Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಣ್ಣಿನ ಸವಕಳಿಯನ್ನು ತಡೆಗಟ್ಟಿ, ಉತ್ಪಾದಕತೆ ಹೆಚ್ಚಿಸಿ: ಬಿ.ಸಿ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಣ್ಣಿನ ಸವಕಳಿಯನ್ನು ತಡೆಗಟ್ಟಿ, ಉತ್ಪಾದಕತೆ ಹೆಚ್ಚಿಸಿ: ಬಿ.ಸಿ ಪಾಟೀಲ್

Bengaluru City

ಮಣ್ಣಿನ ಸವಕಳಿಯನ್ನು ತಡೆಗಟ್ಟಿ, ಉತ್ಪಾದಕತೆ ಹೆಚ್ಚಿಸಿ: ಬಿ.ಸಿ ಪಾಟೀಲ್

Public TV
Last updated: December 5, 2021 10:50 am
Public TV
Share
2 Min Read
BC PATIL 768x491 1
SHARE

-ಮಣ್ಣು ಅಳಿದರೆ ಮಾನವ ಅಳಿದಂತೆ

-ಡಿಸೆಂಬರ್ 5 ಅಂತರಾಷ್ಟ್ರೀಯ ಮಣ್ಣು ದಿನ

ಬೆಂಗಳೂರು: ಮಣ್ಣಿನಿಂದ ಜೀವ, ಮಣ್ಣಿನಿಂದ ಕಾಯ, ಮಣ್ಣು ಅಳಿದರೆ ಮಾನವ ಅಳಿದಂತೆ. ಮಣ್ಣು ಒಮ್ಮೆ ನಾಶವಾದರೆ, ಪುನಃ ಪಡೆಯಲಾಗದ ಅಮೂಲ್ಯ ಸಂಪತ್ತಾಗಿರುವುದರಿಂದ ಇದನ್ನು ಉಳಿಸಲೇಬೇಕಾದ ಮಹತ್ತರ ಜವಾಬ್ದಾರಿ ಹಾಗೂ ಕರ್ತವ್ಯ ಪ್ರತಿಯೊಬ್ಬರದ್ದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

Contents
  • -ಮಣ್ಣು ಅಳಿದರೆ ಮಾನವ ಅಳಿದಂತೆ
  • -ಡಿಸೆಂಬರ್ 5 ಅಂತರಾಷ್ಟ್ರೀಯ ಮಣ್ಣು ದಿನ

SOIL

ಮಣ್ಣು ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಧ್ಯೇಯವಾಕ್ಯದೊಂದಿಗೆ ಈ ದಿನ ಆಚರಣೆಗೊಳ್ಳುತ್ತದೆ. ವಿಶ್ವ ಮಣ್ಣು ದಿನ-5 ಡಿಸೆಂಬರ್ 2021ರ ಧ್ಯೇಯ ‘ಮಣ್ಣಿನ ಸವುಳಾಗುವಿಕೆಯನ್ನು ತಡೆಗಟ್ಟಿ, ಮಣ್ಣಿನ ಉತ್ಪಾದಕತೆ ಹೆಚ್ಚಿಸಿ’ ಎಂದು ಘೋಷಿಸಿದೆ. ಮಣ್ಣು ಪ್ರಕೃತಿಯ ಒಂದು ಅಮೂಲ್ಯ ಕೊಡುಗೆ. ಮನುಷ್ಯ , ಪ್ರಾಣಿ, ಜೀವಿಗಳು, ಸಸ್ಯಗಳಿಗೆ ಆಧಾರವೇ ಮಣ್ಣು. ಮಣ್ಣಿನಿಂದ ಜೀವ, ಮಣ್ಣಿನಿಂದ ಕಾಯ, ಮಣ್ಣು ಅಳಿದರೆ ಮಾನವ ಅಳಿದಂತೆ ಎಂದು ತಿಳಿಸಿದ ಪುರಂದರದಾಸರ ಮಾರ್ಮಿಕ ನಿಲುವು ನಿತ್ಯ ಸತ್ಯವಾಗಿದೆ. ಇದನ್ನೂ ಓದಿ: ಇಂಡೋನೇಷ್ಯಾ: ಜ್ವಾಲಾಮುಖಿ ಸ್ಫೋಟದಿಂದ 13 ಮಂದಿ ಸಾವು

