ನವದೆಹಲಿ: ಕಾಲಿಗೆ ಗಾಯವಾಗಿ ಲಂಡನ್ನಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುತ್ತಿರುವ ಬೌಲರ್ ಶಾರ್ದೂಲ್ ಠಾಕೂರ್ ಕಾಲಿಗೆ ಬ್ಯಾಂಡೇಜ್ ಹಾಕಿಕೊಂಡು ಹೋಗಿ ಟೀಂ ಇಂಡಿಯಾಗೆ ಶುಭಾಶಯ ಹೇಳಿದ್ದಾರೆ.
ಐಪಿಎಲ್ 12 ಅವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಅಡಿದ ಶಾರ್ದೂಲ್ ಠಾಕೂರ್ ಅವರು ಬೌಲಿಂಗ್ ಮಾಡುವ ಸಮಯದಲ್ಲಿ ಬಲಗಾಲಿಗೆ ಪೆಟ್ಟು ಬಿದ್ದಿತ್ತು. ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಲಂಡನ್ನ ಕಾರ್ಡಿಫ್ ಹೋಗಿದ್ದರು.
ಈ ನಡುವೆ ಊರುಗೋಲು ಸಹಾಯದಿಂದಲೇ ಭಾರತ ತಂಡದ ಆಟಗಾರರು ಇರುವ ಹೋಟೆಲಿಗೆ ತೆರಳಿದ ಶಾರ್ದೂಲ್ ಠಾಕೂರ್ ಟೀಂ ಇಂಡಿಯಾದ ಎಲ್ಲಾ ಆಟಗಾರರನ್ನು ಭೇಟಿಯಾಗಿ ವಿಶ್ವಕಪ್ ಗೆದ್ದು ತರುವಂತೆ ಶುಭಾಶಯ ತಿಳಿಸಿ ಬಂದಿದ್ದಾರೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್ ಧೋನಿ ಅವರನ್ನು ಭೇಟಿಯಾಗಿ ಕೆಲ ಸಮಯ ಸಮಲೋಚನೆ ನಡೆಸಿದರು. ಈ ಸಮಯದಲ್ಲಿ ಭಾರತದ ಉಪನಾಯಕ ರೋಹಿತ್ ಶರ್ಮಾ ಅವರು ಶಾರ್ದೂಲ್ ಠಾಕೂರ್ ಅವರ ಅರೋಗ್ಯದ ಬಗ್ಗೆ ವಿಚಾರಿಸಿ ಲಂಡನ್ನಿನಲ್ಲೇ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದ್ದಾರೆ.
https://www.instagram.com/p/Bx7E1xoA6BL/?utm_source=ig_embed
ಗಾಯದ ಸಮಸ್ಯೆ ನಡುವೆಯೂ ನಮ್ಮನ್ನು ನೋಡಲು ಬಂದ ಶಾರ್ದುಲ್ ಠಾಕೂರ್ ಅವರು ಬೇಗ ಗುಣವಾಗಲಿ ಎಂದು ಟೀಂ ಇಂಡಿಯಾ ಆಟಗಾರರು ದೇವರಲ್ಲಿ ಕೇಳಿಕೊಂಡಿದ್ದಾರೆ.
2019ರ ವಿಶ್ವಕಪ್ ಟೂರ್ನಿ ಮೇ 30ಕ್ಕೆ ಅರಂಭವಾಗಲಿದ್ದು, ಆಡಿದ ಮೊದಲ ಅಭ್ಯಾಸ ಪಂದ್ಯದಲ್ಲೇ ನ್ಯೂಜಿಲ್ಯಾಂಡ್ ವಿರುದ್ಧ ಸೋಲು ಕಂಡ ಭಾರತ ಮುಂದಿನ ಅಭ್ಯಾಸ ಪಂದ್ಯವನ್ನು ಮೇ 28ಕ್ಕೆ ಬಾಂಗ್ಲಾದೇಶದ ವಿರುದ್ಧ ಆಡಲಿದೆ. ಜೂನ್ 6 ರಂದು ಲೀಗ್ ಹಂತದ ಮೊದಲ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ.