Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವಕಪ್ ಸೆಮಿ ಫೈನಲ್ : ಕ್ರೀಡಾಂಗಣ ರಂಗೇರಿಸಲಿದ್ದಾರೆ ಸೂಪರ್ ಸ್ಟಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿಶ್ವಕಪ್ ಸೆಮಿ ಫೈನಲ್ : ಕ್ರೀಡಾಂಗಣ ರಂಗೇರಿಸಲಿದ್ದಾರೆ ಸೂಪರ್ ಸ್ಟಾರ್

Cinema

ವಿಶ್ವಕಪ್ ಸೆಮಿ ಫೈನಲ್ : ಕ್ರೀಡಾಂಗಣ ರಂಗೇರಿಸಲಿದ್ದಾರೆ ಸೂಪರ್ ಸ್ಟಾರ್

Public TV
Last updated: November 15, 2023 12:50 pm
Public TV
Share
3 Min Read
rajanikanth 1 1
SHARE

ಮುಂಬೈನಲ್ಲಿ ಈ ಬಾರಿಯ ವಿಶ್ವಕಪ್‌ನ ಹಾಟ್ ಫೇವರೇಟ್ ಭಾರತ ತಂಡ (Team India) ಇಂದು ವಿಶ್ವಕಪ್‌ನ (World Cup) ಮೊದಲ ಸೆಮಿ ಫೈನಲ್‌ನಲ್ಲಿ (Semi Final) ನ್ಯೂಜಿಲೆಂಡ್ (New Zealand) ತಂಡವನ್ನು ಎದುರಿಸಲಿದೆ. ಈ ಹೈ ವೋಲ್ಟೇಸ್ ತಂಡಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಸಾಕ್ಷಿ ಆಗುತ್ತಿದ್ದಾರೆ. ಈ ಪಂದ್ಯವನ್ನು ನೋಡುವುದಕ್ಕಾಗಿಯೇ ರಜನಿಕಾಂತ್ ಮುಂಬೈಗೆ ಬಂದಿಳಿದಿದ್ದು, ಭಾರತ ತಂಡಕ್ಕೆ ಅವರು ಹುರುಪು ತುಂಬಲಿದ್ದಾರೆ.

rajanikanth

ಕಳೆದ ಬಾರಿಯ ವಿಶ್ವಕಪ್ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುವ ಮೂಲಕ ನಿರಾಸೆ ಅನುಭವಿಸಿದ್ದ ಭಾರತ ತಂಡ, ಈ ಬಾರಿ ಅದೇ ತಂಡದ ವಿರುದ್ದ ಸೆಮಿಫೈನಲ್ ಆಡುತ್ತಿದ್ದು, ಈ ಬಾರಿ ಗೆಲುವಿನ ಮೂಲಕ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

rajanikanth 4

ಏಕದಿನ ವಿಶ್ವಕಪ್ ಮಹಾ ಸಂಗ್ರಾಮ ಉಪಾಂತ್ಯಕ್ಕೆ ಬಂದಾಗಿದೆ. ಬಲಿಷ್ಠ ನಾಲ್ಕು ತಂಡಗಳ ಕಾದಾಟಕ್ಕೆ ರಣಾಂಗಣ ಕೂಡ ಸಜ್ಜಾಗಿದೆ. ಆದರೆ, ಈ ಬಾರಿಯ ಸೆಮಿಫೈನಲ್‌ನ ಮೊದಲ ಪಂದ್ಯ ಕೇವಲ ಪಂದ್ಯವಾಗಿ ಉಳಿದಿಲ್ಲ. ಬದಲಾಗಿ ಕಿವೀಸ್ ಪಡೆಯ ವಿರುದ್ಧ ಭಾರತ ತಂಡದ ಸೇಡಿನ ಸಮರವಾಗಿದೆ. ಐಸಿಸಿ (ICC) ಟೂರ್ನಿಯಲ್ಲಿ ಭಾರತ ತಂಡಕ್ಕೆ ಕಿವೀಸ್ ನೀಡಿದ ಆ ಎರಡು ಬ್ಯಾಕ್ ಟು ಬ್ಯಾಕ್ ಶಾಕ್ ಇನ್ನೂ ಕೂಡ ಭಾರತೀಯ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಅಚ್ಚಾಗಿ ಉಳಿದಿದ್ದು, ಈ ಬಾರಿಯ ವಿಶ್ವಕಪ್ ಸೆಮಿಸ್‌ನಲ್ಲಿ ಮುಯ್ಯಿ ತೀರಿಸಿಕೊಳ್ಳುವ ಮೂಲಕ ಟೀಂ ಇಂಡಿಯಾ ಕೂಡ ಹಳೇ ನೋವು ಮರೆಸುವ ನಿಟ್ಟಿನಲ್ಲಿ ಸಜ್ಜಾಗಿದೆ.