ಜಗತ್ತಿನ ಶೇ. 95 ರಷ್ಟು ಆಹಾರ ಮಣ್ಣಿನಿಂದಲೇ ದೊರಕುವುದು. ಈಗಾಗಲೇ ಶೇ.33 ರಷ್ಟು ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಡಿರುವುದು ಕಂಡುಬಂದಿರುವುದರಿಂದ ಉತ್ಪಾದಕತೆಯಲ್ಲಿ ಶೇ.17 ರಷ್ಟು ಕಡಿಮೆಯಾಗಿದೆ. ಮಣ್ಣು ಒಮ್ಮೆ ನಾಶವಾದರೆ, ಪುನಃ ಪಡೆಯಲಾಗದ ಅಮೂಲ್ಯ ಸಂಪತ್ತು. ಸಸ್ಯ ಸೇರಿದಂತೆ ಸಕಲ ಜೀವಿಗಳಿಗೆ ಜೀವವಾಗಿದೆ. ಮಣ್ಣಿನ ಫಲವತ್ತತೆ ಪೋಷಕಾಂಶಗಳು ಮಾತ್ರವಲ್ಲ, ಅನುಕೂಲಕರ ಜೀವಿಗಳು, ನೀರು ಹಾಗೂ ಗಾಳಿಯ ಸಂಬಂದಗಳನ್ನು ಒಳಗೊಂಡಿದೆ. ಸಜೀವ ಮಣ್ಣು ಸಕಲ ಜೀವಿಗಳಿಗೆ ಆಹಾರ, ಮೇವು, ವಸತಿ, ಇಂಧನ ಇತ್ಯಾದಿ ಒದಗಿಸುತ್ತಿದೆ. ಮಳೆ ನೀರನ್ನು ಸಂಗ್ರಹಿಸಿ ಶುದ್ಧ ಮಾಡುತ್ತದೆ. ಸಾವಯವ ವಸ್ತುವನ್ನು ಪೋಷಕಾಂಶಗಳಾಗಿ ಬದಲಿಸುತ್ತದೆ. ಪ್ರವಾಹಗಳನ್ನು ಹಾಗೂ ಹವಾಮಾನ ಏರುಪೇರನ್ನು ತಡೆಯುತ್ತದೆ. ಭೂಮಿ ಮೇಲಿನ ಜೀವ ಜಂತುಗಳಿಗೆ ಆಶ್ರಯ ನೀಡುತ್ತದೆ. ಆದ್ದರಿಂದ ಮಣ್ಣಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ತಮಿಳುನಾಡಲ್ಲಿ ಸರ್ಕಾರಿ ನೌಕರಿಗೆ ತಮಿಳು ಕಡ್ಡಾಯ

ಮಣ್ಣೇ ಹೊನ್ನು, ಸಕಲ ಜೀವರಾಶಿಗೂ ಮಣ್ಣೇ ಆಧಾರ.

ಅನ್ನದಾತರ ಜೀವನಾಡಿಯಾದ ಮಣ್ಣಿನ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. #WorldSoilDay pic.twitter.com/oizxGh2k50

— B C Patil (@bcpatilkourava) December 5, 2021

ಅಂತರಾಷ್ಟ್ರೀಯ ಮಟ್ಟದಲ್ಲಿ ಮಣ್ಣಿನ ದಿನವನ್ನು ಆಚರಿಸುವಂತೆ ಅಂತಾರಾಷ್ಟ್ರೀಯ ಮಣ್ಣು ವಿಜ್ಞಾನ ಸಂಸ್ಥೆ 2002ರಲ್ಲೇ ಶಿಫಾರಸು ಮಾಡಿದ್ದು, ನಂತರ 5 ಡಿಸೆಂಬರ್ 2014 ರಂದು ಮೊದಲ ಬಾರಿಗೆ ಅಧಿಕೃತವಾಗಿ ಅಂತರಾಷ್ಟ್ರೀಯ ಮಣ್ಣು ದಿನವನ್ನು ಆಚರಿಸಲಾಯಿತು. ಮಣ್ಣಿನ ಸವಕಳಿ, ರಾಸಾಯನಿಕ ಗೊಬ್ಬರದ ಅಸಮತೋಲನ ಬಳಕೆಯಿಂದ ಮಣ್ಣಿನ ಭೌತಿಕ, ರಾಸಾಯನಿಕ ಮತ್ತು ಜೈವಿಕ ಲಕ್ಷಣಗಳು ನಾಶವಾಗುತ್ತಿದೆ. ಮಣ್ಣಿನಲ್ಲಿ ಸವುಳು, ಜವುಳು, ಆಮ್ಲ ಮತ್ತು ಕ್ಷಾರಮಯ ವಾಗಿ ಬೆಳೆಗಳ ಉತ್ಪಾದನೆ ಕುಂಠಿತವಾಗುತ್ತಿದೆ. ಕರಗುವ ಲವಣಗಳನ್ನು ಭೂಮಿಯಲ್ಲಿ ಉಳಿಸಿಕೊಂಡಾಗ ಮಣ್ಣಿನ ಸವುಳು ಸಂಭವಿಸುತ್ತದೆ. ಇದು ನೈಸರ್ಗಿಕವಾಗಿ ಅಥವಾ ಅನುಚಿತ ಮಾನವ ಚಟುವಟಿಕೆಗಳಿಂದ, ವಿಶೇಷವಾಗಿ ಕೃಷಿ ಪದ್ಧತಿಗಳಿಂದ ಸಂಭವಿಸುತ್ತದೆ. ಇದಲ್ಲದೆ, ಕಡಿಮೆ ಉಪ್ಪು ಕರಗುವಿಕೆಯಿಂದಾಗಿ ಕೆಲವು ಭೂಮಿಗಳು ಆರಂಭದಲ್ಲಿ ಚೌಳಾಗುತ್ತದೆ ಆದ್ದರಿಂದ ಕೃಷಿಕರು ಮಣ್ಣು ಸವುಳಾಗುವುದನ್ನು ತಪ್ಪಿಸುವುದನ್ನು ಗಮನದಲ್ಲಿಟ್ಟುಕೊಂಡೇ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಬೇಕು. ಮಣ್ಣು ಸವಕಳಿ ತಪ್ಪಿಸಲು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದಾಗಿದೆ ಎಂದು ಮಾಹಿತಿ ಹಂಚಿಕೊಂಡರು.

TAGGED:BC Patilfarmerssoilಬಿ.ಸಿ. ಪಾಟೀಲ್ಮಣ್ಣುರೈತರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
22 minutes ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
1 hour ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
1 hour ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
2 hours ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
3 hours ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?