Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೀಂ ಇಂಡಿಯಾ ಎಡವಿದ್ದೆಲ್ಲಿ; ಇಲ್ಲಿದೆ 5 ಕಾರಣ..
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟೀಂ ಇಂಡಿಯಾ ಎಡವಿದ್ದೆಲ್ಲಿ; ಇಲ್ಲಿದೆ 5 ಕಾರಣ..

Cricket

ಟೀಂ ಇಂಡಿಯಾ ಎಡವಿದ್ದೆಲ್ಲಿ; ಇಲ್ಲಿದೆ 5 ಕಾರಣ..

Public TV
Last updated: November 19, 2023 11:30 pm
Public TV
Share
3 Min Read
rohit sharma 5
SHARE

ನವದೆಹಲಿ: ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆಲುವಿನ ಹಂಬಲದಲ್ಲಿ ಅಂತಿಮ ಹಂತದಲ್ಲಿ ಎಡವಿತು. ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಫೈನಲ್‌ನಲ್ಲಿ ಆಸ್ಟ್ರೇಲಿಯಾ ಆರು ವಿಕೆಟ್‌ಗಳ ಜಯ ಸಾಧಿಸಿತು. ಫೈನಲ್‌ನಲ್ಲಿ ಭಾರತದ ಸೋಲಿಗೆ ಕಾರಣವಾದ ಐದು ತಿರುವುಗಳೇನು ಎಂಬುದನ್ನು ನೋಡೋಣ.

ಮಿಂಚುವಲ್ಲಿ ವಿಫಲರಾದ ಗಿಲ್‌
ಭಾರತ ತಂಡದ ಕ್ಯಾಪ್ಟನ್‌ ರೋಹಿತ್‌ ಶರ್ಮಾ ಉತ್ತಮ ಆರಂಭ ನೀಡಿದ್ದರು. ಆದರೆ ಅವರಿಗೆ ಜೊತೆಯಾಗಿ ನಿಲ್ಲುವಲ್ಲಿ ಶುಭಮನ್‌ ಗಿಲ್‌ ಎಡವಿದರು. ಇದರಿಂದ ಭಾರತಕ್ಕೆ ಉತ್ತಮ ಆರಂಭ ಒದಗಿಸಲು ಸಾಧ್ಯವಾಗಲಿಲ್ಲ. ಕೇವಲ 4 ರನ್‌ ಗಳಿಸಿ ಕ್ಯಾಚ್‌ ನೀಡಿ ಗಿಲ್‌ ಪೆವಿಲಿಯನ್‌ ಸೇರಿದರು. ತಂತ್ರಗಾರಿಕೆ ಮೂಲಕ ಭಾರತದ ಬ್ಯಾಟರ್‌ಗಳು ಹೆಚ್ಚು ರನ್‌ ಹೊಡೆಯದಂತೆ ಕಟ್ಟಿಹಾಕುವಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳು ಯಶಸ್ವಿಯಾದರು.

sharma gill

ಮಧ್ಯಮ ಕ್ರಮಾಂಕದಲ್ಲಿ ನಿಧಾನಗತಿಯ ಆಟ
ಐದನೇ ಓವರ್‌ನಲ್ಲಿ ಶುಭಮನ್ ಗಿಲ್ ಔಟಾದ ನಂತರ, ರೋಹಿತ್ ಶರ್ಮಾ ಆಕ್ರಮಣಕಾರಿ ಸ್ಟ್ರೋಕ್‌ಗಳನ್ನು ಆಡುವುದನ್ನು ಮುಂದುವರೆಸಿದರು. 10 ನೇ ಓವರ್‌ನಲ್ಲಿ ಔಟಾಗುವ ಮೊದಲು 31 ಎಸೆತಗಳಲ್ಲಿ 47 ರನ್ ಗಳಿಸಿದರು. ಶರ್ಮಾ ಔಟಾದ ನಂತರ ಭಾರತ ತಂಡವು ಪ್ರಮುಖ ಆಟಗಾರರನ್ನು ಕಳೆದುಕೊಂಡಿತು. ಶ್ರೇಯಸ್ ಅಯ್ಯರ್ 4 ಗಳಿಸಿ ಔಟಾದರು. ನಂತರ ವಿರಾಟ್‌ ಕೊಹ್ಲಿ ಮತ್ತು ಕೆ.ಎಲ್‌.ರಾಹುಲ್‌ 67 ರನ್‌ಗಳ ಜೊತೆಯಾಟ ನೀಡಿದರು. ಈ ಜೋಡಿ ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ.

ಮಧ್ಯಮ ಕ್ರಮಾಂಕದಲ್ಲಿ ನಿಧಾನಗತಿಯಲ್ಲಿ ರನ್‌ ದಾಖಲಾಯಿತು. 11 ರಿಂದ 20 ಓವರ್‌ಗಳ ಹಂತದಲ್ಲಿ ಭಾರತ ಒಂದು ವಿಕೆಟ್ ನಷ್ಟಕ್ಕೆ ಕೇವಲ 35 ರನ್ ಗಳಿಸಲಷ್ಟೇ ಶಕ್ತವಾಯಿತು. 21 ರಿಂದ 30 ಓವರ್‌ಗಳ ಹಂತದಲ್ಲಿ ಭಾರತ ಒಂದು ವಿಕೆಟ್ ನಷ್ಟಕ್ಕೆ 37 ರನ್ ಅಷ್ಟೇ ಗಳಿಸಿತು. ಒಟ್ಟಾರೆ ಇಡೀ ಇನಿಂಗ್ಸ್‌ನಲ್ಲಿ ಭಾರತ ಕೇವಲ 13 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಗಳಿಸಿತು.

virat kohli 11

ಮಂಕಾದ ಸೂರ್ಯ
ಭಾರತದ ಬ್ಯಾಟ್ಸ್‌ಮನ್‌ಗಳು ಸ್ಕೋರ್ ಮಾಡಲು ಹೆಣಗಾಡಿದರು. ಒಂದು ಹಂತದಲ್ಲಿ 148/4 ಆಗಿತ್ತು. ವಿರಾಟ್ ಕೊಹ್ಲಿ ಕೇವಲ 63 ಎಸೆತಗಳಲ್ಲಿ 54 ರನ್ ಗಳಿಸಿ ನಿರ್ಗಮಿಸಿದರು. ಸೂರ್ಯಕುಮಾರ್ ಯಾದವ್ ಮಧ್ಯಮ ಕ್ರಮಾಂಕದಲ್ಲಿ ಕೆ.ಎಲ್.ರಾಹುಲ್ ಜೊತೆಗೂಡುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೂ, ಹಲವರಿಗೆ ಆಶ್ಚರ್ಯವಾಗುವಂತೆ ರವೀಂದ್ರ ಜಡೇಜಾ ಕ್ರೀಸ್ ಪಡೆದರು. ಆಲ್ ರೌಂಡರ್ ಭಾರತದ ರನ್ ವೇಗವನ್ನು ಹೆಚ್ಚಿಸುವ ನಿರೀಕ್ಷೆಯಿತ್ತು. ಆದರೆ ಜಡೇಜಾ 22 ಎಸೆತಗಳಲ್ಲಿ 9 ರನ್ ಗಳಿಸಿ ಪೆವಿಲಿಯನ್‌ ಸೇರಿದರು.

ಸೂರ್ಯಕುಮಾರ್ ಯಾದವ್ ಅವರನ್ನು ಬ್ಯಾಟಿಂಗ್ ಕ್ರಮಾಂಕದಲ್ಲಿ ಕಳುಹಿಸದೆ ಭಾರತವು ಅವಕಾಶವನ್ನು ಕಳೆದುಕೊಂಡಿದೆ. ಮುಂಬೈ ಬ್ಯಾಟರ್ ಮೊದಲು ಬಂದು ಅವರ ವಿಶಿಷ್ಟ ಶೈಲಿಯಲ್ಲಿ ಆಡಿದ್ದರೆ, ಭಾರತವು ಹೆಚ್ಚು ಅಸಾಧಾರಣ ಸ್ಕೋರ್ ಸಾಧಿಸಬಹುದಿತ್ತು.