IND NZ

2019ರ ವಿಶ್ವಕಪ್ ಸೆಮಿಫೈನಲ್ ಪಂದ್ಯ ಭಾರತೀಯರು ಇಂದಿಗೂ ಆ ಸೋಲಿನ ನೋವು ಮರೆತಿಲ್ಲ. 2019ರಲ್ಲಿ ಇಂಗ್ಲೆಂಡ್ ನೆಲದಲ್ಲಿ ಟೀಮ್ ಇಂಡಿಯಾವನ್ನು ಮಣಿಸಿದ್ದ ನ್ಯೂಜಿಲೆಂಡ್, ಕೋಟ್ಯಂತರ ಅಭಿಮಾನಿಗಳ ಕನಸು ನುಚ್ಚುನೂರು ಮಾಡಿತ್ತು. ಇದಕ್ಕೆಲ್ಲಾ ಕಾರಣ ಧೋನಿಯ (MS Dhoni) ಆ ಒಂದೇ ಒಂದು ರನೌಟ್. ಆ ಪಂದ್ಯದಲ್ಲಿ ಕೊನೆಯ ಓವರ್‌ಗಳಲ್ಲಿ ಎಡವಿದ್ದ ಭಾರತ ತಂಡ ಸೆಮಿಸ್‌ನಲ್ಲಿ ಸೋಲುವ ಮೂಲಕ ಮೂರನೇ ಬಾರಿ ಪ್ರಶಸ್ತಿ ಗೆಲ್ಲುವ ಕನಸು ಕನಸಾಗೇ ಉಳಿದಿತ್ತು. ಕ್ರಿಕೆಟ್ ಪ್ರೇಮಿಗಳಿಗೆ ಈ ನೋವು ಮಾಸುವ ಮುನ್ನವೇ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲೂ ಕೂಡ ಭಾರತಕ್ಕೆ ನ್ಯೂಜಿಲೆಂಡ್ ಶಾಕ್ ನೀಡಿ ಚಾಂಪಿಯನ್ ಆಗಿ ಗೆದ್ದು ಬೀಗಿತ್ತು. ಆ ಎರಡು ಸೋಲುಗಳಿಗೆ ಇಂದು ಮುಯ್ಯಿ ತೀರಿಸಿಕೊಳ್ಳುವ ಸಮಯ ಬಂದಿದ್ದು, ಟೀ ಇಂಡಿಯಾ ಕೂಡ ಭರ್ಜರಿ ತಯಾರಿ ನಡೆಸಿದೆ.

team india 2011 world Cup Cricket

ಇನ್ನೂ ಐಸಿಸಿ ವಿಶ್ವಕಪ್ 2023ರಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಹೋಲಿಸಿದರೆ ಭಾರತ ಬಲಿಷ್ಠ ತಂಡವೇ ಆಗಿದೆ. ಆದರೆ ಉಭಯ ತಂಡಗಳ ವಿಶ್ವಕಪ್ ಮುಖಾಮುಖಿಯಲ್ಲಿ ಕಿವೀಸ್ ಬಲಿಷ್ಠವಾಗಿದೆ. 2003ರ ವಿಶ್ವಕಪ್‌ನಲ್ಲಿ ಕಿವೀಸ್ ವಿರುದ್ಧ ಭಾರತ ಕೊನೆಯ ಬಾರಿಗೆ ಜಯ ಸಾಧಿಸಿತ್ತು. ಆ ಬಳಿಕ 2007, 2011 ಮತ್ತು 2015ರ ವಿಶ್ವಕಪ್ ಆವೃತ್ತಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಆಡಿರಲಿಲ್ಲ. ಒಟ್ಟು 10 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಐದು ಪಂದ್ಯಗಳನ್ನು ಗೆದ್ದರೆ ಭಾರತ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಟೈ ಆಗಿದೆ. ಆದರೆ ಕ್ರಿಕೆಟ್ ಪಂಡಿತರ ಪ್ರಕಾರ ಈ ಅಂಕಿ ಅಂಶ ಈ ಬಾರಿ ದೊಡ್ಡ ಮಟ್ಟಿಗೆ ವರ್ಕೌಟ್ ಆಗಿಲ್ಲ ಅನ್ನೋದು ಅವರ ಲೆಕ್ಕಾಚಾರ.

 

ಇನ್ನೂ ಈಗಾಗಲೇ ಅಜೇಯವಾಗಿ ಉಪಾಂತ್ಯಕ್ಕೆ ತಲುಪಿರೋ ಟೀ ಇಂಡಿಯಾ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಮೂರು ವಿಭಾಗದಲ್ಲೂ ಬಲಿಷ್ಠವಾಗಿಯೇ ಇದೆ. ಜೊತೆಗೆ ಈಗಾಗಲೇ ಕಳೆದ ಪಂದ್ಯಗಳಲ್ಲಿ ಆಡಿದ್ದ 11ರ ಬಳಗದಲ್ಲಿ ಕಾಣಿಸಿಕೊಂಡಿದ್ದ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದು, ಹೀಗಾಗಿ ಇವತ್ತಿನ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಬಹುತೇಕ ಬದಲಾವಣೆ ಸಾಧ್ಯತೆ ಕಡಿಮೆ ಇದೆ. ಇತ್ತ ನ್ಯೂಜಿಲೆಂಡ್ ಕೂಡ ಲೀಗ್ ಹಂತದ ಕೊನೆಯ ಪಂದ್ಯಗಳಲ್ಲಿ ಕೊಂಚ ಎಡವಿತ್ತು. ಆದರೆ ಸೆಮಿಸ್‌ಗೆ ಬರುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಇಂದು ಮುಂಬೈನ (Mumbai) ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ನಡೆಯಲಿರುವ ಪಂದ್ಯದಲ್ಲಿ ಬಲಿಷ್ಠ ಭಾರತವನ್ನು ಎದುರಿಸಲು ಕಿವೀಸ್ ಕೂಡ ಉತ್ತಮ ಸ್ಟ್ರಾಟಜಿಯೊಂದಿಗೆ ಕಣಕ್ಕಿಳಿಯಲಿದೆ

TAGGED:cricketindianew zealandrajinikanthಕ್ರಿಕೆಟ್ನ್ಯೂಜಿಲೆಂಡ್ಭಾರತರಜನಿಕಾಂತ್
Share This Article
Facebook Whatsapp Whatsapp Telegram

Cinema news

Kichcha Sudeep Mark
ತ್ರಿಶೂಲ ಹಿಡಿದು ಬಂದ ನಟ ಕಿಚ್ಚ ಸುದೀಪ್
Cinema Latest Sandalwood Top Stories
45 Movie
ಕರುನಾಡಲ್ಲಿ `45’ ಸಿನಿಮಾ ಅಬ್ಬರ: ಅಡ್ವಾನ್ಸ್‌ ಬುಕ್ಕಿಂಗ್ ಭರ್ಜರಿ ಜೋರು
Cinema Latest Sandalwood Top Stories
Vijay Deverakondas next titled Rowdy Janardhana
ವಿಜಯ್‌ ದೇವರಕೊಂಡ ನಟನೆಯ ರೌಡಿ ಜನಾರ್ದನ ಟೈಟಲ್ ಗ್ಲಿಂಪ್ಸ್ ರಿಲೀಸ್
Cinema Latest South cinema
prakash raj
ಜ.29-ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ
Bengaluru City Cinema Districts Karnataka Latest Sandalwood Top Stories

You Might Also Like

Byrati Basavaraj a
Bengaluru City

ಶಾಸಕ ಬೈರತಿ ಬಸವರಾಜ್‌ಗೆ ಶಾಕ್‌ – ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
36 minutes ago
b.k.hariprasad mohan bhagwat
Latest

ಮೋಹನ್ ಭಾಗವತ್ ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ: ಹಿಂದೂ ರಾಷ್ಟ್ರ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು

Public TV
By Public TV
50 minutes ago
ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಮೈದಾನದಲ್ಲಿ ರಿಷಬ್‌ ಪಂತ್‌ ಮತ್ತು ವಿರಾಟ್‌ ಕೊಹ್ಲಿ
Bengaluru City

ಬೆಂಗಳೂರಿನಲ್ಲೇ ಕೊಹ್ಲಿ ಆಡಲಿದ್ದಾರೆ, ಆದ್ರೆ ಚಿನ್ನಸ್ವಾಮಿಯಲ್ಲಿ ಅಲ್ಲ!

Public TV
By Public TV
1 hour ago
Vince Zampella
Latest

ಭೀಕರ ರಸ್ತೆ ಅಪಘಾತ – `Call Of Duty’ ಗೇಮ್ ತಯಾರಕ ವಿನ್ಸ್ ಜಾಂಪೆಲ್ಲಾ ನಿಧನ

Public TV
By Public TV
2 hours ago
bjp flag
Bengaluru City

ದ್ವೇಷ ಭಾಷಣ ಮಸೂದೆ ವಾಪಸ್‌ಗೆ ಒತ್ತಾಯ – ಬಿಜೆಪಿಯಿಂದ ಮೌನ ಪ್ರತಿಭಟನೆ, ಡಿಸಿಗೆ ಮನವಿ

Public TV
By Public TV
2 hours ago
Shobha Karandlaje
Kalaburagi

ಕಾಂಗ್ರೆಸ್‌ಗೆ ಹೈಕಮಾಂಡ್ ಯಾರು? ಸಿದ್ದರಾಮಯ್ಯನಾ or ಹೈಕಮಾಂಡ್ ನಾಯಕರೇ?: ಶೋಭಾ ಕರಂದ್ಲಾಜೆ ವ್ಯಂಗ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?