತನಾಡಿ, ಪರ್ವತ ಶ್ರೇಣಿಗಳು, ಕರಾವಳಿ ಬಯಲು, ನದಿಯ ತೀರ, ಮರುಭೂಮಿ ಪ್ರದೇಶ ಹೀಗೆ ಪ್ರಪಂಚದ ಮೂಲೆ ಮೂಲೆಗಳಿಂದ ಬಂದು ಜನರು ಇಲ್ಲಿ ಸೇರಿದ್ದಾರೆ. ಗುರುದೇವರು ಇಲ್ಲಿ ಒಂದು ಪುಟ್ಟ ಪ್ರಪಂಚವನ್ನೇ ನಿರ್ಮಿಸಿದ್ದಾರೆ ಎಂದು ಬಣ್ಣಿಸಿದರು.

Dr. Vivek Murthy U.S. Surgeon General At The Art of Living s 4th WCF

Irish Step Dance

ಅನೇಕ ಕಲಾರೂಪಗಳ ಪ್ರದರ್ಶನಗಳು ನಡೆದವು. ಅವುಗಳಲ್ಲಿ ಪಾರಂಪರಿಕ ಉಕ್ರೇನ್‌ನ ಹಾಡಿನ ಪ್ರದರ್ಶನ ಕೂಡ ಒಂದು. ಇದನ್ನು ಉಕ್ರೇನ್ ಖ್ಯಾತ ಸಂಗೀತಗಾರರಾದ ಒಲೇನ ಅಸ್ತಶೇವ‌ ಅವರು ನಡೆಸಿಕೊಟ್ಟರು. ಯುದ್ಧದ ಕಾರಣದಿಂದಾಗಿ ಇವರು ತಮ್ಮ ಮಾತೃಭೂಮಿಯನ್ನು ತೊರೆದಿದ್ದರು. ಮನಕುಲಕುವ ಈ ಹಾಡಿನ ಪ್ರದರ್ಶನದ ನಂತರ ಜನರೆಲ್ಲರೂ ಸೇರಿ ಉಕ್ರೇನ್ ಶಾಂತಿಗಾಗಿ ಗುರುದೇವರ ಸಮ್ಮುಖದಲ್ಲಿ ಪ್ರಾರ್ಥಿಸಿದರು. ಇದನ್ನೂ ಓದಿ: ಬೆಂಗಳೂರಿನ BSF ಯೋಧರಿಂದ ಸ್ವಚ್ಛತಾ ಅಭಿಯಾನ

Mystical Afghan Performance

Performers From Pakistan At The 4th WCF Stage

ಎಲ್ಲರನ್ನೂ ಎಚ್ಚರಿಸುವಂತೆ ಬಿರುಸಿನ ಭಾಷಣ ಮಾಡಿದ ರೆವರೆಂಡ್ ಜೆರಾಲ್ಡ್ ದುರ್ಲೆ, ಆರ್ಟ್ ಆಫ್ ಲಿವಿಂಗ್‌ನ ಹೆಸರನ್ನು ಆರ್ಟ್ ಆಫ್ ಪ್ರೂಫ್ ಎಂದು ಬದಲಿಸಬೇಕು. ಏಕೆಂದರೆ ನಾವು ಎಲ್ಲರನ್ನೂ ಪ್ರೀತಿಸಬಹುದು. ನಾವು ಎಲ್ಲರೊಂದಿಗೆ ಹಂಚಿಕೊಳ್ಳಬಹುದು ಎಂದು ಗುರುದೇವರು ಪ್ರೂವ್ ಮಾಡಿದ್ದಾರೆ ಎಂದರು.

Rev. Dr. Gerald Durley At The Art of Living s 4th WCF

Songs Smiles A Celebration Of The Chinese Culture

ಅಮೆರಿಕದ ವೆಂಚರ್ ಕ್ಯಾಪಿಟಲ್ ಹೂಡಿಕೆದಾರರಾದ ಟಿಮ್ ಡ್ರೇಪರ್ ಮಾತನಾಡಿ, ಅಮೆರಿಕನ್ನರಾದ ನಾವು ಇತರ ಜನರನ್ನು ಅನ್ಯಲೋಕದವರಂತೆ ಕಂಡಿದ್ದೇವೆ. ಅದು ಒಳ್ಳೆಯ ಬೆಳವಣಿಗೆ ಆಗಿರಲಿಲ್ಲ. ಆದರೆ ಈಗ ಬದಲಾವಣೆ ಆರಂಭವಾಗಿದೆ. ಗುರುದೇವರ ನಾಯಕತ್ವದಲ್ಲಿ ಜನರನ್ನು ಒಂದಾಗಿ ತರುತ್ತಿದ್ದೇವೆ. ಈಗ ಭೂಮಿಯ ಮೇಲಿರುವ ಯಾರು ಕೂಡ ಏಲಿಯನ್ನರಲ್ಲ (ಅನ್ಯಗ್ರಹ ಜೀವಿಗಳು). ಆದರೆ ಈ ಭೂಮಿಯ ಮೇಲೆ ಯಾರಾದರೂ ಏಲಿಯನ್ನರು ಇದ್ದು, ನಿಮ್ಮ ನಾಯಕರ ಬಳಿಗೆ ಕರೆದೊಯ್ಯಿರಿ ಎಂದರೆ ನಾನು ಅವರನ್ನು ಗುರುದೇವ್ ಶ್ರೀ ಶ್ರೀ ರವಿಶಂಕರರ ಬಳಿಗೆ ಕರೆದೊಯ್ಯುತ್ತೇನೆ ಎಂದರು.

Sounds Of Pakistan

The Stage Is Set For The 2nd Day Of WCF

ಮಾರಿಷಿಯಸ್‌ನ ಅಧ್ಯಕ್ಷರಾದ ಪೃಥ್ವಿರಾಜ್‌ ಸಿಂಗ್ ರೂಪನ್, ಜಪಾನಿನ ಮಾಜಿ ಪ್ರಧಾನ ಮಂತ್ರಿ ದಿವಂಗತ ಶಿಂಜೊ ಅಬೆಯವರ ಪತ್ನಿ ಅಕೀ ಅಬೆ, ಯುಎಸ್‌ನ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ ಇನ್ನಿತರ ಗಣ್ಯರು ಎರಡನೇ ದಿನ ಉಪಸ್ಥಿತರಾಗಿದ್ದರು. ಇದನ್ನೂ ಓದಿ: BJP-JDS ಮೈತ್ರಿಗೆ ಜೆಡಿಎಸ್ ಶಾಸಕರಿಂದ ಸರ್ವಾನುಮತದ ಒಪ್ಪಿಗೆ

Vasudhaiva Kutumbakam One World Family Representation At The 2nd WCF

ಸಾಂಸ್ಕೃತಿಕ ಕಾರ್ಯಕ್ರಮ
ಎರಡನೆಯ ದಿನ ಸಾಂಸ್ಕೃತಿಕ ಮಹೋತ್ಸವದಲ್ಲಿ, 10,000 ಜನರಿಂದ ಗರ್ಭ ನೃತ್ಯ ನಡೆಯಿತು. ಅವರೊಡನೆ ಗ್ರಾಮಿ ಪ್ರಶಸ್ತಿ ವಿಜೇತರಾದ ಭಾರತೀಯ ಅಮೆರಿಕನ್ನರೂ ಆದ ಫಾಲು ಶಾ ಅವರು ಗಾಯನ ಮಾಡಿದರು. 200 ಜನರನ್ನೊಳಗೊಂಡ ಭಾಂಗ್ರ ನೃತ್ಯ, ಐರಿಶ್‌ನ ಸ್ಟೆಪ್ ನೃತ್ಯ, ಆಫ್ಗಾನಿನ ಸುಮಧುರ ಸಂಗೀತ, 1000 ಚೀನಿ ಅಮೆರಿಕನ್ನರಿಂದ ವೈಭವಯುತವಾದ ನೃತ್ಯ ಹಾಗೂ ಗಾಯನ ಜರುಗಿತು. ಇದರೊಡನೆ ಕುಂಗ್ ಫೂ ಪ್ರದರ್ಶನವೂ ನಡೆಯಿತು.

Vibe At The 2nd Day Of 4th Edition Of World Culture Festival

ಭವ್ಯವಾದ ಡ್ರಾಗನ್ ಮತ್ತು ಸಿಂಹಗಳು ಕಲಾತ್ಮಕ ಕಲ್ಪನೆಯನ್ನು ಜೀವಂತವಾಗಿಸಿದವು. ಇಂಡೊನೇಷಿಯಾ, ಬ್ರೆಜಿಲ್, ಬೊಲಿವಿಯ ಮತ್ತು ಲ್ಯಾಟಿನ್ ಅಮೆರಿಕದ ದೇಶಗಳು ಅವಿಸ್ಮರಣೀಯವಾದ ನೃತ್ಯಗಳನ್ನು ನಡೆಸಿದವು. ಖ್ಯಾತ ಕುರ್ಟಿಸ್ ಬ್ಲೋ ಅವರ ನೇತೃತ್ವದಲ್ಲಿ ಹಿಪ್ ಹಾಪ್ ಮತ್ತು ಬ್ರೇಕ್ ಡಾನ್ಸ್‌ನ ಪ್ರದರ್ಶನ ನಡೆಯಿತು. 1,200 ಹಾಡುಗಾರರ ಗಾಸ್ಪೆಲ್ ಕಾಯರ್, ಪಾಕಿಸ್ತಾನದ ಮನಮೋಹಕ ಪ್ರದರ್ಶನವು ನಡೆಯಿತು.

ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ ಮಾತನಾಡಿ, ಇಂದಿನ ವಿಶ್ವ ಸಾಂಸ್ಕೃತಿಕ ಉತ್ಸವದಂತಹ ಉತ್ಸವಗಳು ಬಹಳ ಮುಖ್ಯ. ನಾವೆಲ್ಲರೂ ಪರಸ್ಪರ ಹೊಂದಿರುವ ಸಂಬಂಧವು ಎಷ್ಟು ಅವಶ್ಯಕವಾದದ್ದು ಎಂಬುದನ್ನು ಇದು ತೋರಿಸುತ್ತದೆ. ಇಂದಿನ ದಿನಗಳಲ್ಲಿ ಏಕಾಂಗಿತನ ಹಾಗೂ ಪ್ರತ್ಯೇಕತೆಯು ಹೆಚ್ಚಾಗಿದೆ. ಎಲ್ಲರೂ ಒಂದಾಗಿರುವ ಸಂಬಂಧಗಳನ್ನು ನೆನಪಿಸಿಕೊಳ್ಳುವುದು ಅವಶ್ಯಕವಾಗಿದೆ. ಏಕಾಂಗಿತನ, ಪ್ರತ್ಯೇಕತೆಯಿಂದ ದೈಹಿಕ ಕಾಯಿಲೆ, ಹೃದ್ರೋಗಗಳು ಹೆಚ್ಚುತ್ತಿವೆ. ಇವು ನಮ್ಮ ಸಮುದಾಯಗಳ ಒಳಿತನ್ನೇ ನಾಶಮಾಡುತ್ತಿವೆ ಎಂದು ತಿಳಿಸಿದರು.

‌

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:americaravishankar gurujiUkraineWashington dcworld culture festival 2023ಅಮೆರಿಕಉಕ್ರೇನ್ವಾಷಿಂಗ್ಟನ್‌ ಡಿಸಿವಿಶ್ವ ಸಾಂಸ್ಕೃತಿಕ ಉತ್ಸವಶ್ರೀ ಶ್ರೀ ರವಿಶಂಕರ್‌ ಗುರೂಜಿ
Share This Article
Facebook Whatsapp Whatsapp Telegram

Cinema News

Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest
Sudeep
ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌
Bengaluru City Cinema Latest Main Post Sandalwood
Anirudh
ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ
Bengaluru City Cinema Districts Karnataka Latest Sandalwood Top Stories

You Might Also Like

Janardhana Poojary
Dakshina Kannada

ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ

Public TV
By Public TV
2 minutes ago
Modi 4
Districts

ಸುರಿವ ಮಳೆಯಲ್ಲೇ ಬೀಳ್ಕೊಡುಗೆ – ಕರ್ನಾಟಕದ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹೊರಟ ಮೋದಿ

Public TV
By Public TV
21 minutes ago
modi inaugurates bengaluru yellow line metro
Bengaluru City

ಮೆಟ್ರೋ ಕ್ರೆಡಿಟ್‌ ವಾರ್‌ – ಕೇಂದ್ರದ್ದೆಷ್ಟು? ರಾಜ್ಯದ್ದೆಷ್ಟು?

Public TV
By Public TV
27 minutes ago
Shivaganga Basavaraj
Davanagere

ಧರ್ಮಸ್ಥಳದ ಧರ್ಮಾಧಿಕಾರಿಗಳು ಸರ್ಕಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ: ಶಿವಗಂಗಾ ಬಸವರಾಜ್

Public TV
By Public TV
28 minutes ago
M. Lakshman
Districts

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ – ಎಂ.ಲಕ್ಷ್ಮಣ್‌ ಆರೋಪ

Public TV
By Public TV
43 minutes ago
Narenda modi siddaramaiah dk shivakumar 1
Bengaluru City

ಶಕ್ತಿ ಯೋಜನೆ ಉಲ್ಲೇಖಿಸಿ ಮೋದಿ ಸಿಡಿಸಿದ ಚಟಾಕಿಗೆ ನಕ್ಕಿದ ಸಿಎಂ, ಡಿಸಿಎಂ

Public TV
By Public TV
45 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?