Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಟೀಂ ಇಂಡಿಯಾ ಎಡವಿದ್ದೆಲ್ಲಿ; ಇಲ್ಲಿದೆ 5 ಕಾರಣ..

Public TV
Last updated: November 19, 2023 11:30 pm
Public TV
Share
3 Min Read
rohit sharma 5
SHARE

ನವದೆಹಲಿ: ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆಲುವಿನ ಹಂಬಲದಲ್ಲಿ ಅಂತಿಮ ಹಂತದಲ್ಲಿ ಎಡವಿತು. ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಫೈನಲ್‌ನಲ್ಲಿ ಆಸ್ಟ್ರೇಲಿಯಾ ಆರು ವಿಕೆಟ್‌ಗಳ ಜಯ ಸಾಧಿಸಿತು. ಫೈನಲ್‌ನಲ್ಲಿ ಭಾರತದ ಸೋಲಿಗೆ ಕಾರಣವಾದ ಐದು ತಿರುವುಗಳೇನು ಎಂಬುದನ್ನು ನೋಡೋಣ.

ಮಿಂಚುವಲ್ಲಿ ವಿಫಲರಾದ ಗಿಲ್‌
ಭಾರತ ತಂಡದ ಕ್ಯಾಪ್ಟನ್‌ ರೋಹಿತ್‌ ಶರ್ಮಾ ಉತ್ತಮ ಆರಂಭ ನೀಡಿದ್ದರು. ಆದರೆ ಅವರಿಗೆ ಜೊತೆಯಾಗಿ ನಿಲ್ಲುವಲ್ಲಿ ಶುಭಮನ್‌ ಗಿಲ್‌ ಎಡವಿದರು. ಇದರಿಂದ ಭಾರತಕ್ಕೆ ಉತ್ತಮ ಆರಂಭ ಒದಗಿಸಲು ಸಾಧ್ಯವಾಗಲಿಲ್ಲ. ಕೇವಲ 4 ರನ್‌ ಗಳಿಸಿ ಕ್ಯಾಚ್‌ ನೀಡಿ ಗಿಲ್‌ ಪೆವಿಲಿಯನ್‌ ಸೇರಿದರು. ತಂತ್ರಗಾರಿಕೆ ಮೂಲಕ ಭಾರತದ ಬ್ಯಾಟರ್‌ಗಳು ಹೆಚ್ಚು ರನ್‌ ಹೊಡೆಯದಂತೆ ಕಟ್ಟಿಹಾಕುವಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳು ಯಶಸ್ವಿಯಾದರು.

sharma gill

ಮಧ್ಯಮ ಕ್ರಮಾಂಕದಲ್ಲಿ ನಿಧಾನಗತಿಯ ಆಟ
ಐದನೇ ಓವರ್‌ನಲ್ಲಿ ಶುಭಮನ್ ಗಿಲ್ ಔಟಾದ ನಂತರ, ರೋಹಿತ್ ಶರ್ಮಾ ಆಕ್ರಮಣಕಾರಿ ಸ್ಟ್ರೋಕ್‌ಗಳನ್ನು ಆಡುವುದನ್ನು ಮುಂದುವರೆಸಿದರು. 10 ನೇ ಓವರ್‌ನಲ್ಲಿ ಔಟಾಗುವ ಮೊದಲು 31 ಎಸೆತಗಳಲ್ಲಿ 47 ರನ್ ಗಳಿಸಿದರು. ಶರ್ಮಾ ಔಟಾದ ನಂತರ ಭಾರತ ತಂಡವು ಪ್ರಮುಖ ಆಟಗಾರರನ್ನು ಕಳೆದುಕೊಂಡಿತು. ಶ್ರೇಯಸ್ ಅಯ್ಯರ್ 4 ಗಳಿಸಿ ಔಟಾದರು. ನಂತರ ವಿರಾಟ್‌ ಕೊಹ್ಲಿ ಮತ್ತು ಕೆ.ಎಲ್‌.ರಾಹುಲ್‌ 67 ರನ್‌ಗಳ ಜೊತೆಯಾಟ ನೀಡಿದರು. ಈ ಜೋಡಿ ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ.

ಮಧ್ಯಮ ಕ್ರಮಾಂಕದಲ್ಲಿ ನಿಧಾನಗತಿಯಲ್ಲಿ ರನ್‌ ದಾಖಲಾಯಿತು. 11 ರಿಂದ 20 ಓವರ್‌ಗಳ ಹಂತದಲ್ಲಿ ಭಾರತ ಒಂದು ವಿಕೆಟ್ ನಷ್ಟಕ್ಕೆ ಕೇವಲ 35 ರನ್ ಗಳಿಸಲಷ್ಟೇ ಶಕ್ತವಾಯಿತು. 21 ರಿಂದ 30 ಓವರ್‌ಗಳ ಹಂತದಲ್ಲಿ ಭಾರತ ಒಂದು ವಿಕೆಟ್ ನಷ್ಟಕ್ಕೆ 37 ರನ್ ಅಷ್ಟೇ ಗಳಿಸಿತು. ಒಟ್ಟಾರೆ ಇಡೀ ಇನಿಂಗ್ಸ್‌ನಲ್ಲಿ ಭಾರತ ಕೇವಲ 13 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಗಳಿಸಿತು.

virat kohli 11

ಮಂಕಾದ ಸೂರ್ಯ
ಭಾರತದ ಬ್ಯಾಟ್ಸ್‌ಮನ್‌ಗಳು ಸ್ಕೋರ್ ಮಾಡಲು ಹೆಣಗಾಡಿದರು. ಒಂದು ಹಂತದಲ್ಲಿ 148/4 ಆಗಿತ್ತು. ವಿರಾಟ್ ಕೊಹ್ಲಿ ಕೇವಲ 63 ಎಸೆತಗಳಲ್ಲಿ 54 ರನ್ ಗಳಿಸಿ ನಿರ್ಗಮಿಸಿದರು. ಸೂರ್ಯಕುಮಾರ್ ಯಾದವ್ ಮಧ್ಯಮ ಕ್ರಮಾಂಕದಲ್ಲಿ ಕೆ.ಎಲ್.ರಾಹುಲ್ ಜೊತೆಗೂಡುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೂ, ಹಲವರಿಗೆ ಆಶ್ಚರ್ಯವಾಗುವಂತೆ ರವೀಂದ್ರ ಜಡೇಜಾ ಕ್ರೀಸ್ ಪಡೆದರು. ಆಲ್ ರೌಂಡರ್ ಭಾರತದ ರನ್ ವೇಗವನ್ನು ಹೆಚ್ಚಿಸುವ ನಿರೀಕ್ಷೆಯಿತ್ತು. ಆದರೆ ಜಡೇಜಾ 22 ಎಸೆತಗಳಲ್ಲಿ 9 ರನ್ ಗಳಿಸಿ ಪೆವಿಲಿಯನ್‌ ಸೇರಿದರು.

ಸೂರ್ಯಕುಮಾರ್ ಯಾದವ್ ಅವರನ್ನು ಬ್ಯಾಟಿಂಗ್ ಕ್ರಮಾಂಕದಲ್ಲಿ ಕಳುಹಿಸದೆ ಭಾರತವು ಅವಕಾಶವನ್ನು ಕಳೆದುಕೊಂಡಿದೆ. ಮುಂಬೈ ಬ್ಯಾಟರ್ ಮೊದಲು ಬಂದು ಅವರ ವಿಶಿಷ್ಟ ಶೈಲಿಯಲ್ಲಿ ಆಡಿದ್ದರೆ, ಭಾರತವು ಹೆಚ್ಚು ಅಸಾಧಾರಣ ಸ್ಕೋರ್ ಸಾಧಿಸಬಹುದಿತ್ತು.

suryakumar yadav 1

ಕೈಕೊಟ್ಟ ಬೌಲರ್‌ಗಳು
ಭಾರತ ತಂಡ ಫೈನಲ್‌ ಪ್ರವೇಶಿಸಲು ಬೌಲರ್‌ಗಳ ಪಾತ್ರ ಗಮನಾರ್ಹವಾಗಿತ್ತು. ಫೈನಲ್‌ ಪಂದ್ಯದಲ್ಲೂ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರ ಪೇಸ್ ಸಂಯೋಜನೆಯು ತಂಡಕ್ಕೆ ಆರಂಭಿಕ ಮುನ್ನಡೆ ಒದಗಿಸುವಲ್ಲಿ ಸಹಕಾರಿಯಾಗಬಹುದಿತ್ತು. ಆದರೆ, ನಿರ್ಣಾಯಕ ದಿನದಂದು ರೋಹಿತ್ ಶರ್ಮಾ ಅವರು ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರೊಂದಿಗೆ ಬೌಲಿಂಗ್ ತೆರೆಯಲು ನಿರ್ಧರಿಸಿದರು. ಆರಂಭಿಕ ಹಂತದಲ್ಲಿ ಇದು ಸಹಕಾರಿಯಾಗಿತ್ತು. 43 ರನ್‌ಗಳಿಗೆ ಭಾರತ 3 ವಿಕೆಟ್‌ ಕಬಳಿಸಿತ್ತು. ಆದರೆ ಮುಂದೆ ವಿಕೆಟ್‌ ಉರುಳಿಸಲು ಸಾಧ್ಯವಾಗಲಿಲ್ಲ. ಈ ಬದಲಾವಣೆಯಿಂದಾಗಿ ಸಿರಾಜ್‌ ಬೌಲಿಂಗ್‌ ಪರಿಣಾಮಕಾರಿಯಾಗಿ ಫಲಿಸಲಿಲ್ಲ. ಅಷ್ಟೇ ಅಲ್ಲದೇ ಸ್ಪಿನ್‌ ಬೌಲಿಂಗ್‌ ಸಹ ಸಹಕಾರಿಯಾಗಲಿಲ್ಲ.

india vs australia 1

ಎದುರಾಳಿ ಕಟ್ಟಹಾಕಲು ಎಡವಿದ ಟೀಂ ಇಂಡಿಯಾ
ಆರಂಭದಲ್ಲಿ ವೇಗವಾಗಿ ವಿಕೆಟ್‌ ಉರುಳಿಸಿದ ಭಾರತಕ್ಕೆ ಅನುಕೂಲಕರ ಪರಿಸ್ಥಿತಿಯನ್ನು ಬಳಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೆನ್ ಇನ್ ಬ್ಲೂ ಎದುರಾಳಿ ತಂಡದ ಮೇಲೆ ಒತ್ತಡ ಹೇರಲು ವಿಫಲವಾಯಿತು. ಟ್ರಾವಿಸ್ ಹೆಡ್ (137) ಮತ್ತು ಮಾರ್ನಸ್ ಲಬುಶನ್‌ (58) ನಾಲ್ಕನೇ ವಿಕೆಟ್‌ಗೆ 192 ರನ್‌ಗಳ ಜೊತೆಯಾಟದಲ್ಲಿ ಆಸ್ಟ್ರೇಲಿಯಾವನ್ನು ಅಪಾಯದಿಂದ ಪಾರು ಮಾಡಿದರು. ಐತಿಹಾಸಿಕ ಆರನೇ ವಿಶ್ವಕಪ್ ಪ್ರಶಸ್ತಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದರು. ಭಾರತ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದರೆ ಫೈನಲ್‌ ಫಲಿತಾಂಶ ಭಿನ್ನವಾಗಿರುತ್ತಿತ್ತು.

TAGGED:India-AustraliaODI Cricket World Cup FinalRohit Sharmavirat kohliಭಾರತ-ಆಸ್ಟ್ರೇಲಿಯಾರೋಹಿತ್ ಶರ್ಮಾವಿರಾಟ್ ಕೊಹ್ಲಿವಿಶ್ವಕಪ್‌ 2023
Share This Article
Facebook Whatsapp Whatsapp Telegram

Cinema Updates

kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
2 hours ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
3 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
7 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
7 hours ago

You Might Also Like

Uttar Pradesh Marriage
Crime

ಕೂಲರ್‌ಗಾಗಿ ಬೀಗರ ಮಧ್ಯೆ ಜಗಳ – ಕುರ್ಚಿ ಎಸೆದು ಅಟ್ಟಾಡಿಸಿದ ವಿಡಿಯೋ ವೈರಲ್

Public TV
By Public TV
6 minutes ago
Air Force Rescues 14 People Stranded In River On Assam Arunachal Pradesh Border
Latest

ಅಸ್ಸಾಂ | ಹಠಾತ್‌ ಆಗಿ ಹೆಚ್ಚಿದ ಪ್ರವಾಹ – ಸಂಕಷ್ಟದಲ್ಲಿ  ಸಿಲುಕಿದ್ದ 14 ಮಂದಿಯನ್ನು ರಕ್ಷಿಸಿದ ವಾಯುಪಡೆ

Public TV
By Public TV
6 minutes ago
Florida Teacher
Crime

ಕ್ಲಾಸ್‌ರೂಮ್‌ನಲ್ಲೇ ಅಪ್ರಾಪ್ತ ವಿದ್ಯಾರ್ಥಿ ಜೊತೆ ಸೆಕ್ಸ್‌ – ಶಿಕ್ಷಕಿ ಬಂಧನ

Public TV
By Public TV
12 minutes ago
Shehbaz Sharif
Latest

ನಾವು ಭಿಕ್ಷೆ ಪಾತ್ರೆ ಹಿಡಿದು ಬರುತ್ತೇವೆಂದು ಚೀನಾದಂಥ ಮಿತ್ರರಾಷ್ಟ್ರಗಳು ನಿರೀಕ್ಷಸಲ್ಲ: ಪಾಕ್‌ ಪ್ರಧಾನಿ

Public TV
By Public TV
34 minutes ago
IndiGo Flight Delhi Rain
Karnataka

ದೆಹಲಿ | ಲ್ಯಾಂಡಿಂಗ್‌ ವೇಳೆ ತೀವ್ರ ಪ್ರಕ್ಷುಬ್ಧತೆ – 38 ನಿಮಿಷ ಆಕಾಶದಲ್ಲೇ ಗಿರಕಿ ಹೊಡೆದು ಲ್ಯಾಂಡ್‌ ಆದ ಇಂಡಿಗೋ ಫ್ಲೈಟ್

Public TV
By Public TV
34 minutes ago
DK Shivakumar
Bengaluru City

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ

Public TV
By Public TV
43 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?