suryakumar yadav 1

ಕೈಕೊಟ್ಟ ಬೌಲರ್‌ಗಳು
ಭಾರತ ತಂಡ ಫೈನಲ್‌ ಪ್ರವೇಶಿಸಲು ಬೌಲರ್‌ಗಳ ಪಾತ್ರ ಗಮನಾರ್ಹವಾಗಿತ್ತು. ಫೈನಲ್‌ ಪಂದ್ಯದಲ್ಲೂ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರ ಪೇಸ್ ಸಂಯೋಜನೆಯು ತಂಡಕ್ಕೆ ಆರಂಭಿಕ ಮುನ್ನಡೆ ಒದಗಿಸುವಲ್ಲಿ ಸಹಕಾರಿಯಾಗಬಹುದಿತ್ತು. ಆದರೆ, ನಿರ್ಣಾಯಕ ದಿನದಂದು ರೋಹಿತ್ ಶರ್ಮಾ ಅವರು ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರೊಂದಿಗೆ ಬೌಲಿಂಗ್ ತೆರೆಯಲು ನಿರ್ಧರಿಸಿದರು. ಆರಂಭಿಕ ಹಂತದಲ್ಲಿ ಇದು ಸಹಕಾರಿಯಾಗಿತ್ತು. 43 ರನ್‌ಗಳಿಗೆ ಭಾರತ 3 ವಿಕೆಟ್‌ ಕಬಳಿಸಿತ್ತು. ಆದರೆ ಮುಂದೆ ವಿಕೆಟ್‌ ಉರುಳಿಸಲು ಸಾಧ್ಯವಾಗಲಿಲ್ಲ. ಈ ಬದಲಾವಣೆಯಿಂದಾಗಿ ಸಿರಾಜ್‌ ಬೌಲಿಂಗ್‌ ಪರಿಣಾಮಕಾರಿಯಾಗಿ ಫಲಿಸಲಿಲ್ಲ. ಅಷ್ಟೇ ಅಲ್ಲದೇ ಸ್ಪಿನ್‌ ಬೌಲಿಂಗ್‌ ಸಹ ಸಹಕಾರಿಯಾಗಲಿಲ್ಲ.

india vs australia 1

ಎದುರಾಳಿ ಕಟ್ಟಹಾಕಲು ಎಡವಿದ ಟೀಂ ಇಂಡಿಯಾ
ಆರಂಭದಲ್ಲಿ ವೇಗವಾಗಿ ವಿಕೆಟ್‌ ಉರುಳಿಸಿದ ಭಾರತಕ್ಕೆ ಅನುಕೂಲಕರ ಪರಿಸ್ಥಿತಿಯನ್ನು ಬಳಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೆನ್ ಇನ್ ಬ್ಲೂ ಎದುರಾಳಿ ತಂಡದ ಮೇಲೆ ಒತ್ತಡ ಹೇರಲು ವಿಫಲವಾಯಿತು. ಟ್ರಾವಿಸ್ ಹೆಡ್ (137) ಮತ್ತು ಮಾರ್ನಸ್ ಲಬುಶನ್‌ (58) ನಾಲ್ಕನೇ ವಿಕೆಟ್‌ಗೆ 192 ರನ್‌ಗಳ ಜೊತೆಯಾಟದಲ್ಲಿ ಆಸ್ಟ್ರೇಲಿಯಾವನ್ನು ಅಪಾಯದಿಂದ ಪಾರು ಮಾಡಿದರು. ಐತಿಹಾಸಿಕ ಆರನೇ ವಿಶ್ವಕಪ್ ಪ್ರಶಸ್ತಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದರು. ಭಾರತ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡಿದ್ದರೆ ಫೈನಲ್‌ ಫಲಿತಾಂಶ ಭಿನ್ನವಾಗಿರುತ್ತಿತ್ತು.

TAGGED:India-AustraliaODI Cricket World Cup FinalRohit Sharmavirat kohliಭಾರತ-ಆಸ್ಟ್ರೇಲಿಯಾರೋಹಿತ್ ಶರ್ಮಾವಿರಾಟ್ ಕೊಹ್ಲಿವಿಶ್ವಕಪ್‌ 2023
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

MS Dhoni
Cricket

CSKಗೆ ಫ್ಯಾನ್ಸ್‌ಗೆ ಶಾಕ್‌ – ಐಪಿಎಲ್ 2026ರ ಮೊದಲೆರಡು ವಾರಗಳಲ್ಲಿ ಧೋನಿ ಆಡೋದು ಡೌಟ್

Public TV
By Public TV
4 minutes ago
NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
44 minutes ago
Bengaluru Police
Bengaluru City

ಬೆಂಗಳೂರಿಂದ ತಿರುಪತಿಗೆ ಹೋರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
45 minutes ago
Udupi Fishing 2
Districts

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Public TV
By Public TV
1 hour ago
Petrol Bunk 4
Bengaluru City

ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Public TV
By Public TV
1 hour ago
Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?